6:39 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಮುಂದಿನ ದಿನಗಳಲ್ಲಿ ಎಲ್ಲ ಸರಕಾರಿ ಶಾಲೆಗಳ ಅಭಿವೃದ್ಧಿ: ಶಾಸಕ ವೇದವ್ಯಾಸ ಕಾಮತ್

07/01/2022, 08:26

ಮಂಗಳೂರು(reporterkarnataka.com): ಶಿಕ್ಷಣ ವ್ಯವಸ್ಥೆಯನ್ನು ಆಧುನೀಕರಣಗೊಳಿಸಿ ಕ್ಷೇತ್ರದ ಎಲ್ಲಾ ವರ್ಗದ ಮಕ್ಕಳಿಗೂ ಶಿಕ್ಷಣ ನೀಡುವ ಯೋಚನೆಯಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಈಗಾಗಲೇ ನವೀಕರಣಗೊಂಡ‌ ಶಾಲೆಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಸರಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು. 

ಮಂಗಳೂರು ಮಹಾನಗರ ಪಾಲಿಕೆಯ ಕಣ್ಣೂರು ವಾರ್ಡಿನ ದಯಾಂಬು ಸರಕಾರಿ ಪ್ರೌಢಶಾಲೆಯಲ್ಲಿ 35 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರಕಾರಿ ಶಾಲೆಗಳ ಅಭಿವೃದ್ಧಿಯಿಂದ ಬಡ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಸಹಕಾರ ನೀಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಮುಂದುವರಿಯುತ್ತದೆ ಎಂದು ಹೇಳಿದರು. 

ಪಾಲಿಕೆ ಮುಖ್ಯ ಸಚೇತಕ ಸುಧೀರ್ ಶೆಟ್ಟಿ ಕಣ್ಣೂರು ಅವರು ಮಾತನಾಡಿ, ದಯಾಂಬು ಸರಕಾರಿ ಪ್ರೌಢಶಾಲೆಯ ಅಭಿವೃದ್ಧಿಗೆ ಶಾಸಕ ವೇದವ್ಯಾಸ್ ಕಾಮತ್ ಅವರನ್ನು ಮನವಿ ಸಲ್ಲಿಸಿದ್ದ ಸಂದರ್ಭದಲ್ಲಿ ಪೂರಕವಾಗಿ ಸ್ಪಂದಿಸಿದ ಅವರು ತಕ್ಷಣವೇ 35 ಲಕ್ಷ ಅನುದಾನ ಬಿಡುಗಡೆಗೊಳಿಸಿದ್ದರು. 35 ಲಕ್ಷ ರೂಪಾಯಿಯಲ್ಲಿ ತರಗತಿ ಕೊಠಡಿಗಳು ಮತ್ತು ಶೌಚಾಲಯ ನಿರ್ಮಾಣ ಮಾಡಲಾಗಿದೆ. ಶಾಲೆಯ ಅಭಿವೃದ್ಧಿಯಿಂದ ಈ ಭಾಗದ ಮಕ್ಕಳಿಗೆ ಹೆಚ್ಚಿನ ಸೌಲಭ್ಯ ಒದಗಿಸಲಾಗಿದೆ ಎಂದರು. 

ಸಭಾಧ್ಯಕ್ಷತೆ ವಹಿಸಿಕೊಂಡಿದ್ದ ಸ್ಥಳೀಯ ಕಾರ್ಪೋರೇಟರ್ ಚಂದ್ರಾವತಿ ವಿಶ್ವನಾಥ್ ಅವರು, ದಯಾಂಬು ಶಾಲೆಯ ಅಭಿವೃದ್ಧಿಗೆ ಪೂರಕವಾಗಿ ಶಾಸಕರ ಪ್ರಯತ್ನದಿಂದ ಸಮೀಪದಲ್ಲಿ ಅಂಗನವಾಡಿ ನಿರ್ಮಾಣವೂ ಆಗುತ್ತಿದೆ. ಈ ಪರಿಸರದ ಮಕ್ಕಳ ವಿಧ್ಯಾಭ್ಯಾಸಕ್ಕೆ ಶಾಲೆಯ ಅಭಿವೃದ್ಧಿಯ ಅನಿವಾರ್ಯತೆಯನ್ನು ಮನಗಂಡು ಅನುದಾನ ಒದಗಿಸಿದ ಶಾಸಕರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು. 

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಗೀತಾನಂದ ಶೆಟ್ಟಿ, ದೇವದಾಸ್ ಶೆಟ್ಟಿ, ಯಶವಂತ್ ವೀರನಗರ, ಸುನಿಲ್ ಕೊಡಕ್ಕಲ್, ಜಗದೀಶ್ ಕೊಟ್ಟಾರಿ ಬಲ್ಲೂರು, ಇಕ್ಬಾಲ್ ಬಲ್ಲೂರುಗುಡ್ಡೆ, ಎಸ್.ಡಿ ಶಾಕಿರ್ ದಯಾಂಬು, ಕಬೀರ್ ಬಲ್ಲೂರುಗುಡ್ಡೆ, ಕಟ್ಟಡ ನಿರ್ಮಾಣಕ್ಕೆ ಸ್ಥಳ ಒದಗಿಸಿದ ಹಾಜಿ ಮಹಮ್ಮದ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಅಹಮ್ಮದ್ ಬಾವಾ, ದಯಾಂಬು ಮಸೀದಿಯ ಅಧ್ಯಕ್ಷರಾದ ಮೊಹಮ್ಮದ್, ಶಿಕ್ಷಣ ಇಲಾಖೆಯ ಅಧಿಕಾರಿ ಪ್ರಶಾಂತ್,  ಪ್ರೌಢಶಾಲಾ ಮುಖ್ಯ ಶಿಕ್ಷಕ ಪೌಲ್ ರೋಡ್ರೀಗಸ್ ಸ್ವಾಗತಿಸಿ, ಹರಿಣಾಕ್ಷಿ ನಿರೂಪಿಸಿದರು, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸುಶೀಲಾ ಭಾಯಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು