10:27 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಪ್ರತಿಯೊಬ್ಬರು ಧೃತಿಗೆಡದೆ ಆತ್ಮಸ್ಥೈರ್ಯದಿಂದ ಬದುಕು ಮುನ್ನಡೆಸಿ: ಶ್ರೀ ನಿರ್ಮಲಾನಂದ ಸ್ವಾಮೀಜಿ ಕರೆ

03/06/2021, 16:49

ನಾಗಮಂಗಲ(reporterkarnataka news): ಇಂದಿನ ಮಹಾಮಾರಿ ಕೊರೊನಾದಿಂದ ರಾಜ್ಯ ದೇಶ ಧೃತಿಗೆಟ್ಟಿದ್ದು, ಬದುಕುವ ಜೀವದ ಜೊತೆ ಇರಬೇಕು. ಯಾರು ಕೂಡ ಧೃತಿಗೆಡಬಾರದು ಎಂದು ಆದಿಚುಂಚನಗಿರಿಯ ಜಗದ್ಗುರು ಶ್ರೀ ನಿರ್ಮಲಾನಂದ ಸ್ವಾಮಿಗಳು ಕರೆ ನೀಡಿದರು.

ಅವರಿಂದ ನಾಗಮಂಗಲ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಸಿ ಆರ್ ಎಸ್ .ಫೌಂಡೇಶನ್ ಹಮ್ಮಿಕೊಂಡಿದ್ದ ತುರ್ತು ವಾಹನ ಹಾಗೂ ಪೌರಕಾರ್ಮಿಕರಿಗೆ ಆಶಾ ಕಾರ್ಯಕರ್ತರಿಗೆ ಆಹಾರಕ್ಕೆ ಕಿಟ್ ನೀಡುವ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಇಂದು ದೇಶಾದ್ಯಂತ ಮಹಾಮಾರಿಯು ಹಬ್ಬಿರುವ ಹಿನ್ನೆಲೆಯಲ್ಲಿ ಬದುಕುವ ದಾರಿಯ ಹುಡುಕುತ್ತ ನಾವುಗಳು ಆತ್ಮಸ್ಥೈರ್ಯದಿಂದ ಧೃತಿಗೆಡದೆ ಧೈರ್ಯದಿಂದ ಜೀವ ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕೆಂದು ತಿಳಿಸಿದರು.

ನಾವುಗಳು ಮೊದಲನೆಯ ಅಲೆಯಲ್ಲಿ ಅಲ್ಪ ಪ್ರಮಾಣದ ಬದುಕು ಎದುರಿಸುತ್ತಿದ್ದು ಎರಡನೇ ಅಲೆ ಇಂದು ದೇಶ ವ್ಯಾಪಿಸಿ ಬದುಕುವ ಸಂಕಷ್ಟದ ಹಾದಿಯಲ್ಲಿದೆ.ನಾವುಗಳು ಹೆದರದೆ ಆತ್ಮವಿಶ್ವಾಸದಿಂದ ಮುಂಬರುವ ದಿನಗಳಲ್ಲಿ ಸಾಮಾಜಿಕ ಅಂತರದೊಂದಿಗೆ  ಬದುಕಬೇಕಾದ ಸ್ಥಿತಿ  ನಿರ್ಮಾಣವಾಗಿದೆ. ಇಂತಹ  ಇಕ್ಕಟ್ಟಿನಲ್ಲಿ ನಾವುಗಳೆಲ್ಲರೂ ಎಚ್ಚರದಿಂದ  ಇರಬೇಕಾದ ಅಗತ್ಯ ಎಂದು ತಿಳಿಸಿದರು.

ಸಾರ್ವಜನಿಕರು ಯಾವುದೇ ಭಯಬೀತರಾಗದೆ ಆತ್ಮಹತ್ಯೆಯಂತಹ ಚಿಂತನೆಯನ್ನು ಕೈಬಿಟ್ಟು ಈ ರೋಗಮುಕ್ತ ಸಮಾಜವನ್ನು ನಿರ್ಮಾಣ ಮಾಡುವುದಕ್ಕೆ ಸಹಕರಿಸಬೇಕು. ಇದರ ಜೊತೆಗೆ ಬ್ಲಾಕ್ ಪಂಗಸ್ ರೋಗವು ಸಹ ಹರಡುತ್ತಿದ್ದು ಸಾರ್ವಜನಿಕರು ಆದಷ್ಟು ಸುರಕ್ಷಿತವಾಗಿ ಇರಬೇಕಾಗುತ್ತದೆ. ಈ ಕೊರೊನಾ ರೋಗವನ್ನು ನಿರ್ಮೂಲನ ಮಾಡಲು ಸರ್ಕಾರವು ಸಹ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಮುಂದಿನ ಹತ್ತು ದಿನಗಳಲ್ಲಿ ನಮ್ಮ ಆದಿಚುಂಚನಗಿರಿ ಆಸ್ಪತ್ರೆಯ ಆವರಣದಲ್ಲಿ ಆಕ್ಸಿಜನ್ ಪ್ಲಾಂಟನ್ನು ನಿರ್ಮಾಣ ಮಾಡುತ್ತಿದ್ದು ನಮ್ಮ ಆಸ್ಪತ್ರೆಯಲ್ಲಿ ಸಾವಿರ ರೋಗಿಗಳು ಬಂದರೂ ಸಹ ಚಿಕಿತ್ಸೆಯನ್ನು ನೀಡಲಾಗುವುದು. ಆದ್ದರಿಂದ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಬೇಕು ಎಂದು ತಿಳಿಸಿದರು

ನಾಗಮಂಗಲದ ಮಾಜಿ ಶಾಸಕರಾದ ಚೆಲುವರಾಯಸ್ವಾಮಿ ಅವರು, ಸಿ.ಆರ್.ಎಸ್ ಫೌಂಡೇಶನ್ ಸಮಾಜಮುಖಿ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು