4:44 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಪ್ರತಿಯೊಬ್ಬರು ಧೃತಿಗೆಡದೆ ಆತ್ಮಸ್ಥೈರ್ಯದಿಂದ ಬದುಕು ಮುನ್ನಡೆಸಿ: ಶ್ರೀ ನಿರ್ಮಲಾನಂದ ಸ್ವಾಮೀಜಿ ಕರೆ

03/06/2021, 16:49

ನಾಗಮಂಗಲ(reporterkarnataka news): ಇಂದಿನ ಮಹಾಮಾರಿ ಕೊರೊನಾದಿಂದ ರಾಜ್ಯ ದೇಶ ಧೃತಿಗೆಟ್ಟಿದ್ದು, ಬದುಕುವ ಜೀವದ ಜೊತೆ ಇರಬೇಕು. ಯಾರು ಕೂಡ ಧೃತಿಗೆಡಬಾರದು ಎಂದು ಆದಿಚುಂಚನಗಿರಿಯ ಜಗದ್ಗುರು ಶ್ರೀ ನಿರ್ಮಲಾನಂದ ಸ್ವಾಮಿಗಳು ಕರೆ ನೀಡಿದರು.

ಅವರಿಂದ ನಾಗಮಂಗಲ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಸಿ ಆರ್ ಎಸ್ .ಫೌಂಡೇಶನ್ ಹಮ್ಮಿಕೊಂಡಿದ್ದ ತುರ್ತು ವಾಹನ ಹಾಗೂ ಪೌರಕಾರ್ಮಿಕರಿಗೆ ಆಶಾ ಕಾರ್ಯಕರ್ತರಿಗೆ ಆಹಾರಕ್ಕೆ ಕಿಟ್ ನೀಡುವ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಇಂದು ದೇಶಾದ್ಯಂತ ಮಹಾಮಾರಿಯು ಹಬ್ಬಿರುವ ಹಿನ್ನೆಲೆಯಲ್ಲಿ ಬದುಕುವ ದಾರಿಯ ಹುಡುಕುತ್ತ ನಾವುಗಳು ಆತ್ಮಸ್ಥೈರ್ಯದಿಂದ ಧೃತಿಗೆಡದೆ ಧೈರ್ಯದಿಂದ ಜೀವ ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕೆಂದು ತಿಳಿಸಿದರು.

ನಾವುಗಳು ಮೊದಲನೆಯ ಅಲೆಯಲ್ಲಿ ಅಲ್ಪ ಪ್ರಮಾಣದ ಬದುಕು ಎದುರಿಸುತ್ತಿದ್ದು ಎರಡನೇ ಅಲೆ ಇಂದು ದೇಶ ವ್ಯಾಪಿಸಿ ಬದುಕುವ ಸಂಕಷ್ಟದ ಹಾದಿಯಲ್ಲಿದೆ.ನಾವುಗಳು ಹೆದರದೆ ಆತ್ಮವಿಶ್ವಾಸದಿಂದ ಮುಂಬರುವ ದಿನಗಳಲ್ಲಿ ಸಾಮಾಜಿಕ ಅಂತರದೊಂದಿಗೆ  ಬದುಕಬೇಕಾದ ಸ್ಥಿತಿ  ನಿರ್ಮಾಣವಾಗಿದೆ. ಇಂತಹ  ಇಕ್ಕಟ್ಟಿನಲ್ಲಿ ನಾವುಗಳೆಲ್ಲರೂ ಎಚ್ಚರದಿಂದ  ಇರಬೇಕಾದ ಅಗತ್ಯ ಎಂದು ತಿಳಿಸಿದರು.

ಸಾರ್ವಜನಿಕರು ಯಾವುದೇ ಭಯಬೀತರಾಗದೆ ಆತ್ಮಹತ್ಯೆಯಂತಹ ಚಿಂತನೆಯನ್ನು ಕೈಬಿಟ್ಟು ಈ ರೋಗಮುಕ್ತ ಸಮಾಜವನ್ನು ನಿರ್ಮಾಣ ಮಾಡುವುದಕ್ಕೆ ಸಹಕರಿಸಬೇಕು. ಇದರ ಜೊತೆಗೆ ಬ್ಲಾಕ್ ಪಂಗಸ್ ರೋಗವು ಸಹ ಹರಡುತ್ತಿದ್ದು ಸಾರ್ವಜನಿಕರು ಆದಷ್ಟು ಸುರಕ್ಷಿತವಾಗಿ ಇರಬೇಕಾಗುತ್ತದೆ. ಈ ಕೊರೊನಾ ರೋಗವನ್ನು ನಿರ್ಮೂಲನ ಮಾಡಲು ಸರ್ಕಾರವು ಸಹ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಮುಂದಿನ ಹತ್ತು ದಿನಗಳಲ್ಲಿ ನಮ್ಮ ಆದಿಚುಂಚನಗಿರಿ ಆಸ್ಪತ್ರೆಯ ಆವರಣದಲ್ಲಿ ಆಕ್ಸಿಜನ್ ಪ್ಲಾಂಟನ್ನು ನಿರ್ಮಾಣ ಮಾಡುತ್ತಿದ್ದು ನಮ್ಮ ಆಸ್ಪತ್ರೆಯಲ್ಲಿ ಸಾವಿರ ರೋಗಿಗಳು ಬಂದರೂ ಸಹ ಚಿಕಿತ್ಸೆಯನ್ನು ನೀಡಲಾಗುವುದು. ಆದ್ದರಿಂದ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಬೇಕು ಎಂದು ತಿಳಿಸಿದರು

ನಾಗಮಂಗಲದ ಮಾಜಿ ಶಾಸಕರಾದ ಚೆಲುವರಾಯಸ್ವಾಮಿ ಅವರು, ಸಿ.ಆರ್.ಎಸ್ ಫೌಂಡೇಶನ್ ಸಮಾಜಮುಖಿ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು