1:40 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಸರಕಾರದ ಯೋಜನೆ ಪ್ರತಿ ಮನೆ ಮನೆಗೆ ತಲುಪಿಸಲು ಅಮೃತ ಸಮುದಾಯ ಯೋಜನೆ ಅನುಷ್ಠಾನ: ಡಾ.ನಾಗರತ್ನ ಕೆ. ಎ.

07/01/2022, 00:40

ಬಂಟ್ವಾಳ(reporterkarnataka.com): ಸರಕಾರದ ಯೋಜನೆಯು ಪ್ರತಿ ಗ್ರಾಮದ ಮನೆ ಮನೆಗೂ ತಲುಪುವ ಉದ್ದೇಶದಿಂದ ಅಮೃತ ಸಮುದಾಯ ಯೋಜನೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರಿನಲ್ಲಿ ಚಾಲನೆ ನೀಡಿದರು.



ಇದರ ಸಾಂಕೇತಿಕ ಚಾಲನೆಯನ್ನು ಬಂಟ್ವಾಳ ಅಮ್ಟಾಡಿ ಪಿಡಿಓ ರವಿ.ಟಿ.ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಸೇವಾ ಯೋಜನೆಯು ಅಮ್ಟಾಡಿಯಲ್ಲಿ ಒಂದು ವಾರಗಳ ಕಾಲ ಶಿಬಿರ ಮಾಡಿ ಜನರ ಮನಸ್ಸನ್ನು ಗೆದ್ದು,ರಾಷ್ಟ್ರೀಯ ಸೇವಾ ಯೋಜನೆಯಿಂದ ಅಭಿವೃದ್ಧಿ ಕಾರ್ಯ ನಡೆಯಲಿ ಎಂದು ಹಾರೈಸಿದರು.

ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ಸರಕಾರ ಯೋಜನೆಯು ಬಡತನತನ ರೇಖೆಗಿಂತ ಕೆಳಗಿರುವ ಮನೆ ಮನೆಗೂ ತಲುಪಿ ಬಡತನ ಮುಕ್ತವಾಗುವ ನಿಟ್ಟಿನಲ್ಲಿ ಸರಕಾರ ಅಮೃತ ಸಮುದಾಯ ಯೋಜನೆಯನ್ನು ಅನುಷ್ಠಾನ ಗೊಳಿಸಲಾಗಿದೆ. ಇಡೀ ರಾಜ್ಯದಲ್ಲಿ 750 ಗ್ರಾಮಗಳನ್ನು ದತ್ತು ಸ್ವೀಕಾರ ಮಾಡಿದೆ. ಅದನ್ನು ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳ ಮೂಲಕ  ಜಿಲ್ಲೆಯಲ್ಲಿ ಸಕಾರಗೊಳಿಸಲಾಗುವುದು,
ರಾಸೆಯೋ ಯೋಜನಾಧಿಕಾರಿಗಳನ್ನು, ಸ್ವಯಂ ಸೇವಕರನ್ನು ಆಯ್ಕೆ ಮಾಡಲಾಗಿದೆ. ಗ್ರಾಮ ಪಂಚಾಯತ್ ಕಾರ್ಯಾಲಯಗಳ ಸಹಯೋಗದಲ್ಲಿ ನಡೆಸಲಾಗುವುದು ಎಂದರು.

ಬಂಟ್ವಾಳ ಪ್ರಥಮ ದರ್ಜೆ ಕಾಲೇಜಿನ ರಾ. ಸೇ.ಯೋ ಯೋಜನಾಧಿಕಾರಿ  ಹೈದರಾಲಿ ಶಿಬಿರದ  ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್, ಉಪಾಧ್ಯಕ್ಷ ಸುನೀಲ್ ಕೆ., ಮಾಜಿ ಅಧ್ಯಕ್ಷೆ ಭಾರತಿ ಚೌಟ, ಕಾರ್ಯದರ್ಶಿ ಲಕ್ಷ್ಮಿ ನಾರಾಯಣ ಕೆ, ಕ್ಲರ್ಕ್ ಗಣೇಶ್ ಕೆ., ಬಿಲ್ ಕಲೆಕ್ಟರ್ ಚೇತನ್ ಪೂಜಾರಿ ಹಾಗೂ ಸಿಬ್ಬಂದಿಗಳಾದ ಪವಿತ್ರಾ, ಮಲ್ಲಿಕಾ, ಸುಶೀಲಾ, ಪಂಚಾಯತ್ ಸದಸ್ಯ ಫೇಲಿಕ್ಸ್ ಡಿ. ಸೋಜ, ಮಾಜಿ ಅಧ್ಯಕ್ಷೆ ಭಾರತೀ ಚೌಟ,ಉಪಸ್ಥಿತರಿದ್ದರು.




ಬಂಟ್ವಾಳ ಪ್ರಥಮ ದರ್ಜೆ ಕಾಲೇಜಿನ ರಾ.ಸೆ.ಯೋ ಸ್ವಯಂ ಸೇವಕರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು