6:17 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಬಲವಂತದ ಮದುವೆಗೆ ಯುವತಿಯ ಅಪಹರಣ: 3 ಮಂದಿಯ ಸೆರೆ; ನ್ಯಾಯಾಲಯಕ್ಕೆ ಹಾಜರು 

31/12/2021, 22:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಯುವಕನೊಬ್ಬನಿಗೆ ಮದುವೆ ಮಾಡಿಸುವ ದುರುದ್ದೇಶದಿಂದ ಯುವತಿಯೊಬ್ಬಳನ್ನು ಸಿನಿಮೀಯ ರೀತಿಯಲ್ಲಿ ಅಪಹರಿಸಿದ್ದು, ಕಡೂರು ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ .

ತಾಲೂಕಿನ ಮರಡಿಹಳ್ಳಿಯ ಮಲ್ಲೇಶ್(೨೬), ಎಸ್.ಜಿ.ಕೊಪ್ಪಲಿನ ಪರಮೇಶ್ (೩೦) ಮತ್ತು ಕುರುಬಗೆರೆಯ ಮಹಾಂತೇಶ್(೨೭)  ಈ ಘಟನೆಯಲ್ಲಿ ಬಂಧಿತರಾಗಿದ್ದು ಅಪಹರಣಕ್ಕೊಳಗಾಗಿದ್ದ ಯುವತಿಯನ್ನು ರಕ್ಷಿಸಿದ್ದಾರೆ.  

ಘಟನೆ ವಿವರ : ಡಿ.೨೭ ರ ಬೆಳಗಿನ ಜಾವ ಸುಮಾರು ೪.೧೫ಕ್ಕೆ ಮರಡಿಹಳ್ಳಿ ವಾಸಿ ಓಂಕಾರಪ್ಪ ಪತ್ನಿ ಅಮ್ಮಯ್ಯ  ತಮ್ಮ ೧೭ ವರ್ಷದ ಮಗಳೊಂದಿಗೆ ಜಮೀನಿನಲ್ಲಿ ಕುಂಬಳಕಾಯಿ ಹೂ ಪರಾಗಸ್ಪರ್ಶ ಮಾಡಿಸಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ .

ಮರಡಿಹಳ್ಳಿ ಮತ್ತು ಕಡೂರಹಳ್ಳಿ ಟಾರ್ ರಸ್ತೆಯಲ್ಲಿ ಬೊಲೆರೊ ವಾಹನ ಒಂದು ಹಿಂದಿನಿಂದ ಬಂದು ಓಂಕಾರಪ್ಪ ಮತ್ತು ಅಮ್ಮಯ್ಯ ಅವರಿಗೆ ವಾಹನದಲ್ಲಿದ್ದ ವ್ಯಕ್ತಿಗಳು ಥಳಿಸಿ ಅವರ ಮಗಳನ್ನು ಅಪಹರಿಸಿದ್ದಾರೆ.

ವಾಹನದಲ್ಲಿ ಗೋವಿಂದಪ್ಪ,ಪರಮೇಶ್, ಸಣ್ಣೆಗೌಡ ಬಂದಿದ್ದರೆಂದು ಓಂಕಾರಪ್ಪ  ಗುರುತು ಹಿಡಿದಿದ್ದು ಈ ಅಪಹರಣ ಸಂದರ್ಭ ಅಲ್ಲೇ ಹೊಲದಲ್ಲಿ ಅಡಗಿ ಕುಳಿತಿದ್ದ ೩-೪ ಜನ ಅಪಹರಣಕಾರರೊಂದಿಗೆ ಕೈಜೋಡಿಸಿದ್ದಾರೆ.

 ತನಗೆ ಹಾಗೂ ಪತ್ನಿಯ ಕೈಕಾಲುಗಳಿಗೆ ತೀವ್ರ ಪೆಟ್ಟಾಗಿದೆ ಎಂದು  ತಿಳಿಸಿರುವ  ಓಂಕಾರಪ್ಪ ಈ ಘಟನೆಯಲ್ಲಿ ಗ್ರಾಮದ ಮಲ್ಲೇಶ್ ಮತ್ತು ಮಾರುತಿ ಅವರ ಕೈವಾಡವಿದೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ದೂರು ನೀಡಿದ ಬಳಿಕ ಕಾರ್ಯ ಪ್ರವೃತ್ತರಾದ ಕಡೂರು ಪೊಲೀಸರು ಬಂಧಿತ ಆರೋಪಿ ಮಹಂತೇಶ್ , ಸಂಬಂಧಿ ಎಮ್ಮೆದೊಡ್ಡಿ ಭಾಗದ ಸಗಣಿಬಸವನಹಳ್ಳಿ ಗ್ರಾಮದ ಗುರುಸ್ವಾಮಿ  ಮನೆಯಲ್ಲಿ ಯುವತಿಯನ್ನು ಪತ್ತೆ ಮಾಡಿದ್ದಾರೆ.

ಯುವತಿಯನ್ನು ವೈದೈಕೀಯ ಪರೀಕ್ಷೆ ಬಳಿಕ ಪೋಷಕರಿಗೆ ಒಪ್ಪಿಸಲಾಗಿದೆ.

ಬಂಧಿತರಲ್ಲಿ ಓರ್ವನಾದ  ಪರಮೇಶ್ ಕೆಲವು ತಿಂಗಳ ಹಿಂದೆ ಯುವತಿಯನ್ನು ಮದುವೆ ಮಾಡಿಕೊಡಿ ಎಂದು ಪ್ರಸ್ತಾಪಿದ್ದು,  ಪಾಲಕ ಓಂಕಾರಪ್ಪ ಇದನ್ನು ತಿರಸ್ಕರಿಸಿದ್ದು ಈ ಹಿನ್ನೆಲೆಯಲ್ಲಿ ಯುವತಿಯನ್ನು ಅಪಹರಿಸಲಾಗಿದೆ ಎಂಬ ಅಂಶ ಪೊಲೀಸರ ಪ್ರಾಥಮಿಕ ತನಿಖೆಯಿಂದ ಹೊರಬಿದ್ದಿದೆ.

ಆರೋಪಿಗಳನ್ನು ಕಡೂರು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು