10:48 PM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಮೇಕೆದಾಟು ಯೋಜನೆಗೆ ಕಾಂಗ್ರೆಸ್‌ ನದ್ದು ಪಾದಯಾತ್ರೆಯಲ್ಲ, ಸುಳ್ಳಿನ ಜಾತ್ರೆ: ಬಿಜೆಪಿ ಟ್ವಿಟ್

08/01/2022, 22:31

ಬೆಂಗಳೂರು(reporterkarnataka.com): ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್‌ ನ ನಡೆಸಲುದ್ದೇಶಿಸಿದ ಪಾದಯಾತ್ರೆ ಭಾರೀ ಸದ್ದು ಮಾಡುತ್ತಿದ್ದು, ಆಡಳಿತ ಪಕ್ಷ ಬಿಜೆಪಿ ಕಟುವಾಗಿ ಟೀಕಿಸಿದೆ. ರಾಜ್ಯ ಬಿಜೆಪಿ ಸರಣಿ ಟ್ವೀಟ್‌ ಮೂಲಕ ಟೀಕೆ ಮಾಡಿದೆ.

ಅಂತರ್ ರಾಜ್ಯ ಜಲ ವಿವಾದ ಸಂದರ್ಭದಲ್ಲಿ ವಿವೇಕಯುತ ಹೋರಾಟ ಅಗತ್ಯವಿದೆ ಎಂದು ಇತಿಹಾಸ ಕಲಿತಿಲ್ಲವೇ..? ಈ‌ ಹಿಂದೆ ಕಾವೇರಿ ಪಾದಯಾತ್ರೆ ನಡೆಸಿ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡ ಘಟನೆ ನೆನಪಿರಬೇಕಲ್ಲವೇ..? ರಾಜಕೀಯಕ್ಕಾಗಿ ರಾಜ್ಯದ ಮರ್ಯಾದೆಯನ್ನೇಕೆ ಹರಾಜು ಹಾಕುತ್ತಿದ್ದೀರಿ..? ಎಂದು ಬಿಜೆಪಿ ಪ್ರಶ್ನಿಸಿದೆ.

ಸಂಘರ್ಷದಿಂದ ವ್ಯಾಜ್ಯ ಗೆಲ್ಲಲು ಸಾಧ್ಯವಿಲ್ಲ. ಕಾಂಗ್ರೆಸ್ಸಿಗರು #ಸುಳ್ಳಿನಜಾತ್ರೆ ಮಾಡುವ ಬದಲು ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವ ತಮ್ಮ ಮಿತ್ರಪಕ್ಷ ಹಸಿರುಪೀಠದಲ್ಲಿ ಹೂಡಿದ ದಾವೆ ವಾಪಾಸ್ ತೆಗೆಸಲಿ ಎಂದು ಆಗ್ರಹಿಸಿದೆ.

2014 ರಿಂದ 2018 ರ ಅವಧಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೇಕೆದಾಟು ವಿಚಾರದಲ್ಲಿ ಎಸಗಿದ ಐತಿಹಾಸಿಕ ಪ್ರಮಾದದಿಂದ ಈಗ ಕಾವೇರಿ ಕಣ್ಣೀರು ಸುರಿಸುವಂತಾಗಿದೆ. ಕೇಂದ್ರದಿಂದ ಒಪ್ಪಿಗೆ ಹಾಗೂ ಅನುದಾನ ಪಡೆಯುವಾಗ ನಿದ್ದೆಗೆ ಜಾರಿ ಈಗ ಪಾದಯಾತ್ರೆಯ ನಾಟಕವಾಡುವುದಕ್ಕೆ ನಾಚಿಕೆಯಾಗುವುದಿಲ್ಲವೆ? ಎನ್ನುವ ಮೂಲಕ ಬಿಜೆಪಿ ಆರೋಪಿಸಿದೆ.

ಮೇಕೆದಾಟು ಯೋಜನೆಗೆ ನಾಳೆಯೇ ಭೂಮಿಪೂಜೆ ನಡೆಸಿ ಎಂದು ಅಬ್ಬರಿಸುತ್ತಿರುವ ಕಾಂಗ್ರೆಸ್ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರಿಸಿ. ಮೇಕೆದಾಟು ಯೋಜನೆ ಸಂಬಂಧ ಅನಗತ್ಯ ಕಾಲಹರಣ ಮಾಡಿದ್ದು ಯಾರು? ಅಧಿಕಾರದಲ್ಲಿದ್ದಾಗ ಕಡತಯಜ್ಞ ಮಾಡದೆ, ವಿರೋಧ ಪಕ್ಷವಾದಾಗ ಆಂದೋಲನ ನಡೆಸುವುದು ಎಷ್ಟು ಸರಿ..? ಎಂದಿದೆ.

ಅಂತಾರಾಜ್ಯ ಜಲ ವಿವಾದ ಒಂದು ಸೂಕ್ಷ್ಮ ವಿಚಾರ. ಕರ್ನಾಟಕ ಸರ್ಕಾರ ಈ ಸಂಬಂಧ ಎಚ್ಚರಿಕೆ ಹಾಗೂ ವಿವೇಕದ ಹೆಜ್ಜೆ ಇಡುತ್ತಲೇ ಬಂದಿದೆ. ಹಸಿರುಪೀಠದಲ್ಲಿ ಹೂಡಿದ ದಾವೆ ವಾಪಾಸ್ ತೆಗೆಸಲಿ ಎಂದು ಆಗ್ರಹಿಸಿದೆ.

2014 ರಿಂದ 2018 ರ ಅವಧಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೇಕೆದಾಟು ವಿಚಾರದಲ್ಲಿ ಎಸಗಿದ ಐತಿಹಾಸಿಕ ಪ್ರಮಾದದಿಂದ ಈಗ ಕಾವೇರಿ ಕಣ್ಣೀರು ಸುರಿಸುವಂತಾಗಿದೆ. ಕೇಂದ್ರದಿಂದ ಒಪ್ಪಿಗೆ ಹಾಗೂ ಅನುದಾನ ಪಡೆಯುವಾಗ ನಿದ್ದೆಗೆ ಜಾರಿ ಈಗ ಪಾದಯಾತ್ರೆಯ ನಾಟಕವಾಡುವುದಕ್ಕೆ ನಾಚಿಕೆಯಾಗುವುದಿಲ್ಲವೆ? ಎನ್ನುವ ಮೂಲಕ ಬಿಜೆಪಿ ಆರೋಪಿಸಿದೆ.

ಮೇಕೆದಾಟು ಯೋಜನೆಗೆ ನಾಳೆಯೇ ಭೂಮಿಪೂಜೆ ನಡೆಸಿ ಎಂದು ಅಬ್ಬರಿಸುತ್ತಿರುವ ಕಾಂಗ್ರೆಸ್ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರಿಸಿ. ಮೇಕೆದಾಟು ಯೋಜನೆ ಸಂಬಂಧ ಅನಗತ್ಯ ಕಾಲಹರಣ ಮಾಡಿದ್ದು ಯಾರು? ಅಧಿಕಾರದಲ್ಲಿದ್ದಾಗ ಕಡತಯಜ್ಞ ಮಾಡದೆ, ವಿರೋಧ ಪಕ್ಷವಾದಾಗ ಆಂದೋಲನ ನಡೆಸುವುದು ಎಷ್ಟು ಸರಿ..? ಎಂದಿದೆ.

ಅಂತಾರಾಜ್ಯ ಜಲ ವಿವಾದ ಒಂದು ಸೂಕ್ಷ್ಮ ವಿಚಾರ. ಕರ್ನಾಟಕ ಸರ್ಕಾರ ಈ ಸಂಬಂಧ ಎಚ್ಚರಿಕೆ ಹಾಗೂ ವಿವೇಕದ ಹೆಜ್ಜೆ ಇಡುತ್ತಲೇ ಬಂದಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು