10:30 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಹೋಟೆಲ್‌ ನಲ್ಲಿ ಊಟ ತೆಗೆಸಿಕೊಡದ ಬೇಸರ: ಇಬ್ಬರು ಕಂದಮ್ಮಗಳ ಜತೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ 

07/01/2022, 15:08

ದೊಡ್ಡಬಳ್ಳಾಪುರ(reporterkarnataka.com): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಎಸ್ ಎಂ ಗೊಲ್ಲಹಳ್ಳಿಯಲ್ಲಿಯಲ್ಲಿ ಮಹಿಳೆಯೊಬ್ಬರು ತನ್ನಿಬ್ಬರು ಪುಟ್ಟ ಮಕ್ಕಳಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ.

ಬೆಂಕಿಯ ಕೆನ್ನಾಲೆಗೆಗೆ ತಾಯಿ ಸಂಧ್ಯಾ (33) ಮತ್ತು ಆಕೆಯ 4 ಹಾಗೂ 2 ವರ್ಷದ ಮಕ್ಕಳು ಮೃತಪಟ್ಟಿದ್ದಾರೆ. ಸಂಧ್ಯಾ ಅವರ ವಿವಾಹವು ಶ್ರೀಕಾಂತ‌ ಎನ್ನುವವರ ಜತೆ 5 ವರ್ಷಗಳ ಹಿಂದೆ ನಡೆದಿದೆ. ಅತ್ತೆ-ಮಾವನ ಜತೆ ಸಂಧ್ಯಾ ನೆಲೆಸಿದ್ದರು. ಆದರೆ ಗುರುವಾರ ದಿವಸ ಸಂಧ್ಯಾ 5 ಲೀಟರ್‌ ಪೆಟ್ರೋಲ್ ಖರೀದಿಸಿ ಎಲ್ಲರ ಮೈಮೇಲೂ ಅದನ್ನು ಸುರಿದು ಬೆಂಕಿ ಹಚ್ಚಿಕೊಂಡಿದ್ದಾಳೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ. ಘಟನೆ ವೇಳೆ ತನ್ನಿಬ್ಬರು ಮಕ್ಕಳನ್ನು ಆಕೆ ಬಿಗಿಯಾಗಿ ಅಪ್ಪಿ ಹಿಡಿದುಕೊಂಡಿದ್ದಳು.

ಸ್ಥಳೀಯರು ಹೇಳುವ ಪ್ರಕಾರ ಕುಟುಂಬದಲ್ಲಿ ಯಾವುದೇ ಮನಸ್ತಾಪ ಇರಲಿಲ್ಲ. ಎಲ್ಲರೂ ಅನ್ಯೋನ್ಯವಾಗಿದ್ದರು ಎಂದಿದ್ದರು. ಆದ್ದರಿಂದ ಈ ಆತ್ಮಹತ್ಯೆಯ ಹಿಂದಿನ ಕಾರಣ ನಿಗೂಢವಾಗಿತ್ತು.

ಅದನ್ನೀಗ ಪೊಲೀಸರು ಭೇದಿಸಿದ್ದಾರೆ. ಸಂಧ್ಯಾ ಅವರು ಹುಟ್ಟಿ ಬೆಳೆದಿದ್ದು ಪಟ್ಟಣದಲ್ಲಿ. ಬೆಂಗಳೂರಿನ ಯಲಹಂಕದಲ್ಲಿ ಅವರು ಬೆಳೆದದ್ದು. ಅವರಿಗೆ ವಾರಕ್ಕೊಮ್ಮೆಯಾದರೂ ಹೊರಗಡೆ ಸುತ್ತಾಡಿ ಮಕ್ಕಳ ಜತೆಯಲ್ಲಿ ಹೋಟೆಲ್‌ನಲ್ಲಿ ತಿನ್ನುವ ಆಸೆ. ಆದರೆ ಹಳ್ಳಿಯಲ್ಲಿ ಹುಟ್ಟಿದ್ದ ಗಂಡನಿಗೆ ಇದು ಇಷ್ಟವಿರಲಿಲ್ಲ. ಮನೆಯಲ್ಲಿಯೇ ಚೆನ್ನಾಗಿ ತಿನ್ನುವ ಬದಲು ಹೊರಗಡೆ ಆಹಾರ ಏಕೆ ಎಂದು ಕೇಳುತ್ತಿದ್ದರು. ಇದರಿಂದ ಸಂಧ್ಯಾ ತುಂಬಾ ನೊಂದುಕೊಂಡಿದ್ದರು ಎನ್ನಲಾಗಿದೆ.

ಹೋಟೆಲ್‌ಗೆ ಕರೆದುಕೊಂಡು ಹೋಗುವಂತೆ ಗಂಡನಿಗೆ ಸಂಧ್ಯಾ ನಿತ್ಯವೂ ಹೇಳುತ್ತಿದ್ದರು. ತವರು ಮನೆಯಲ್ಲಿ ಇರುವಾಗ ವಾರಕ್ಕೆ ಎರಡು ಬಾರಿಯಾದರೂ ಹೋಟೆಲ್‌ಗೆ ಹೋಗುತ್ತಿದ್ದರು. ಆದರೆ ಗಂಡ ಅದನ್ನು ಒಪ್ಪುತ್ತಿಲ್ಲ ಎಂದು ಸಂಧ್ಯಾ ಅಮ್ಮನ ಬಳಿ ಕೂಡ ನೋವು ತೋಡಿಕೊಂಡಿದ್ದರು. ತನ್ನ ಜೀವನ ಇಷ್ಟೇ ಆಗಿಹೋಯ್ತು. ತನ್ನ ಆಸೆ ಈಡೇರುವುದೇ ಇಲ್ಲ ಎಂದು ನೊಂದುಕೊಂಡ ಸಂಧ್ಯಾ ಜೀವನವೇ ಬೇಡ ಎಂದುಕೊಂಡು ಇಬ್ಬರು ಮಕ್ಕಳ ಜತೆ ಪೆಟ್ರೋಲ್‌ ಸುರಿದಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಈಗ ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು