5:27 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡುವ ಮುಖ್ಯಮಂತ್ರಿ ನಿರ್ಧಾರ ಸ್ವಾಗತಾರ್ಹ: ಬಿಜೆಪಿ ರಾಜ್ಯಾಧ್ಯಕ್ಷ 

03/01/2022, 22:13

ಮಂಗಳೂರು(reporterkarnataka.com):

ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡುವ ಮುಖ್ಯಮಂತ್ರಿ ಬೊಮ್ಮಾಯಿಯವರ ನಿರ್ಧಾರ ಸ್ವಾಗತಾರ್ಹ. ಇದು ರಾಜ್ಯದ ಹಿಂದೂಗಳ ಭಾವನೆ ಆಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಮಂಗಳೂರಿನಲ್ಲಿ ಸೋಮವಾರ ಮಾಧ್ಯಮ ಜತೆ ಮಾತನಾಡಿದ ಅವರು, ಸರ್ಕಾರದ ಹಸ್ತಕ್ಷೇಪ ಇರದೇ, ಅಲ್ಲಿನ ಅಭಿವೃದ್ಧಿ ಅಲ್ಲೇ ಆಗಬೇಕಾಗಿದೆ.

ಆದರೆ ಕಾಂಗ್ರೆಸ್ ಈ ವಿಚಾರದಲ್ಲಿ ರಾಜಕಾರಣ ಮಾಡ್ತಿದೆ, ಕಾಂಗ್ರೆಸ್ ಹಿಂದೂ ವಿರೋಧಿ ನೀತಿ ಹೊಂದಿದೆ ಎಂದು ಟೀಕಿಸಿದರು.

ಮತಾಂತರ ಕಾಯ್ದೆ, ಸಿಎಎ ಕಾಯ್ದೆ, ಈಗ ದೇವಸ್ಥಾನ ಸ್ವಾಯತ್ತೆಗೂ ವಿರೋಧ ವ್ಯಕ್ತಪಡಿಸುತ್ತಿದೆ. ಅಲ್ಪಸಂಖ್ಯಾತ ಮತಕ್ಕಾಗಿ ಹಿಂದೂ ಸಮಾಜಕ್ಕೆ ಕಾಂಗ್ರೆಸ್ ದ್ರೋಹ ಬಗೆಯುತ್ತಿದೆ.ಕಾಂಗ್ರೆಸ್ ಗೆ ಹಿಂದೂ ಧರ್ಮ, ಹಿಂದೂ ಜನರ ಮೇಲೆ ನಂಬಿಕೆ ಇಲ್ಲ ಎಂದರು.

ಬೊಮ್ಮಾಯಿ ನಿರ್ಧಾರ ಸರಿ ಇದೆ, ಎಲ್ಲಾ ಮಠಾಧೀಪತಿಗಳು, ದೇವಸ್ಥಾನದವರು ಇದನ್ನ ಸ್ವಾಗತಿಸಿದ್ದಾರೆ. ಮತಾಂತರ ಮತ್ತು ದೇವಸ್ಥಾನ ವಿಚಾರದಲ್ಲಿ ಸರ್ಕಾರದ ನಿರ್ಧಾರ ನಾನು ಸ್ವಾಗತಿಸುತ್ತೇನೆ ಎಂದು ಅವರು ನುಡಿದರು.

ಸಿದ್ದರಾಮಯ್ಯ ಟೀಕೆ ಮಾಡ್ತಿದಾರೆ, ಆದ್ರೆ ಟಿಪ್ಪು ಜಯಂತಿ ಯಾರ ಓಲೈಕೆಗೆ ಮಾಡಿದ್ದು? ಶಾದಿ ಭಾಗ್ಯ ಯೋಜನೆಯಲ್ಲೂ ಅಲ್ಪಸಂಖ್ಯಾತರನ್ನ ಹುಡುಕಿ ಮತೀಯ ಭಾವನೆ ತಂದಿದ್ದಾರೆ. ಕಾಂಗ್ರೆಸ್ ಸಂಪೂರ್ಣ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಅಹಿಂದ ಚಳುವಳಿ ಮಾಡಿದ್ರಿ, ಆದ್ರೆ ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ, ಪುಟ್ಟಪ್ಪ ಸತ್ತಾಗ ಏನ್ ಮಾಡಿದ್ರಿ? ಕಾಂಗ್ರೆಸ್ ನ ಈ ವಿರೋಧಿ ಧೋರಣೆಯನ್ನ ಹಿಂದೂ ಸಮಾಜ‌ ತಿರಸ್ಕರಿಸುತ್ತೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು