6:39 AM Thursday29 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಮೇಕೆದಾಟು ನಾವು ಮಾಡಿಯೇ ಮಾಡ್ತೀವಿ, ಕಾಂಗ್ರೆಸ್ ಪಾದಯಾತ್ರೆ ಬೇಕಾಗಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

03/01/2022, 22:37

ಮಂಗಳೂರು(reporterkarnataka.com): ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್ ನ ಅತ್ಯಂತ ಹೀನ ರಾಜಕಾರಣ. ಕೋವಿಡ್ ಮೊದಲ ಅಲೆ, ಎರಡನೇ ಅಲೆ ಬಂದಾಗಲೂ ಇವರು ಏನನ್ನೂ ಮಾಡಿಲ್ಲ, ಟೀಕೆಯಷ್ಟೇ ಮಾಡಿದ್ದು. ಜನರನ್ನು ದಾರಿ ತಪ್ಪಿಸಿ ಜನರನ್ನು ಕೊಲ್ಲುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಮಂಗಳೂರಿನಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು,ಇವತ್ತು ಎಚ್ಚರಿಕೆ ತೆಗೋಳುವ ಕೆಲಸ ಆಗಬೇಕು, ಕಾರ್ಯಕಾರಿಣೆಯಲ್ಲಿ 800 ಜನರನ್ನು ನಾವು 300 ಕ್ಕೆ ಇಳಿಸಿದೆವು.ಸರ್ಕಾರದ ನಿಯಮದ ಪ್ರಕಾರ ನಮ್ಮ ಬೇರೆ ಚಟುವಟಿಕೆಗಳನ್ನು ನಿಲ್ಲಿಸೋಕೂ ಯೋಚನೆ ಮಾಡಿದ್ದೇವೆ.

ಮೇಕೆದಾಟು ರಾಜಕಾರಣ ಮಾಡ್ತಿದಾರೆ, ನಿಮ್ಮದೇ ಸರ್ಕಾರ ಮತ್ತು ನಿಮ್ಮದೇ ಮುಖ್ಯಮಂತ್ರಿ ಇರಲಿಲ್ವಾ? ಆಗ ನೀವು ಮೇಕೆದಾಟು ಬಗ್ಗೆ ಚರ್ಚೆ ಮಾಡಲಿಲ್ಲ, ತಯಾರಿ ಮಾಡಲಿಲ್ಲ ಇವತ್ತು ನಮ್ಮ ಸರ್ಕಾರ ಸಂಪೂರ್ಣ ಬದ್ದತೆ ಹೊಂದಿದೆ.ನಾವು ಮೇಕೆದಾಟು ಮಾಡಿಯೇ ಮಾಡ್ತೀವಿ, ನಮ್ಮ ಕಾಲದಲ್ಲೇ ಅದು ಆಗುತ್ತೆ. ಅದಕ್ಕೆ ಈ ಕಾಂಗ್ರೆಸ್ ಪಾದಯಾತ್ರೆ ಅಗತ್ಯ ಖಂಡಿತಾ ಇಲ್ಲ

ರಾಜ್ಯದಲ್ಲಿ ಪಾದಯಾತ್ರೆ ಮಾಡಿ ಕೊರೋನಾ ಹೆಚ್ಚು ಮಾಡಲು ನೋಡ್ತಿದಾರೆ. ಇದರಿಂದ ಖಂಡಿತಾ ಕೊರೋನಾ ಹೆಚ್ಚಳವಾಗುತ್ತೆ, ಇದಕ್ಕೆ ಕಾಂಗ್ರೆಸ್ ಹೊಣೆಗಾರರಾಗುತ್ತೆ ಎಂದು ಅವರು ಎಚ್ಚರಿಸಿದರು.

ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ.ಸರ್ಕಾರ ಮುನ್ನೆಚ್ಚರಿಕೆಗಾಗಿ ಹಲವು ಗೈಡ್ ಲೈನ್ ಗಳನ್ನ ತರುತ್ತೆ. ಲಾಕ್ ಡೌನ್ ಇಲ್ಲ, ತಜ್ಞರ ವರದಿ ಅಧಾರದಲ್ಲಿ ಕೋವಿಡ್ ನಿಯಂತ್ರಿಸ್ತಾರೆ. ಜನರೇ ಸ್ವಯಂ ಆಗಿ ಈ ಕೋವಿಡ್ ನಿಯಂತ್ರಣ ಮಾಡಬೇಕಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು