12:37 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಕೊರೊನಾ ಕಷ್ಟಕಾಲದಲ್ಲಿ ಬಿಜೆಎಸ್ ನಿಂದ ಸಮಾಜಮುಖಿ ಕೆಲಸ: ವೀರೇಶ್ ಹಿರೇಮಠ ಸಂತಸ

03/06/2021, 16:16

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಮಸ್ಕಿಯಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವು ನೀಡುವ ಮೂಲಕ ಭಾರತ ಜೈನ್ ಸಂಘಟನೆ ಸಮಾಜಕ್ಕೆ ಮಹತ್ತರ ಕೊಡುಗೆ  ನೀಡಿದೆ ಎಂದು ಮಸ್ಕಿ ಜಂಗಮ ಸಮಾಜದ ಯುವ ಮುಖಂಡ ವೀರೇಶ್ ಹಿರೇಮಠ ಹೇಳಿದರು.

ರಾಯಚೂರಿನ ಭಾರತೀಯ ಜೈನ ಸಂಘಟನೆಯು ರಾಯಚೂರು ಜಿಲ್ಲೆಯ ಕೋವಿಡ್ 19 ಸೋಂಕಿತ ಜನರ ಅನುಕೂಲಕ್ಕಾಗಿ ಆಕ್ಸಿಜನ್ ಮೆಷಿನ್ ಸೇವೆಯನ್ನು ಆರಂಭಿಸಿದ್ದು, ಈಗಾಗಲೇ ಸುಮಾರು 150 ಕ್ಕೂ ಹೆಚ್ಚು ಜನರು ಇದರ ಪ್ರಯೋಜನ ಪಡೆದಿದ್ದಾರೆ. ಮಸ್ಕಿ ತಾಲೂಕಿನ ಕೋವಿಡ್ 19 ಸೋಂಕಿತ ಜನರ ಅನುಕೂಲಕ್ಕಾಗಿ ಬಿಜೆಎಸ್ ನೇತೃತ್ವದಲ್ಲಿ ಮಸ್ಕಿಯ ಶ್ರೀ ಭ್ರಮರಾಂಬ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ ಸಹಯೋಗದಲ್ಲಿ ಆಕ್ಸಿಜನ್ ಸೇವೆಯನ್ನು ಇಂದು ಮಸ್ಕಿಯ ಅನ್ನಪೂರ್ಣ ನರ್ಸಿಂಗ್ ಹೋಮ್ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ನೆರವೇರಿಸಲಾಯಿತು.

ಈಗಾಗಲೇ ಸಂಸ್ಥೆಯಿಂದ ಬಡ ಕುಟುಂಬಗಳು ಗುರುತಿಸಿ ಅವರಿಗೆ ಸಹಾಯ ಸಾಕಷ್ಟು ನೆರವು ನೀಡಿದೆ.  ಸಂಸ್ಥೆಯು ರಾಯಚೂರು ಜಿಲ್ಲೆ ಸೇರಿದಂತೆ ಸಂಕಷ್ಟದಲ್ಲಿರುವ ಜನರಿಗೆ ದಾರಿದೀಪವಾಗಿ ಕೆಲಸ ಮಾಡುತ್ತದೆ ಎಂದು ವೀರೇಶ್ ಹಿರೇಮಠ ತಿಳಿಸಿದರು.

 ಕಾರ್ಯಕ್ರಮದಲ್ಲಿ ಮಸ್ಕಿ ತಹಶೀಲ್ದಾರ್, ಬಲರಾಮ್ ಕಟ್ಟಿಮನಿ, ಪುರಸಭೆಯ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ  ಮತ್ತು  ಶ್ರೀ ಭ್ರಮರಾಂಬ ಸಹಕಾರಿಯ ಅಧ್ಯಕ್ಷರಾದ ಡಾ. ಶಿವಶರಣಪ್ಪ ಇತ್ಲಿ ಅವರು ಆಕ್ಸಿಜನ್ ಮಶೀನ್ ಬಟನ್ ಒತ್ತುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಸಹಕಾರಿಯ ಉಪಾಧ್ಯಕ್ಷರಾದ ಪಂಪಣ್ಣ ಗುಂಡಳ್ಳಿ, ನಿರ್ದೇಶಕರಾದ ಪ್ರಕಾಶ್ ದಾರಿವಾಲ್, ಡಾ. ಮಲ್ಲಿಕಾರ್ಜುನ್ ಇತ್ಲಿ ಇದ್ದರು. 
ಸಹಕಾರಿಯ ಪ್ರಧಾನ ವ್ಯವಸ್ಥಾಪಕರಾದ 
ವೀರೇಶ್ ಹಿರೇಮಠ ಅವರು ಕಾರ್ಯಕ್ರಮ ನಿರೂಪಿಸಿದರು. ಸಹಕಾರಿಯ ನಿರ್ದೇಶಕರು, ಸಲಹಾ ಸಮಿತಿಯ ಸದಸ್ಯರು, ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು