5:20 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಕೊರೊನಾ ಕಷ್ಟಕಾಲದಲ್ಲಿ ಬಿಜೆಎಸ್ ನಿಂದ ಸಮಾಜಮುಖಿ ಕೆಲಸ: ವೀರೇಶ್ ಹಿರೇಮಠ ಸಂತಸ

03/06/2021, 16:16

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಮಸ್ಕಿಯಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವು ನೀಡುವ ಮೂಲಕ ಭಾರತ ಜೈನ್ ಸಂಘಟನೆ ಸಮಾಜಕ್ಕೆ ಮಹತ್ತರ ಕೊಡುಗೆ  ನೀಡಿದೆ ಎಂದು ಮಸ್ಕಿ ಜಂಗಮ ಸಮಾಜದ ಯುವ ಮುಖಂಡ ವೀರೇಶ್ ಹಿರೇಮಠ ಹೇಳಿದರು.

ರಾಯಚೂರಿನ ಭಾರತೀಯ ಜೈನ ಸಂಘಟನೆಯು ರಾಯಚೂರು ಜಿಲ್ಲೆಯ ಕೋವಿಡ್ 19 ಸೋಂಕಿತ ಜನರ ಅನುಕೂಲಕ್ಕಾಗಿ ಆಕ್ಸಿಜನ್ ಮೆಷಿನ್ ಸೇವೆಯನ್ನು ಆರಂಭಿಸಿದ್ದು, ಈಗಾಗಲೇ ಸುಮಾರು 150 ಕ್ಕೂ ಹೆಚ್ಚು ಜನರು ಇದರ ಪ್ರಯೋಜನ ಪಡೆದಿದ್ದಾರೆ. ಮಸ್ಕಿ ತಾಲೂಕಿನ ಕೋವಿಡ್ 19 ಸೋಂಕಿತ ಜನರ ಅನುಕೂಲಕ್ಕಾಗಿ ಬಿಜೆಎಸ್ ನೇತೃತ್ವದಲ್ಲಿ ಮಸ್ಕಿಯ ಶ್ರೀ ಭ್ರಮರಾಂಬ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ ಸಹಯೋಗದಲ್ಲಿ ಆಕ್ಸಿಜನ್ ಸೇವೆಯನ್ನು ಇಂದು ಮಸ್ಕಿಯ ಅನ್ನಪೂರ್ಣ ನರ್ಸಿಂಗ್ ಹೋಮ್ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ನೆರವೇರಿಸಲಾಯಿತು.

ಈಗಾಗಲೇ ಸಂಸ್ಥೆಯಿಂದ ಬಡ ಕುಟುಂಬಗಳು ಗುರುತಿಸಿ ಅವರಿಗೆ ಸಹಾಯ ಸಾಕಷ್ಟು ನೆರವು ನೀಡಿದೆ.  ಸಂಸ್ಥೆಯು ರಾಯಚೂರು ಜಿಲ್ಲೆ ಸೇರಿದಂತೆ ಸಂಕಷ್ಟದಲ್ಲಿರುವ ಜನರಿಗೆ ದಾರಿದೀಪವಾಗಿ ಕೆಲಸ ಮಾಡುತ್ತದೆ ಎಂದು ವೀರೇಶ್ ಹಿರೇಮಠ ತಿಳಿಸಿದರು.

 ಕಾರ್ಯಕ್ರಮದಲ್ಲಿ ಮಸ್ಕಿ ತಹಶೀಲ್ದಾರ್, ಬಲರಾಮ್ ಕಟ್ಟಿಮನಿ, ಪುರಸಭೆಯ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ  ಮತ್ತು  ಶ್ರೀ ಭ್ರಮರಾಂಬ ಸಹಕಾರಿಯ ಅಧ್ಯಕ್ಷರಾದ ಡಾ. ಶಿವಶರಣಪ್ಪ ಇತ್ಲಿ ಅವರು ಆಕ್ಸಿಜನ್ ಮಶೀನ್ ಬಟನ್ ಒತ್ತುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಸಹಕಾರಿಯ ಉಪಾಧ್ಯಕ್ಷರಾದ ಪಂಪಣ್ಣ ಗುಂಡಳ್ಳಿ, ನಿರ್ದೇಶಕರಾದ ಪ್ರಕಾಶ್ ದಾರಿವಾಲ್, ಡಾ. ಮಲ್ಲಿಕಾರ್ಜುನ್ ಇತ್ಲಿ ಇದ್ದರು. 
ಸಹಕಾರಿಯ ಪ್ರಧಾನ ವ್ಯವಸ್ಥಾಪಕರಾದ 
ವೀರೇಶ್ ಹಿರೇಮಠ ಅವರು ಕಾರ್ಯಕ್ರಮ ನಿರೂಪಿಸಿದರು. ಸಹಕಾರಿಯ ನಿರ್ದೇಶಕರು, ಸಲಹಾ ಸಮಿತಿಯ ಸದಸ್ಯರು, ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು