2:58 PM Sunday17 - May 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ…

ಇತ್ತೀಚಿನ ಸುದ್ದಿ

ಕರ್ಫ್ಯೂ ಹೆಸರಿನಲ್ಲಿ ಹೊಟ್ಟೆಗೆ ಹೊಡೆಯಬೇಡಿ ಸ್ವಾಮಿ: ಕೊರೊನಾಕ್ಕಿಂತಲೂ ಹಸಿವು ಭಯಾನಕ ನೆನಪಿರಲಿ

08/01/2022, 09:43

ಸಾಂದರ್ಭಿಕ ಚಿತ್ರ
ಮಂಗಳೂರು(reporterkarnataka.com): ರಾಜ್ಯದಲ್ಲಿ ಒಮಿಕ್ರೋನ್ ಹಾವಳಿ ಹೆಚ್ಚಾಗುತ್ತಿರುದರ ಪರಿಣಾಮ ಮುನ್ನೆಚ್ಚರಿಕಾ ಕ್ರಮವಾಗಿ ಶುಕ್ರವಾರ ರಾತ್ರಿಯಿಂದ ನೈಟ್ ಕರ್ಫ್ಯೂ ಮಂಗಳೂರಿನಲ್ಲಿಯೂ ಜಾರಿಗೊಳಿಸಲಾಗಿದ್ದು, ಹೊಟ್ಟೆಪಾಡಿಗಾಗಿ ದುಡಿಯುವ ಮಂದಿಗೆ ಯಾವುದೇ ತೊಂದರೆ ಕೊಡದಂತೆ ಸಾರ್ವಜನಿಕರು ಪೊಲೀಸ್ ಇಲಾಖೆಗೆ ವಿನಂತಿಸಿದ್ದಾರೆ.

ಕೆಲವು ಕಡೆಗಳಲ್ಲಿ ಅನಗತ್ಯ ವಾಹನಗಳ ಓಡಾಟ ತಪಾಸಣೆ ಕಂಡು ಬಂತು. ಇದರ ಜತೆಯಲ್ಲೇ.ಹೋಟೆಲ್ ಗಳಲ್ಲಿ ರಾತ್ರಿ ಪಾಳಿಯಲ್ಲಿ ಪಾರ್ಸೆಲ್ ವ್ಯವಸ್ಥೆ ಮಾಡುವ ಹೋಟೆಲ್ ಸಿಬ್ಬಂದಿಗಳನ್ನು ಪೊಲೀಸರು ತಡೆದು, ನೈಟ್ ಕರ್ಫ್ಯೂ ವಿಧಿಸಲಾಗಿದೆ ಎಂದು ಗದರಿಸಲಾಗಿದೆ. ಒಂದೇ ಬೈಕ್ ನಲ್ಲಿ ಇದ್ದ ಇಬ್ಬರಲ್ಲಿ,( ಸಹ ಸವಾರನ್ನು ಡ್ರಾಪ್ ನೀಡಲು ಬಂದಿದ್ದು) ಒಬ್ಬನನ್ನು ನಡೆದಿಕೊಂಡು  ಹೋಗು ಎಂದು ಕಾನ್ಸ್ಟೇಬಲ್ ಎಂದು ಬೆದರಿಸಿದ್ದು, ಕೊನೆಗೂ. ಎ.ಎಸ್.ಐ ಯಲ್ಲಿ ಯುವಕರು ಬೇಡಿಕೊಂಡಿದ್ದು, ಕೊನೆಗೆ ಬಿಟ್ಟು ಬರಲು ಅನುಮತಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಅದಲ್ಲದೆ ನಾಳೆಯಿಂದ ಬೇಗಬರುವಂತೆ ತಾಕೀತು ಮಾಡಿದ್ದಾರೆ.ಪೊಲೀಸ್ ಕಾನ್ಸ್ಟೇಬಲ್ ಗಳೇ ನಿಮ್ಮಲ್ಲಿ ಕಿಂಚಿತ್ತೂ ಸೌಜನ್ಯತೆ ಇಲ್ಲವೇ? ಹೊಟ್ಟೆ ಪಾಡಿಗಾಗಿ ಕೆಲಸಕ್ಕೆ ತೆರಳುವವರ ಮೇಲೆ ನಿಮ್ಮ ದರ್ಪ ತೋರಿಸುವುದಲ್ಲ. ಎಲ್ಲರೂ ಅನಾವಶ್ಯಕವಾಗಿ ತಿರುಗಾಟ ಮಾಡುತ್ತಾರೆ ಎಂಬುದನ್ನು ಬಿಡಿ. ಹಾಗಿದ್ದರೆ ಹೋಟೆಲ್ ಗಳಿಗೆ ಸರಿಯಾದ ಸಮಯ ವಿಧಿಸಿ. ನಿಮ್ಮ ಹೊಟ್ಟೆಯನ್ನು ಕೂಡ ಅಂತಹದೇ ಹೋಟೆಲ್ ಗಳ ಪಾರ್ಸೆಲ್ ತಿಂಡಿ ತುಂಬಿಸುತ್ತದೆ ಎಂಬುದನ್ನು ಮರೆಯಬೇಡಿ… ಝೋಮಟೋ, ಸ್ವಿಗ್ಗಿ ಗಳ ಪಾರ್ಸೆಲ್ ವಿತರಕನ್ನು ಕಳ್ಳರಂತೆ ಟ್ರೀಟ್ ಮಾಡಬೇಡಿ. ಈ ಬಗ್ಗೆ ಪೊಲೀಸ್ ಕಮಿಷನರ್, ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿ.

ಇತ್ತೀಚಿನ ಸುದ್ದಿ

ಜಾಹೀರಾತು