12:54 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಹೋಟೆಲ್‌ ನಲ್ಲಿ ಊಟ ತೆಗೆಸಿಕೊಡದ ಬೇಸರ: ಇಬ್ಬರು ಕಂದಮ್ಮಗಳ ಜತೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ 

07/01/2022, 15:08

ದೊಡ್ಡಬಳ್ಳಾಪುರ(reporterkarnataka.com): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಎಸ್ ಎಂ ಗೊಲ್ಲಹಳ್ಳಿಯಲ್ಲಿಯಲ್ಲಿ ಮಹಿಳೆಯೊಬ್ಬರು ತನ್ನಿಬ್ಬರು ಪುಟ್ಟ ಮಕ್ಕಳಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ.

ಬೆಂಕಿಯ ಕೆನ್ನಾಲೆಗೆಗೆ ತಾಯಿ ಸಂಧ್ಯಾ (33) ಮತ್ತು ಆಕೆಯ 4 ಹಾಗೂ 2 ವರ್ಷದ ಮಕ್ಕಳು ಮೃತಪಟ್ಟಿದ್ದಾರೆ. ಸಂಧ್ಯಾ ಅವರ ವಿವಾಹವು ಶ್ರೀಕಾಂತ‌ ಎನ್ನುವವರ ಜತೆ 5 ವರ್ಷಗಳ ಹಿಂದೆ ನಡೆದಿದೆ. ಅತ್ತೆ-ಮಾವನ ಜತೆ ಸಂಧ್ಯಾ ನೆಲೆಸಿದ್ದರು. ಆದರೆ ಗುರುವಾರ ದಿವಸ ಸಂಧ್ಯಾ 5 ಲೀಟರ್‌ ಪೆಟ್ರೋಲ್ ಖರೀದಿಸಿ ಎಲ್ಲರ ಮೈಮೇಲೂ ಅದನ್ನು ಸುರಿದು ಬೆಂಕಿ ಹಚ್ಚಿಕೊಂಡಿದ್ದಾಳೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ. ಘಟನೆ ವೇಳೆ ತನ್ನಿಬ್ಬರು ಮಕ್ಕಳನ್ನು ಆಕೆ ಬಿಗಿಯಾಗಿ ಅಪ್ಪಿ ಹಿಡಿದುಕೊಂಡಿದ್ದಳು.

ಸ್ಥಳೀಯರು ಹೇಳುವ ಪ್ರಕಾರ ಕುಟುಂಬದಲ್ಲಿ ಯಾವುದೇ ಮನಸ್ತಾಪ ಇರಲಿಲ್ಲ. ಎಲ್ಲರೂ ಅನ್ಯೋನ್ಯವಾಗಿದ್ದರು ಎಂದಿದ್ದರು. ಆದ್ದರಿಂದ ಈ ಆತ್ಮಹತ್ಯೆಯ ಹಿಂದಿನ ಕಾರಣ ನಿಗೂಢವಾಗಿತ್ತು.

ಅದನ್ನೀಗ ಪೊಲೀಸರು ಭೇದಿಸಿದ್ದಾರೆ. ಸಂಧ್ಯಾ ಅವರು ಹುಟ್ಟಿ ಬೆಳೆದಿದ್ದು ಪಟ್ಟಣದಲ್ಲಿ. ಬೆಂಗಳೂರಿನ ಯಲಹಂಕದಲ್ಲಿ ಅವರು ಬೆಳೆದದ್ದು. ಅವರಿಗೆ ವಾರಕ್ಕೊಮ್ಮೆಯಾದರೂ ಹೊರಗಡೆ ಸುತ್ತಾಡಿ ಮಕ್ಕಳ ಜತೆಯಲ್ಲಿ ಹೋಟೆಲ್‌ನಲ್ಲಿ ತಿನ್ನುವ ಆಸೆ. ಆದರೆ ಹಳ್ಳಿಯಲ್ಲಿ ಹುಟ್ಟಿದ್ದ ಗಂಡನಿಗೆ ಇದು ಇಷ್ಟವಿರಲಿಲ್ಲ. ಮನೆಯಲ್ಲಿಯೇ ಚೆನ್ನಾಗಿ ತಿನ್ನುವ ಬದಲು ಹೊರಗಡೆ ಆಹಾರ ಏಕೆ ಎಂದು ಕೇಳುತ್ತಿದ್ದರು. ಇದರಿಂದ ಸಂಧ್ಯಾ ತುಂಬಾ ನೊಂದುಕೊಂಡಿದ್ದರು ಎನ್ನಲಾಗಿದೆ.

ಹೋಟೆಲ್‌ಗೆ ಕರೆದುಕೊಂಡು ಹೋಗುವಂತೆ ಗಂಡನಿಗೆ ಸಂಧ್ಯಾ ನಿತ್ಯವೂ ಹೇಳುತ್ತಿದ್ದರು. ತವರು ಮನೆಯಲ್ಲಿ ಇರುವಾಗ ವಾರಕ್ಕೆ ಎರಡು ಬಾರಿಯಾದರೂ ಹೋಟೆಲ್‌ಗೆ ಹೋಗುತ್ತಿದ್ದರು. ಆದರೆ ಗಂಡ ಅದನ್ನು ಒಪ್ಪುತ್ತಿಲ್ಲ ಎಂದು ಸಂಧ್ಯಾ ಅಮ್ಮನ ಬಳಿ ಕೂಡ ನೋವು ತೋಡಿಕೊಂಡಿದ್ದರು. ತನ್ನ ಜೀವನ ಇಷ್ಟೇ ಆಗಿಹೋಯ್ತು. ತನ್ನ ಆಸೆ ಈಡೇರುವುದೇ ಇಲ್ಲ ಎಂದು ನೊಂದುಕೊಂಡ ಸಂಧ್ಯಾ ಜೀವನವೇ ಬೇಡ ಎಂದುಕೊಂಡು ಇಬ್ಬರು ಮಕ್ಕಳ ಜತೆ ಪೆಟ್ರೋಲ್‌ ಸುರಿದಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಈಗ ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು