3:31 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡುವ ಮುಖ್ಯಮಂತ್ರಿ ನಿರ್ಧಾರ ಸ್ವಾಗತಾರ್ಹ: ಬಿಜೆಪಿ ರಾಜ್ಯಾಧ್ಯಕ್ಷ 

03/01/2022, 22:13

ಮಂಗಳೂರು(reporterkarnataka.com):

ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡುವ ಮುಖ್ಯಮಂತ್ರಿ ಬೊಮ್ಮಾಯಿಯವರ ನಿರ್ಧಾರ ಸ್ವಾಗತಾರ್ಹ. ಇದು ರಾಜ್ಯದ ಹಿಂದೂಗಳ ಭಾವನೆ ಆಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಮಂಗಳೂರಿನಲ್ಲಿ ಸೋಮವಾರ ಮಾಧ್ಯಮ ಜತೆ ಮಾತನಾಡಿದ ಅವರು, ಸರ್ಕಾರದ ಹಸ್ತಕ್ಷೇಪ ಇರದೇ, ಅಲ್ಲಿನ ಅಭಿವೃದ್ಧಿ ಅಲ್ಲೇ ಆಗಬೇಕಾಗಿದೆ.

ಆದರೆ ಕಾಂಗ್ರೆಸ್ ಈ ವಿಚಾರದಲ್ಲಿ ರಾಜಕಾರಣ ಮಾಡ್ತಿದೆ, ಕಾಂಗ್ರೆಸ್ ಹಿಂದೂ ವಿರೋಧಿ ನೀತಿ ಹೊಂದಿದೆ ಎಂದು ಟೀಕಿಸಿದರು.

ಮತಾಂತರ ಕಾಯ್ದೆ, ಸಿಎಎ ಕಾಯ್ದೆ, ಈಗ ದೇವಸ್ಥಾನ ಸ್ವಾಯತ್ತೆಗೂ ವಿರೋಧ ವ್ಯಕ್ತಪಡಿಸುತ್ತಿದೆ. ಅಲ್ಪಸಂಖ್ಯಾತ ಮತಕ್ಕಾಗಿ ಹಿಂದೂ ಸಮಾಜಕ್ಕೆ ಕಾಂಗ್ರೆಸ್ ದ್ರೋಹ ಬಗೆಯುತ್ತಿದೆ.ಕಾಂಗ್ರೆಸ್ ಗೆ ಹಿಂದೂ ಧರ್ಮ, ಹಿಂದೂ ಜನರ ಮೇಲೆ ನಂಬಿಕೆ ಇಲ್ಲ ಎಂದರು.

ಬೊಮ್ಮಾಯಿ ನಿರ್ಧಾರ ಸರಿ ಇದೆ, ಎಲ್ಲಾ ಮಠಾಧೀಪತಿಗಳು, ದೇವಸ್ಥಾನದವರು ಇದನ್ನ ಸ್ವಾಗತಿಸಿದ್ದಾರೆ. ಮತಾಂತರ ಮತ್ತು ದೇವಸ್ಥಾನ ವಿಚಾರದಲ್ಲಿ ಸರ್ಕಾರದ ನಿರ್ಧಾರ ನಾನು ಸ್ವಾಗತಿಸುತ್ತೇನೆ ಎಂದು ಅವರು ನುಡಿದರು.

ಸಿದ್ದರಾಮಯ್ಯ ಟೀಕೆ ಮಾಡ್ತಿದಾರೆ, ಆದ್ರೆ ಟಿಪ್ಪು ಜಯಂತಿ ಯಾರ ಓಲೈಕೆಗೆ ಮಾಡಿದ್ದು? ಶಾದಿ ಭಾಗ್ಯ ಯೋಜನೆಯಲ್ಲೂ ಅಲ್ಪಸಂಖ್ಯಾತರನ್ನ ಹುಡುಕಿ ಮತೀಯ ಭಾವನೆ ತಂದಿದ್ದಾರೆ. ಕಾಂಗ್ರೆಸ್ ಸಂಪೂರ್ಣ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಅಹಿಂದ ಚಳುವಳಿ ಮಾಡಿದ್ರಿ, ಆದ್ರೆ ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ, ಪುಟ್ಟಪ್ಪ ಸತ್ತಾಗ ಏನ್ ಮಾಡಿದ್ರಿ? ಕಾಂಗ್ರೆಸ್ ನ ಈ ವಿರೋಧಿ ಧೋರಣೆಯನ್ನ ಹಿಂದೂ ಸಮಾಜ‌ ತಿರಸ್ಕರಿಸುತ್ತೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು