9:08 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡುವ ಮುಖ್ಯಮಂತ್ರಿ ನಿರ್ಧಾರ ಸ್ವಾಗತಾರ್ಹ: ಬಿಜೆಪಿ ರಾಜ್ಯಾಧ್ಯಕ್ಷ 

03/01/2022, 22:13

ಮಂಗಳೂರು(reporterkarnataka.com):

ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡುವ ಮುಖ್ಯಮಂತ್ರಿ ಬೊಮ್ಮಾಯಿಯವರ ನಿರ್ಧಾರ ಸ್ವಾಗತಾರ್ಹ. ಇದು ರಾಜ್ಯದ ಹಿಂದೂಗಳ ಭಾವನೆ ಆಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಮಂಗಳೂರಿನಲ್ಲಿ ಸೋಮವಾರ ಮಾಧ್ಯಮ ಜತೆ ಮಾತನಾಡಿದ ಅವರು, ಸರ್ಕಾರದ ಹಸ್ತಕ್ಷೇಪ ಇರದೇ, ಅಲ್ಲಿನ ಅಭಿವೃದ್ಧಿ ಅಲ್ಲೇ ಆಗಬೇಕಾಗಿದೆ.

ಆದರೆ ಕಾಂಗ್ರೆಸ್ ಈ ವಿಚಾರದಲ್ಲಿ ರಾಜಕಾರಣ ಮಾಡ್ತಿದೆ, ಕಾಂಗ್ರೆಸ್ ಹಿಂದೂ ವಿರೋಧಿ ನೀತಿ ಹೊಂದಿದೆ ಎಂದು ಟೀಕಿಸಿದರು.

ಮತಾಂತರ ಕಾಯ್ದೆ, ಸಿಎಎ ಕಾಯ್ದೆ, ಈಗ ದೇವಸ್ಥಾನ ಸ್ವಾಯತ್ತೆಗೂ ವಿರೋಧ ವ್ಯಕ್ತಪಡಿಸುತ್ತಿದೆ. ಅಲ್ಪಸಂಖ್ಯಾತ ಮತಕ್ಕಾಗಿ ಹಿಂದೂ ಸಮಾಜಕ್ಕೆ ಕಾಂಗ್ರೆಸ್ ದ್ರೋಹ ಬಗೆಯುತ್ತಿದೆ.ಕಾಂಗ್ರೆಸ್ ಗೆ ಹಿಂದೂ ಧರ್ಮ, ಹಿಂದೂ ಜನರ ಮೇಲೆ ನಂಬಿಕೆ ಇಲ್ಲ ಎಂದರು.

ಬೊಮ್ಮಾಯಿ ನಿರ್ಧಾರ ಸರಿ ಇದೆ, ಎಲ್ಲಾ ಮಠಾಧೀಪತಿಗಳು, ದೇವಸ್ಥಾನದವರು ಇದನ್ನ ಸ್ವಾಗತಿಸಿದ್ದಾರೆ. ಮತಾಂತರ ಮತ್ತು ದೇವಸ್ಥಾನ ವಿಚಾರದಲ್ಲಿ ಸರ್ಕಾರದ ನಿರ್ಧಾರ ನಾನು ಸ್ವಾಗತಿಸುತ್ತೇನೆ ಎಂದು ಅವರು ನುಡಿದರು.

ಸಿದ್ದರಾಮಯ್ಯ ಟೀಕೆ ಮಾಡ್ತಿದಾರೆ, ಆದ್ರೆ ಟಿಪ್ಪು ಜಯಂತಿ ಯಾರ ಓಲೈಕೆಗೆ ಮಾಡಿದ್ದು? ಶಾದಿ ಭಾಗ್ಯ ಯೋಜನೆಯಲ್ಲೂ ಅಲ್ಪಸಂಖ್ಯಾತರನ್ನ ಹುಡುಕಿ ಮತೀಯ ಭಾವನೆ ತಂದಿದ್ದಾರೆ. ಕಾಂಗ್ರೆಸ್ ಸಂಪೂರ್ಣ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಅಹಿಂದ ಚಳುವಳಿ ಮಾಡಿದ್ರಿ, ಆದ್ರೆ ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ, ಪುಟ್ಟಪ್ಪ ಸತ್ತಾಗ ಏನ್ ಮಾಡಿದ್ರಿ? ಕಾಂಗ್ರೆಸ್ ನ ಈ ವಿರೋಧಿ ಧೋರಣೆಯನ್ನ ಹಿಂದೂ ಸಮಾಜ‌ ತಿರಸ್ಕರಿಸುತ್ತೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು