4:01 AM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಓಮಿಕ್ರಾನ್ ಭೀತಿ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಲ್ಲ ಸೇವೆಗಳು ರದ್ದು: ವಾರಾಂತ್ಯ ದರ್ಶನಕ್ಕೂ ಅವಕಾಶ ಇಲ್ಲ

06/01/2022, 17:09

ಸುಬ್ರಹ್ಮಣ್ಯ(reporterkarnataka.com):ದೇಶದಾದ್ಯಂತ ಹರಡುತ್ತಿರುವ ಓಮಿಕ್ರಾನ್ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರದ ಮತ್ತು ದ.ಕ. ಜಿಲ್ಲಾಧಿಕಾರಿಯವರ ಆದೇಶದ ಪ್ರಕಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ.6ರಿಂದ ಮುಂದಿನ ಆದೇಶದ ವರೆಗೆ ಯಾವುದೇ ಸೇವೆಗಳು ನಡೆಯವುದಿಲ್ಲ.

ದೇವರ ದರುಶನಕ್ಕೆ ಮಾತ್ರ ಭಕ್ತರಿಗೆ ಅವಕಾಶವಿರುತ್ತದೆ ಎಂದು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ತಿಳಿಸಿದ್ದಾರೆ.

ಶನಿವಾರ, ಭಾನುವಾರ ದರುಶನ ಇಲ್ಲ:

ದೇವರ ದರ್ಶನಕ್ಕೆ ಒಂದು ಬಾರಿಗೆ 50  ಮಂದಿ ಭಕ್ತರಿಗೆ ಮಾತ್ರ ಅವಕಾಶವಿರುತ್ತದೆ. ಶುಕ್ರವಾರ ರಾತ್ರಿ 10 ಗಂಟೆಯಿoದ ಸೋಮವಾರ ಬೆಳಗ್ಗೆ 5 ಗಂಟೆ ತನಕ ವಾರಾಂತ್ಯದ ಕರ್ಪ್ಯೂ ಜಾರಿಯಲ್ಲಿರುವುದರಿಂದ ಶನಿವಾರ ಮತ್ತು ಭಾನುವಾರಗಳಂದು ಶ್ರೀ ದೇವರ ದರ್ಶನಕ್ಕೆ ಕೂಡಾ ಅವಕಾಶವಿರುವುದಿಲ್ಲ. ಉಳಿದ ದಿನಗಳಲ್ಲಿ ಎರಡು ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡ ಭಕ್ತಾದಿಗಳಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶವಿರುತ್ತದೆ. ಶ್ರೀ ದೇವರ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆ ಮೊದಲಾದ ಕೋವಿಡ್ 19 ನಿಯಂತ್ರಣದ ಮುಂಜಾಗೃತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ದೇವರ ದರ್ಶನವನ್ನು ಪಡೆಯಬಹುದಾಗಿದೆ. ಶ್ರೀ ದೇವಳದಲ್ಲಿ ಸಂಬoಧಪಟ್ಟ ಅರ್ಚಕರುಗಳಿಂದ ಸಾಂಪ್ರದಾಯಿಕ ನಿತ್ಯ ಪೂಜಾದಿ ವಿನಿಯೋಗಗಳು ಎಂದಿನoತೆ ನಡೆಯುವುದು ಎಂದು ಮೋಹನರಾಂ ಸುಳ್ಳಿ ತಿಳಿಸಿದ್ದಾರೆ.

ಕೋವಿಡ್ ನಿಯಮ ಪಾಲಿಸಿ ಸಹಕರಿಸಿ: ದೇವಳದಲ್ಲಿ ಪ್ರಧಾನ ದೇವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮತ್ತಿತರ ಪರಿವಾರ ದೇವರುಗಳ ಗುಡಿಗಳಲ್ಲಿ ಸಂಬoಧಪಟ್ಟ ಅರ್ಚಕರುಗಳಿಂದ ಸಾಂಪ್ರದಾಯಿಕ ನಿತ್ಯ ಪೂಜಾದಿ ವಿನಿಯೋಗಗಳು ಎಂದಿನoತೆ ನಡೆಯುವುದು. ಶ್ರೀ ದೇವಳದ ಒಳಾಂಗಣ ಮತ್ತು ಹೊರಾಂಗಣಗಳನ್ನು ಆಗಾಗ ಸ್ಯಾನಿಟೈಸಿಂಗ್ ಮಾಡಿ ಶುಚಿಗೊಳಿಸುವ ಕಾರ್ಯ ನಡೆಸಲಾಗುವುದು. ಭಕ್ತಾದಿಗಳು ಕಡ್ಡಾಯವಾಗಿ ಕೋವಿಡ್-19 ನಿಯಮಾವಳಿಗಳನ್ನು ಅಸನುಸರಿಸುವಂತೆ ದೇವಳದ ಹೊರಾಂಗಣದಲ್ಲಿ ಧ್ವನಿವರ್ಧಕದ ಮೂಲಕ ಭಕ್ತರಿಗೆ ಜಾಗೃತಿ ಮೂಡಿಸಲು ಕ್ರಮಕೈಗೊಳ್ಳಲಾಗಿದೆ. ಶ್ರೀ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ಸರಕಾರ ಮತ್ತು ಜಿಲ್ಲಾಡಳಿತ ರೂಪಿಸಿರುವ ಕೋವಿಡ್-19 ಮಾರ್ಗಸೂಚಿಗಳನ್ನು ಖಡ್ಡಾಯವಾಗಿ ಪಾಲಿಸಿಕೊಂಡು ಸಹಕರಿಸಬೇಕು ಎಂದು ಅವರು ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು