5:31 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಸಮಾಜದಲ್ಲಿ ಮಕ್ಕಳನ್ನು ಗೌರವದಿಂದ ಕಾಣಬೇಕು: ಶರಣಗೌಡ

06/01/2022, 10:56

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಸಮಾಜದಲ್ಲಿ ಮಕ್ಕಳನ್ನು ಗೌರವದಿಂದ, ಪ್ರೀತಿ ವಾತ್ಸಲ್ಯದಿಂದ, ಮಮಕಾರದಿಂದ ಉತ್ತಮ ರೀತಿಯಲ್ಲಿ ನೋಡಿಕೊಳ್ಳಬೇಕು. ಪಾಲಕರು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು.

ಮುಂದೊಂದು ದಿನ ವಿದ್ಯಾವಂತರಾಗಿ ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರುವಾಗ ತಂದೆ-ತಾಯಿಗೆ ಕಲಿಸಿದ ಶಾಲೆಗೆ ಮತ್ತು ಶಿಕ್ಷಕರಿಗೆ ಗೌರವ, ಪ್ರೀತಿ ಸಿಗುತ್ತದೆ ಎಂದು ಮಸ್ಕಿ ವಿಭಾಗದ ವಾಟಗಲ್ ಗ್ರಾಮದಲ್ಲಿ ಜಿಲ್ಲಾ ಸಮನ್ವಯ ಅಧಿಕಾರಿ ಶರಣೆಗೌಡ ಚಿತ್ತಾಪುರ ಹೇಳಿದರು.

15 ವರ್ಷ ಮೇಲ್ಪಟ್ಟ ಎಲ್ಲ ಮಕ್ಕಳಿಗೆ ಕೋವಿಡ್ ಲಸಿಕೆ ಹಾಕುವ ಕುರಿತು ಅವರು ಮಾತನಾಡಿದರು.

ಎಲ್ಲ ಪಾಲಕರು ಮಕ್ಕಳನ್ನು ಗೌರವದಿಂದ ನೋಡಿಕೊಳ್ಳಬೇಕು. ಅಲ್ಲದೆ ಅವರಿಗೆ ಸರಿಯಾದ ಸಂಸ್ಕಾರ ಕಲಿಸಿಕೊಡಬೇಕು. ಸಂಸ್ಕಾರದಿಂದ ಮಕ್ಕಳು ಸಮಾಜದಲ್ಲಿ ನಾವು ಹೇಗೆ ಬದುಕಬೇಕು ಎಂಬುದನ್ನು ತಿಳಿದುಕೊಳ್ಳುತ್ತಾರೆ. ಅಂತಹ ಯುವಕರು ತಮ್ಮ ಪ್ರತಿಭೆಯ ಹೊರಹಾಕಿದಾಗ ಸಾಮಾನ್ಯ ಜ್ಞಾನ ಸಮಾಜಕ್ಕೆ ಮುಟ್ಟುವ ಸಾಧ್ಯತೆ ಇದ್ದು ಮುರಾರ್ಜಿ ವಸತಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ಸರಿಯಾದ ಉತ್ತಮ ರೀತಿಯಲ್ಲಿ ಓದಬೇಕು. ಸರಿಯಾದ ಅಂಕವನ್ನು ಪಡೆದುಕೊಂಡಾಗ ಪಾಸಾದಾಗ ಶಾಲೆಗೆ ಮತ್ತು ತಂದೆ-ತಾಯಿಗೆ ಕೀರ್ತಿ ಬರುತ್ತದೆ ಎಂದರು.

ಮಕ್ಕಳ ಬಗ್ಗೆ ಪಾಲಕರು ಗಮನಹರಿಸಿದಾಗ ಮಕ್ಕಳು ಮುಂದೆ ಬರಲು ಸಾಧ್ಯ. ಕಡು ಬಡತನದಲ್ಲಿರುವ ಪಾಲಕರು ಮಕ್ಕಳಿಗೆ ಸರಿಯಾದ ಸಂಸ್ಕಾರ ಕಳಿಸಿಕೊಡಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಉಪನ್ಯಾಸಕರು, ಊರಿನ ಪ್ರಮುಖರು ಸೇರಿದಂತೆ ಇನ್ನಿತರ ಭಾಗವಹಿಸಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು