12:15 PM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಕೊರೊನಾ ಕಷ್ಟಕಾಲದಲ್ಲಿ ಬಿಜೆಎಸ್ ನಿಂದ ಸಮಾಜಮುಖಿ ಕೆಲಸ: ವೀರೇಶ್ ಹಿರೇಮಠ ಸಂತಸ

03/06/2021, 16:16

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಮಸ್ಕಿಯಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವು ನೀಡುವ ಮೂಲಕ ಭಾರತ ಜೈನ್ ಸಂಘಟನೆ ಸಮಾಜಕ್ಕೆ ಮಹತ್ತರ ಕೊಡುಗೆ  ನೀಡಿದೆ ಎಂದು ಮಸ್ಕಿ ಜಂಗಮ ಸಮಾಜದ ಯುವ ಮುಖಂಡ ವೀರೇಶ್ ಹಿರೇಮಠ ಹೇಳಿದರು.

ರಾಯಚೂರಿನ ಭಾರತೀಯ ಜೈನ ಸಂಘಟನೆಯು ರಾಯಚೂರು ಜಿಲ್ಲೆಯ ಕೋವಿಡ್ 19 ಸೋಂಕಿತ ಜನರ ಅನುಕೂಲಕ್ಕಾಗಿ ಆಕ್ಸಿಜನ್ ಮೆಷಿನ್ ಸೇವೆಯನ್ನು ಆರಂಭಿಸಿದ್ದು, ಈಗಾಗಲೇ ಸುಮಾರು 150 ಕ್ಕೂ ಹೆಚ್ಚು ಜನರು ಇದರ ಪ್ರಯೋಜನ ಪಡೆದಿದ್ದಾರೆ. ಮಸ್ಕಿ ತಾಲೂಕಿನ ಕೋವಿಡ್ 19 ಸೋಂಕಿತ ಜನರ ಅನುಕೂಲಕ್ಕಾಗಿ ಬಿಜೆಎಸ್ ನೇತೃತ್ವದಲ್ಲಿ ಮಸ್ಕಿಯ ಶ್ರೀ ಭ್ರಮರಾಂಬ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ ಸಹಯೋಗದಲ್ಲಿ ಆಕ್ಸಿಜನ್ ಸೇವೆಯನ್ನು ಇಂದು ಮಸ್ಕಿಯ ಅನ್ನಪೂರ್ಣ ನರ್ಸಿಂಗ್ ಹೋಮ್ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ನೆರವೇರಿಸಲಾಯಿತು.

ಈಗಾಗಲೇ ಸಂಸ್ಥೆಯಿಂದ ಬಡ ಕುಟುಂಬಗಳು ಗುರುತಿಸಿ ಅವರಿಗೆ ಸಹಾಯ ಸಾಕಷ್ಟು ನೆರವು ನೀಡಿದೆ.  ಸಂಸ್ಥೆಯು ರಾಯಚೂರು ಜಿಲ್ಲೆ ಸೇರಿದಂತೆ ಸಂಕಷ್ಟದಲ್ಲಿರುವ ಜನರಿಗೆ ದಾರಿದೀಪವಾಗಿ ಕೆಲಸ ಮಾಡುತ್ತದೆ ಎಂದು ವೀರೇಶ್ ಹಿರೇಮಠ ತಿಳಿಸಿದರು.

 ಕಾರ್ಯಕ್ರಮದಲ್ಲಿ ಮಸ್ಕಿ ತಹಶೀಲ್ದಾರ್, ಬಲರಾಮ್ ಕಟ್ಟಿಮನಿ, ಪುರಸಭೆಯ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ  ಮತ್ತು  ಶ್ರೀ ಭ್ರಮರಾಂಬ ಸಹಕಾರಿಯ ಅಧ್ಯಕ್ಷರಾದ ಡಾ. ಶಿವಶರಣಪ್ಪ ಇತ್ಲಿ ಅವರು ಆಕ್ಸಿಜನ್ ಮಶೀನ್ ಬಟನ್ ಒತ್ತುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಸಹಕಾರಿಯ ಉಪಾಧ್ಯಕ್ಷರಾದ ಪಂಪಣ್ಣ ಗುಂಡಳ್ಳಿ, ನಿರ್ದೇಶಕರಾದ ಪ್ರಕಾಶ್ ದಾರಿವಾಲ್, ಡಾ. ಮಲ್ಲಿಕಾರ್ಜುನ್ ಇತ್ಲಿ ಇದ್ದರು. 
ಸಹಕಾರಿಯ ಪ್ರಧಾನ ವ್ಯವಸ್ಥಾಪಕರಾದ 
ವೀರೇಶ್ ಹಿರೇಮಠ ಅವರು ಕಾರ್ಯಕ್ರಮ ನಿರೂಪಿಸಿದರು. ಸಹಕಾರಿಯ ನಿರ್ದೇಶಕರು, ಸಲಹಾ ಸಮಿತಿಯ ಸದಸ್ಯರು, ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು