3:31 AM Saturday4 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಪ್ರತಿಯೊಬ್ಬರು ಧೃತಿಗೆಡದೆ ಆತ್ಮಸ್ಥೈರ್ಯದಿಂದ ಬದುಕು ಮುನ್ನಡೆಸಿ: ಶ್ರೀ ನಿರ್ಮಲಾನಂದ ಸ್ವಾಮೀಜಿ ಕರೆ

03/06/2021, 16:49

ನಾಗಮಂಗಲ(reporterkarnataka news): ಇಂದಿನ ಮಹಾಮಾರಿ ಕೊರೊನಾದಿಂದ ರಾಜ್ಯ ದೇಶ ಧೃತಿಗೆಟ್ಟಿದ್ದು, ಬದುಕುವ ಜೀವದ ಜೊತೆ ಇರಬೇಕು. ಯಾರು ಕೂಡ ಧೃತಿಗೆಡಬಾರದು ಎಂದು ಆದಿಚುಂಚನಗಿರಿಯ ಜಗದ್ಗುರು ಶ್ರೀ ನಿರ್ಮಲಾನಂದ ಸ್ವಾಮಿಗಳು ಕರೆ ನೀಡಿದರು.

ಅವರಿಂದ ನಾಗಮಂಗಲ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಸಿ ಆರ್ ಎಸ್ .ಫೌಂಡೇಶನ್ ಹಮ್ಮಿಕೊಂಡಿದ್ದ ತುರ್ತು ವಾಹನ ಹಾಗೂ ಪೌರಕಾರ್ಮಿಕರಿಗೆ ಆಶಾ ಕಾರ್ಯಕರ್ತರಿಗೆ ಆಹಾರಕ್ಕೆ ಕಿಟ್ ನೀಡುವ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಇಂದು ದೇಶಾದ್ಯಂತ ಮಹಾಮಾರಿಯು ಹಬ್ಬಿರುವ ಹಿನ್ನೆಲೆಯಲ್ಲಿ ಬದುಕುವ ದಾರಿಯ ಹುಡುಕುತ್ತ ನಾವುಗಳು ಆತ್ಮಸ್ಥೈರ್ಯದಿಂದ ಧೃತಿಗೆಡದೆ ಧೈರ್ಯದಿಂದ ಜೀವ ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕೆಂದು ತಿಳಿಸಿದರು.

ನಾವುಗಳು ಮೊದಲನೆಯ ಅಲೆಯಲ್ಲಿ ಅಲ್ಪ ಪ್ರಮಾಣದ ಬದುಕು ಎದುರಿಸುತ್ತಿದ್ದು ಎರಡನೇ ಅಲೆ ಇಂದು ದೇಶ ವ್ಯಾಪಿಸಿ ಬದುಕುವ ಸಂಕಷ್ಟದ ಹಾದಿಯಲ್ಲಿದೆ.ನಾವುಗಳು ಹೆದರದೆ ಆತ್ಮವಿಶ್ವಾಸದಿಂದ ಮುಂಬರುವ ದಿನಗಳಲ್ಲಿ ಸಾಮಾಜಿಕ ಅಂತರದೊಂದಿಗೆ  ಬದುಕಬೇಕಾದ ಸ್ಥಿತಿ  ನಿರ್ಮಾಣವಾಗಿದೆ. ಇಂತಹ  ಇಕ್ಕಟ್ಟಿನಲ್ಲಿ ನಾವುಗಳೆಲ್ಲರೂ ಎಚ್ಚರದಿಂದ  ಇರಬೇಕಾದ ಅಗತ್ಯ ಎಂದು ತಿಳಿಸಿದರು.

ಸಾರ್ವಜನಿಕರು ಯಾವುದೇ ಭಯಬೀತರಾಗದೆ ಆತ್ಮಹತ್ಯೆಯಂತಹ ಚಿಂತನೆಯನ್ನು ಕೈಬಿಟ್ಟು ಈ ರೋಗಮುಕ್ತ ಸಮಾಜವನ್ನು ನಿರ್ಮಾಣ ಮಾಡುವುದಕ್ಕೆ ಸಹಕರಿಸಬೇಕು. ಇದರ ಜೊತೆಗೆ ಬ್ಲಾಕ್ ಪಂಗಸ್ ರೋಗವು ಸಹ ಹರಡುತ್ತಿದ್ದು ಸಾರ್ವಜನಿಕರು ಆದಷ್ಟು ಸುರಕ್ಷಿತವಾಗಿ ಇರಬೇಕಾಗುತ್ತದೆ. ಈ ಕೊರೊನಾ ರೋಗವನ್ನು ನಿರ್ಮೂಲನ ಮಾಡಲು ಸರ್ಕಾರವು ಸಹ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಮುಂದಿನ ಹತ್ತು ದಿನಗಳಲ್ಲಿ ನಮ್ಮ ಆದಿಚುಂಚನಗಿರಿ ಆಸ್ಪತ್ರೆಯ ಆವರಣದಲ್ಲಿ ಆಕ್ಸಿಜನ್ ಪ್ಲಾಂಟನ್ನು ನಿರ್ಮಾಣ ಮಾಡುತ್ತಿದ್ದು ನಮ್ಮ ಆಸ್ಪತ್ರೆಯಲ್ಲಿ ಸಾವಿರ ರೋಗಿಗಳು ಬಂದರೂ ಸಹ ಚಿಕಿತ್ಸೆಯನ್ನು ನೀಡಲಾಗುವುದು. ಆದ್ದರಿಂದ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಬೇಕು ಎಂದು ತಿಳಿಸಿದರು

ನಾಗಮಂಗಲದ ಮಾಜಿ ಶಾಸಕರಾದ ಚೆಲುವರಾಯಸ್ವಾಮಿ ಅವರು, ಸಿ.ಆರ್.ಎಸ್ ಫೌಂಡೇಶನ್ ಸಮಾಜಮುಖಿ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು