3:33 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಕುಮಟಾದಲ್ಲಿ ನಡೆದ ಪೊಲೀಸ್ ದೌರ್ಜನ್ಯಕ್ಕೊಳಗಾದ ಕೊರಗ ಕುಟುಂಬದ ವಿವಾಹ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ

30/12/2021, 18:55

ಕುಮಟಾದಲ್ಲಿ(reporterkarnataka.com):

ರಾಜ್ಯಾದ್ಯಂತ ಭಾರಿ ವಿವಾದ ಸೃಷ್ಟಿಸಿದ   ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪೋಲೀಸ್ ದೌರ್ಜನ್ಯಕ್ಕೊಳಗಾದ ಕೀರ್ತಿ ಕುಟುಂಬದ ವಿವಾಹ ಸಮಾರಂಭದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಭಾಗವಹಿಸಿ ದೌರ್ಜನ್ಯಕ್ಕೊಳಗಾದ ಕುಟುಂಬಕ್ಕೆ ನ್ಯಾಯ ಒದಗಿಸುವ ಭರವಸೆ ನೀಡಿದರು.

ದೌರ್ಜನ್ಯಕ್ಕೊಳಗಾದ ಕೊರಗ ಕುಟುಂಬದ ಯುವಕನ ಮದುವೆಯು ಉತ್ತರ ಕನ್ನಡ ಜಿಲ್ಲೆಯ ಕುಮಟದಲ್ಲಿ ಇಂದು ನಡೆಯಿತು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಹಬ್ಬಳ್ಳಿಯಿಂದ ನೇರವಾಗಿ ಕುಮಟಾಕ್ಕೆ ಆಗಮಿಸಿ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡು ನವ ವಧು- ವರರನ್ನು ಆಶೀರ್ವದಿಸಿದರು.

ಕೋಟದವರಾದ ಸಚಿವರು ಈ ಸಂದರ್ಭದಲ್ಲಿ ಮಾತನಾಡಿ, ಈ ಕೇರಿಯನ್ನು ನಾನು ಹತ್ತಿರದಿಂದ ಕಂಡಿದ್ದೇನೆ, ಅವರೆಲ್ಲರ ಆತ್ಮೀಯತೆಯನ್ನು ಗಳಿಸಿದ್ದೇನೆ. ನನ್ನೂರ ಭಾಗದಲ್ಲಿ ಇರುವಂತಹ ಏಕೈಕ ಕೊರಗರ ಕೇರಿ ಇದಾಗಿದೆ. ಈ ಮುಗ್ಧ ಜನರ ಮೇಲೆ ಹಲ್ಲೆ ನಡೆದದ್ದು ನೋವಿನ ಸಂಗತಿ ಎಂದರು.
ಸಚಿವರು ಸಂತ್ರಸ್ತ ಕುಟುಂಬದವರ ಮನೆಗೆ ಭೇಟಿ ನೀಡಿ ಸಾಂತ್ವನ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು