7:33 AM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಕರ್ಫ್ಯೂ ಹೆಸರಿನಲ್ಲಿ ಹೊಟ್ಟೆಗೆ ಹೊಡೆಯಬೇಡಿ ಸ್ವಾಮಿ: ಕೊರೊನಾಕ್ಕಿಂತಲೂ ಹಸಿವು ಭಯಾನಕ ನೆನಪಿರಲಿ

08/01/2022, 09:43

ಸಾಂದರ್ಭಿಕ ಚಿತ್ರ
ಮಂಗಳೂರು(reporterkarnataka.com): ರಾಜ್ಯದಲ್ಲಿ ಒಮಿಕ್ರೋನ್ ಹಾವಳಿ ಹೆಚ್ಚಾಗುತ್ತಿರುದರ ಪರಿಣಾಮ ಮುನ್ನೆಚ್ಚರಿಕಾ ಕ್ರಮವಾಗಿ ಶುಕ್ರವಾರ ರಾತ್ರಿಯಿಂದ ನೈಟ್ ಕರ್ಫ್ಯೂ ಮಂಗಳೂರಿನಲ್ಲಿಯೂ ಜಾರಿಗೊಳಿಸಲಾಗಿದ್ದು, ಹೊಟ್ಟೆಪಾಡಿಗಾಗಿ ದುಡಿಯುವ ಮಂದಿಗೆ ಯಾವುದೇ ತೊಂದರೆ ಕೊಡದಂತೆ ಸಾರ್ವಜನಿಕರು ಪೊಲೀಸ್ ಇಲಾಖೆಗೆ ವಿನಂತಿಸಿದ್ದಾರೆ.

ಕೆಲವು ಕಡೆಗಳಲ್ಲಿ ಅನಗತ್ಯ ವಾಹನಗಳ ಓಡಾಟ ತಪಾಸಣೆ ಕಂಡು ಬಂತು. ಇದರ ಜತೆಯಲ್ಲೇ.ಹೋಟೆಲ್ ಗಳಲ್ಲಿ ರಾತ್ರಿ ಪಾಳಿಯಲ್ಲಿ ಪಾರ್ಸೆಲ್ ವ್ಯವಸ್ಥೆ ಮಾಡುವ ಹೋಟೆಲ್ ಸಿಬ್ಬಂದಿಗಳನ್ನು ಪೊಲೀಸರು ತಡೆದು, ನೈಟ್ ಕರ್ಫ್ಯೂ ವಿಧಿಸಲಾಗಿದೆ ಎಂದು ಗದರಿಸಲಾಗಿದೆ. ಒಂದೇ ಬೈಕ್ ನಲ್ಲಿ ಇದ್ದ ಇಬ್ಬರಲ್ಲಿ,( ಸಹ ಸವಾರನ್ನು ಡ್ರಾಪ್ ನೀಡಲು ಬಂದಿದ್ದು) ಒಬ್ಬನನ್ನು ನಡೆದಿಕೊಂಡು  ಹೋಗು ಎಂದು ಕಾನ್ಸ್ಟೇಬಲ್ ಎಂದು ಬೆದರಿಸಿದ್ದು, ಕೊನೆಗೂ. ಎ.ಎಸ್.ಐ ಯಲ್ಲಿ ಯುವಕರು ಬೇಡಿಕೊಂಡಿದ್ದು, ಕೊನೆಗೆ ಬಿಟ್ಟು ಬರಲು ಅನುಮತಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಅದಲ್ಲದೆ ನಾಳೆಯಿಂದ ಬೇಗಬರುವಂತೆ ತಾಕೀತು ಮಾಡಿದ್ದಾರೆ.ಪೊಲೀಸ್ ಕಾನ್ಸ್ಟೇಬಲ್ ಗಳೇ ನಿಮ್ಮಲ್ಲಿ ಕಿಂಚಿತ್ತೂ ಸೌಜನ್ಯತೆ ಇಲ್ಲವೇ? ಹೊಟ್ಟೆ ಪಾಡಿಗಾಗಿ ಕೆಲಸಕ್ಕೆ ತೆರಳುವವರ ಮೇಲೆ ನಿಮ್ಮ ದರ್ಪ ತೋರಿಸುವುದಲ್ಲ. ಎಲ್ಲರೂ ಅನಾವಶ್ಯಕವಾಗಿ ತಿರುಗಾಟ ಮಾಡುತ್ತಾರೆ ಎಂಬುದನ್ನು ಬಿಡಿ. ಹಾಗಿದ್ದರೆ ಹೋಟೆಲ್ ಗಳಿಗೆ ಸರಿಯಾದ ಸಮಯ ವಿಧಿಸಿ. ನಿಮ್ಮ ಹೊಟ್ಟೆಯನ್ನು ಕೂಡ ಅಂತಹದೇ ಹೋಟೆಲ್ ಗಳ ಪಾರ್ಸೆಲ್ ತಿಂಡಿ ತುಂಬಿಸುತ್ತದೆ ಎಂಬುದನ್ನು ಮರೆಯಬೇಡಿ… ಝೋಮಟೋ, ಸ್ವಿಗ್ಗಿ ಗಳ ಪಾರ್ಸೆಲ್ ವಿತರಕನ್ನು ಕಳ್ಳರಂತೆ ಟ್ರೀಟ್ ಮಾಡಬೇಡಿ. ಈ ಬಗ್ಗೆ ಪೊಲೀಸ್ ಕಮಿಷನರ್, ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿ.

ಇತ್ತೀಚಿನ ಸುದ್ದಿ

ಜಾಹೀರಾತು