9:27 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಶಾರದಾ ಕಾಲೇಜಿನಲ್ಲಿ ಏಳು ದಿನಗಳ ದೈನಂದಿನ ಚಟುವಟಿಕೆಗಳ ಕಾರ್ಯಗಾರ

04/01/2022, 16:06

ಮಂಗಳೂರು(reporterkarnataka.com): ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿದ್ಯಾರ್ಥಿಗಳಲ್ಲಿ ಪರಿಸರ ಸೇರಿದಂತೆ ಸಾಮಾಜಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಏಳು ದಿನಗಳ ವಿಶೇಷ ಕಾರ್ಯಾಗಾರ ತಲಪಾಡಿ ಶಾರದ ಕಾಲೇಜಿನಲ್ಲಿ ನಡೆಯಿತು.

23-12-21ರಂದು ಡಾ.ಸಂದೀಪ್ ಬೇಕಲ್ ಕ್ರಿಯಾ ಶರೀರ ವಿಭಾಗ, ಶಾರದಾ ಆಯುರ್ವೇದ ಕಾಲೇಜು ತಲಪಾಡಿ. ಇವರು ಪ್ರಥಮ ಚಿಕಿತ್ಸೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.


24-12- 21ರಂದು ಕೋವಿಡ್ ಮುಂಜಾಗ್ರತ ಎಚ್ಚರಿಕೆ ಹಾಗೂ ಕ್ರಮಗಳ ಬಗ್ಗೆ ಸಮೀಕ್ಷೆ ಮೂಲಕ ಜನ ಜಾಗೃತಿಯನ್ನು ಗ್ರಾಮದ ಜನರಿಗೆ ನೀಡಿದರು.
27-12-21ರಂದು ಶ್ರೀಮತಿ ಅರುಣಾ ಕಣ್ಣನ್ ದೈಹಿಕ ಶಿಕ್ಷಕರು ಶಾರದಾ ವಿದ್ಯಾನಿಕೇತನ ತಲಪಾಡಿ. ಇವರು ವಿದ್ಯಾರ್ಥಿಗಳಲ್ಲಿ ಸ್ವಯಂ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಿದರು.


28-12-21ರಂದು ಡಾ.ಸ್ವಪ್ನ ಡಿ. ಸಂಹಿತ ಸಿದ್ಧಾಂತ, ಶಾರದಾ ಆಯುರ್ವೇದ ಕಾಲೇಜು ಇವರು. ಸಮತೋಲನ ಆಹಾರದ ಬಗೆಗಿನ ಮಾಹಿತಿಯನ್ನು ನೀಡಿದರು. ಹಾಗೂ 7 ದಿನಗಳ ಸೇವಾ ಯೋಜನೆಯ ಚಟುವಟಿಕೆಗಳಲ್ಲಿ ಕಾಲೇಜಿನ ಸ್ವಚ್ಛತಾ ಕಾರ್ಯಕ್ರಮ, ಶಾಲಾ ಕೈತೋಟ ನಿರ್ಮಾಣ, ಹಾಗೂ ಉಪಹಾರಗೃಹದಲ್ಲಿ ಚಿತ್ರಕಲೆಯ ಮೂಲಕ ಸ್ವಚ್ಛತ ಅಭಿಯಾನದ ಬರಹವನ್ನು ಬರೆದರು.


31-12-21ರಂದು ಮಂಜುನಾಥ್ ಮಲೆನಾಡು ಕಲೆ ಮತ್ತು ಕರಕುಶಲ ವಿಭಾಗ ಶಾರದ ವಿದ್ಯಾನಿಕೇತನ ತಲಪಾಡಿ. ಇವರು ಪೌರಾಣಿಕ ಕಥಾ ಭಾಗದ ತುಣುಕನ್ನು ಅಭಿನಯಿಸಿ ತೋರಿಸಿದರು.

ರಾಷ್ಟ್ರೀಯ ಸೇವಾ ಯೋಜನೆಯ ಸಮಾರೋಪ ಸಮಾರಂಭದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬೆಂಕಿ ಮತ್ತು ಸುರಕ್ಷತೆಯ ಬಗ್ಗೆ ಶ್ರೀ ಸತ್ಯಜಿತ್ ಫಸ್ಟ್ ನ್ಯೂರೋ ಆಸ್ಪತ್ರೆ ಇವರು ಮಾಹಿತಿ ನೀಡಿದರು.






ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನವನ್ನು ಡಾ.ಮೀನಾ ಜೆ ಪಣಿಕ್ಕರ್ ಇವರು ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಸೂರಾಜ್ ಎಂ ದೇವಾಡಿಗ, ಅಮಿತ ಆಳ್ವ ಉಪಸ್ಥಿತರಿದ್ದರು. ವಿದ್ಯಾರ್ಥಿ ಕಾರ್ಯದರ್ಶಿಗಳಾದ ಶ್ರವಣ್ ಆಚಾರ್ಯ, ಮತ್ತು ದಿಶಾ ಕೆ.ಬಿ. ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು