4:00 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಪ್ರತಿಯೊಬ್ಬರು ಧೃತಿಗೆಡದೆ ಆತ್ಮಸ್ಥೈರ್ಯದಿಂದ ಬದುಕು ಮುನ್ನಡೆಸಿ: ಶ್ರೀ ನಿರ್ಮಲಾನಂದ ಸ್ವಾಮೀಜಿ ಕರೆ

03/06/2021, 16:49

ನಾಗಮಂಗಲ(reporterkarnataka news): ಇಂದಿನ ಮಹಾಮಾರಿ ಕೊರೊನಾದಿಂದ ರಾಜ್ಯ ದೇಶ ಧೃತಿಗೆಟ್ಟಿದ್ದು, ಬದುಕುವ ಜೀವದ ಜೊತೆ ಇರಬೇಕು. ಯಾರು ಕೂಡ ಧೃತಿಗೆಡಬಾರದು ಎಂದು ಆದಿಚುಂಚನಗಿರಿಯ ಜಗದ್ಗುರು ಶ್ರೀ ನಿರ್ಮಲಾನಂದ ಸ್ವಾಮಿಗಳು ಕರೆ ನೀಡಿದರು.

ಅವರಿಂದ ನಾಗಮಂಗಲ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಸಿ ಆರ್ ಎಸ್ .ಫೌಂಡೇಶನ್ ಹಮ್ಮಿಕೊಂಡಿದ್ದ ತುರ್ತು ವಾಹನ ಹಾಗೂ ಪೌರಕಾರ್ಮಿಕರಿಗೆ ಆಶಾ ಕಾರ್ಯಕರ್ತರಿಗೆ ಆಹಾರಕ್ಕೆ ಕಿಟ್ ನೀಡುವ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಇಂದು ದೇಶಾದ್ಯಂತ ಮಹಾಮಾರಿಯು ಹಬ್ಬಿರುವ ಹಿನ್ನೆಲೆಯಲ್ಲಿ ಬದುಕುವ ದಾರಿಯ ಹುಡುಕುತ್ತ ನಾವುಗಳು ಆತ್ಮಸ್ಥೈರ್ಯದಿಂದ ಧೃತಿಗೆಡದೆ ಧೈರ್ಯದಿಂದ ಜೀವ ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕೆಂದು ತಿಳಿಸಿದರು.

ನಾವುಗಳು ಮೊದಲನೆಯ ಅಲೆಯಲ್ಲಿ ಅಲ್ಪ ಪ್ರಮಾಣದ ಬದುಕು ಎದುರಿಸುತ್ತಿದ್ದು ಎರಡನೇ ಅಲೆ ಇಂದು ದೇಶ ವ್ಯಾಪಿಸಿ ಬದುಕುವ ಸಂಕಷ್ಟದ ಹಾದಿಯಲ್ಲಿದೆ.ನಾವುಗಳು ಹೆದರದೆ ಆತ್ಮವಿಶ್ವಾಸದಿಂದ ಮುಂಬರುವ ದಿನಗಳಲ್ಲಿ ಸಾಮಾಜಿಕ ಅಂತರದೊಂದಿಗೆ  ಬದುಕಬೇಕಾದ ಸ್ಥಿತಿ  ನಿರ್ಮಾಣವಾಗಿದೆ. ಇಂತಹ  ಇಕ್ಕಟ್ಟಿನಲ್ಲಿ ನಾವುಗಳೆಲ್ಲರೂ ಎಚ್ಚರದಿಂದ  ಇರಬೇಕಾದ ಅಗತ್ಯ ಎಂದು ತಿಳಿಸಿದರು.

ಸಾರ್ವಜನಿಕರು ಯಾವುದೇ ಭಯಬೀತರಾಗದೆ ಆತ್ಮಹತ್ಯೆಯಂತಹ ಚಿಂತನೆಯನ್ನು ಕೈಬಿಟ್ಟು ಈ ರೋಗಮುಕ್ತ ಸಮಾಜವನ್ನು ನಿರ್ಮಾಣ ಮಾಡುವುದಕ್ಕೆ ಸಹಕರಿಸಬೇಕು. ಇದರ ಜೊತೆಗೆ ಬ್ಲಾಕ್ ಪಂಗಸ್ ರೋಗವು ಸಹ ಹರಡುತ್ತಿದ್ದು ಸಾರ್ವಜನಿಕರು ಆದಷ್ಟು ಸುರಕ್ಷಿತವಾಗಿ ಇರಬೇಕಾಗುತ್ತದೆ. ಈ ಕೊರೊನಾ ರೋಗವನ್ನು ನಿರ್ಮೂಲನ ಮಾಡಲು ಸರ್ಕಾರವು ಸಹ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಮುಂದಿನ ಹತ್ತು ದಿನಗಳಲ್ಲಿ ನಮ್ಮ ಆದಿಚುಂಚನಗಿರಿ ಆಸ್ಪತ್ರೆಯ ಆವರಣದಲ್ಲಿ ಆಕ್ಸಿಜನ್ ಪ್ಲಾಂಟನ್ನು ನಿರ್ಮಾಣ ಮಾಡುತ್ತಿದ್ದು ನಮ್ಮ ಆಸ್ಪತ್ರೆಯಲ್ಲಿ ಸಾವಿರ ರೋಗಿಗಳು ಬಂದರೂ ಸಹ ಚಿಕಿತ್ಸೆಯನ್ನು ನೀಡಲಾಗುವುದು. ಆದ್ದರಿಂದ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಬೇಕು ಎಂದು ತಿಳಿಸಿದರು

ನಾಗಮಂಗಲದ ಮಾಜಿ ಶಾಸಕರಾದ ಚೆಲುವರಾಯಸ್ವಾಮಿ ಅವರು, ಸಿ.ಆರ್.ಎಸ್ ಫೌಂಡೇಶನ್ ಸಮಾಜಮುಖಿ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು