5:11 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಮೇಕೆದಾಟು ನಾವು ಮಾಡಿಯೇ ಮಾಡ್ತೀವಿ, ಕಾಂಗ್ರೆಸ್ ಪಾದಯಾತ್ರೆ ಬೇಕಾಗಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

03/01/2022, 22:37

ಮಂಗಳೂರು(reporterkarnataka.com): ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್ ನ ಅತ್ಯಂತ ಹೀನ ರಾಜಕಾರಣ. ಕೋವಿಡ್ ಮೊದಲ ಅಲೆ, ಎರಡನೇ ಅಲೆ ಬಂದಾಗಲೂ ಇವರು ಏನನ್ನೂ ಮಾಡಿಲ್ಲ, ಟೀಕೆಯಷ್ಟೇ ಮಾಡಿದ್ದು. ಜನರನ್ನು ದಾರಿ ತಪ್ಪಿಸಿ ಜನರನ್ನು ಕೊಲ್ಲುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಮಂಗಳೂರಿನಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು,ಇವತ್ತು ಎಚ್ಚರಿಕೆ ತೆಗೋಳುವ ಕೆಲಸ ಆಗಬೇಕು, ಕಾರ್ಯಕಾರಿಣೆಯಲ್ಲಿ 800 ಜನರನ್ನು ನಾವು 300 ಕ್ಕೆ ಇಳಿಸಿದೆವು.ಸರ್ಕಾರದ ನಿಯಮದ ಪ್ರಕಾರ ನಮ್ಮ ಬೇರೆ ಚಟುವಟಿಕೆಗಳನ್ನು ನಿಲ್ಲಿಸೋಕೂ ಯೋಚನೆ ಮಾಡಿದ್ದೇವೆ.

ಮೇಕೆದಾಟು ರಾಜಕಾರಣ ಮಾಡ್ತಿದಾರೆ, ನಿಮ್ಮದೇ ಸರ್ಕಾರ ಮತ್ತು ನಿಮ್ಮದೇ ಮುಖ್ಯಮಂತ್ರಿ ಇರಲಿಲ್ವಾ? ಆಗ ನೀವು ಮೇಕೆದಾಟು ಬಗ್ಗೆ ಚರ್ಚೆ ಮಾಡಲಿಲ್ಲ, ತಯಾರಿ ಮಾಡಲಿಲ್ಲ ಇವತ್ತು ನಮ್ಮ ಸರ್ಕಾರ ಸಂಪೂರ್ಣ ಬದ್ದತೆ ಹೊಂದಿದೆ.ನಾವು ಮೇಕೆದಾಟು ಮಾಡಿಯೇ ಮಾಡ್ತೀವಿ, ನಮ್ಮ ಕಾಲದಲ್ಲೇ ಅದು ಆಗುತ್ತೆ. ಅದಕ್ಕೆ ಈ ಕಾಂಗ್ರೆಸ್ ಪಾದಯಾತ್ರೆ ಅಗತ್ಯ ಖಂಡಿತಾ ಇಲ್ಲ

ರಾಜ್ಯದಲ್ಲಿ ಪಾದಯಾತ್ರೆ ಮಾಡಿ ಕೊರೋನಾ ಹೆಚ್ಚು ಮಾಡಲು ನೋಡ್ತಿದಾರೆ. ಇದರಿಂದ ಖಂಡಿತಾ ಕೊರೋನಾ ಹೆಚ್ಚಳವಾಗುತ್ತೆ, ಇದಕ್ಕೆ ಕಾಂಗ್ರೆಸ್ ಹೊಣೆಗಾರರಾಗುತ್ತೆ ಎಂದು ಅವರು ಎಚ್ಚರಿಸಿದರು.

ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ.ಸರ್ಕಾರ ಮುನ್ನೆಚ್ಚರಿಕೆಗಾಗಿ ಹಲವು ಗೈಡ್ ಲೈನ್ ಗಳನ್ನ ತರುತ್ತೆ. ಲಾಕ್ ಡೌನ್ ಇಲ್ಲ, ತಜ್ಞರ ವರದಿ ಅಧಾರದಲ್ಲಿ ಕೋವಿಡ್ ನಿಯಂತ್ರಿಸ್ತಾರೆ. ಜನರೇ ಸ್ವಯಂ ಆಗಿ ಈ ಕೋವಿಡ್ ನಿಯಂತ್ರಣ ಮಾಡಬೇಕಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು