8:25 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡುವ ಮುಖ್ಯಮಂತ್ರಿ ನಿರ್ಧಾರ ಸ್ವಾಗತಾರ್ಹ: ಬಿಜೆಪಿ ರಾಜ್ಯಾಧ್ಯಕ್ಷ 

03/01/2022, 22:13

ಮಂಗಳೂರು(reporterkarnataka.com):

ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡುವ ಮುಖ್ಯಮಂತ್ರಿ ಬೊಮ್ಮಾಯಿಯವರ ನಿರ್ಧಾರ ಸ್ವಾಗತಾರ್ಹ. ಇದು ರಾಜ್ಯದ ಹಿಂದೂಗಳ ಭಾವನೆ ಆಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಮಂಗಳೂರಿನಲ್ಲಿ ಸೋಮವಾರ ಮಾಧ್ಯಮ ಜತೆ ಮಾತನಾಡಿದ ಅವರು, ಸರ್ಕಾರದ ಹಸ್ತಕ್ಷೇಪ ಇರದೇ, ಅಲ್ಲಿನ ಅಭಿವೃದ್ಧಿ ಅಲ್ಲೇ ಆಗಬೇಕಾಗಿದೆ.

ಆದರೆ ಕಾಂಗ್ರೆಸ್ ಈ ವಿಚಾರದಲ್ಲಿ ರಾಜಕಾರಣ ಮಾಡ್ತಿದೆ, ಕಾಂಗ್ರೆಸ್ ಹಿಂದೂ ವಿರೋಧಿ ನೀತಿ ಹೊಂದಿದೆ ಎಂದು ಟೀಕಿಸಿದರು.

ಮತಾಂತರ ಕಾಯ್ದೆ, ಸಿಎಎ ಕಾಯ್ದೆ, ಈಗ ದೇವಸ್ಥಾನ ಸ್ವಾಯತ್ತೆಗೂ ವಿರೋಧ ವ್ಯಕ್ತಪಡಿಸುತ್ತಿದೆ. ಅಲ್ಪಸಂಖ್ಯಾತ ಮತಕ್ಕಾಗಿ ಹಿಂದೂ ಸಮಾಜಕ್ಕೆ ಕಾಂಗ್ರೆಸ್ ದ್ರೋಹ ಬಗೆಯುತ್ತಿದೆ.ಕಾಂಗ್ರೆಸ್ ಗೆ ಹಿಂದೂ ಧರ್ಮ, ಹಿಂದೂ ಜನರ ಮೇಲೆ ನಂಬಿಕೆ ಇಲ್ಲ ಎಂದರು.

ಬೊಮ್ಮಾಯಿ ನಿರ್ಧಾರ ಸರಿ ಇದೆ, ಎಲ್ಲಾ ಮಠಾಧೀಪತಿಗಳು, ದೇವಸ್ಥಾನದವರು ಇದನ್ನ ಸ್ವಾಗತಿಸಿದ್ದಾರೆ. ಮತಾಂತರ ಮತ್ತು ದೇವಸ್ಥಾನ ವಿಚಾರದಲ್ಲಿ ಸರ್ಕಾರದ ನಿರ್ಧಾರ ನಾನು ಸ್ವಾಗತಿಸುತ್ತೇನೆ ಎಂದು ಅವರು ನುಡಿದರು.

ಸಿದ್ದರಾಮಯ್ಯ ಟೀಕೆ ಮಾಡ್ತಿದಾರೆ, ಆದ್ರೆ ಟಿಪ್ಪು ಜಯಂತಿ ಯಾರ ಓಲೈಕೆಗೆ ಮಾಡಿದ್ದು? ಶಾದಿ ಭಾಗ್ಯ ಯೋಜನೆಯಲ್ಲೂ ಅಲ್ಪಸಂಖ್ಯಾತರನ್ನ ಹುಡುಕಿ ಮತೀಯ ಭಾವನೆ ತಂದಿದ್ದಾರೆ. ಕಾಂಗ್ರೆಸ್ ಸಂಪೂರ್ಣ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಅಹಿಂದ ಚಳುವಳಿ ಮಾಡಿದ್ರಿ, ಆದ್ರೆ ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ, ಪುಟ್ಟಪ್ಪ ಸತ್ತಾಗ ಏನ್ ಮಾಡಿದ್ರಿ? ಕಾಂಗ್ರೆಸ್ ನ ಈ ವಿರೋಧಿ ಧೋರಣೆಯನ್ನ ಹಿಂದೂ ಸಮಾಜ‌ ತಿರಸ್ಕರಿಸುತ್ತೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು