3:18 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಶಾರದಾ ಕಾಲೇಜಿನಲ್ಲಿ ಏಳು ದಿನಗಳ ದೈನಂದಿನ ಚಟುವಟಿಕೆಗಳ ಕಾರ್ಯಗಾರ

04/01/2022, 16:06

ಮಂಗಳೂರು(reporterkarnataka.com): ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿದ್ಯಾರ್ಥಿಗಳಲ್ಲಿ ಪರಿಸರ ಸೇರಿದಂತೆ ಸಾಮಾಜಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಏಳು ದಿನಗಳ ವಿಶೇಷ ಕಾರ್ಯಾಗಾರ ತಲಪಾಡಿ ಶಾರದ ಕಾಲೇಜಿನಲ್ಲಿ ನಡೆಯಿತು.

23-12-21ರಂದು ಡಾ.ಸಂದೀಪ್ ಬೇಕಲ್ ಕ್ರಿಯಾ ಶರೀರ ವಿಭಾಗ, ಶಾರದಾ ಆಯುರ್ವೇದ ಕಾಲೇಜು ತಲಪಾಡಿ. ಇವರು ಪ್ರಥಮ ಚಿಕಿತ್ಸೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.


24-12- 21ರಂದು ಕೋವಿಡ್ ಮುಂಜಾಗ್ರತ ಎಚ್ಚರಿಕೆ ಹಾಗೂ ಕ್ರಮಗಳ ಬಗ್ಗೆ ಸಮೀಕ್ಷೆ ಮೂಲಕ ಜನ ಜಾಗೃತಿಯನ್ನು ಗ್ರಾಮದ ಜನರಿಗೆ ನೀಡಿದರು.
27-12-21ರಂದು ಶ್ರೀಮತಿ ಅರುಣಾ ಕಣ್ಣನ್ ದೈಹಿಕ ಶಿಕ್ಷಕರು ಶಾರದಾ ವಿದ್ಯಾನಿಕೇತನ ತಲಪಾಡಿ. ಇವರು ವಿದ್ಯಾರ್ಥಿಗಳಲ್ಲಿ ಸ್ವಯಂ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಿದರು.


28-12-21ರಂದು ಡಾ.ಸ್ವಪ್ನ ಡಿ. ಸಂಹಿತ ಸಿದ್ಧಾಂತ, ಶಾರದಾ ಆಯುರ್ವೇದ ಕಾಲೇಜು ಇವರು. ಸಮತೋಲನ ಆಹಾರದ ಬಗೆಗಿನ ಮಾಹಿತಿಯನ್ನು ನೀಡಿದರು. ಹಾಗೂ 7 ದಿನಗಳ ಸೇವಾ ಯೋಜನೆಯ ಚಟುವಟಿಕೆಗಳಲ್ಲಿ ಕಾಲೇಜಿನ ಸ್ವಚ್ಛತಾ ಕಾರ್ಯಕ್ರಮ, ಶಾಲಾ ಕೈತೋಟ ನಿರ್ಮಾಣ, ಹಾಗೂ ಉಪಹಾರಗೃಹದಲ್ಲಿ ಚಿತ್ರಕಲೆಯ ಮೂಲಕ ಸ್ವಚ್ಛತ ಅಭಿಯಾನದ ಬರಹವನ್ನು ಬರೆದರು.


31-12-21ರಂದು ಮಂಜುನಾಥ್ ಮಲೆನಾಡು ಕಲೆ ಮತ್ತು ಕರಕುಶಲ ವಿಭಾಗ ಶಾರದ ವಿದ್ಯಾನಿಕೇತನ ತಲಪಾಡಿ. ಇವರು ಪೌರಾಣಿಕ ಕಥಾ ಭಾಗದ ತುಣುಕನ್ನು ಅಭಿನಯಿಸಿ ತೋರಿಸಿದರು.

ರಾಷ್ಟ್ರೀಯ ಸೇವಾ ಯೋಜನೆಯ ಸಮಾರೋಪ ಸಮಾರಂಭದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬೆಂಕಿ ಮತ್ತು ಸುರಕ್ಷತೆಯ ಬಗ್ಗೆ ಶ್ರೀ ಸತ್ಯಜಿತ್ ಫಸ್ಟ್ ನ್ಯೂರೋ ಆಸ್ಪತ್ರೆ ಇವರು ಮಾಹಿತಿ ನೀಡಿದರು.






ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನವನ್ನು ಡಾ.ಮೀನಾ ಜೆ ಪಣಿಕ್ಕರ್ ಇವರು ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಸೂರಾಜ್ ಎಂ ದೇವಾಡಿಗ, ಅಮಿತ ಆಳ್ವ ಉಪಸ್ಥಿತರಿದ್ದರು. ವಿದ್ಯಾರ್ಥಿ ಕಾರ್ಯದರ್ಶಿಗಳಾದ ಶ್ರವಣ್ ಆಚಾರ್ಯ, ಮತ್ತು ದಿಶಾ ಕೆ.ಬಿ. ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು