9:22 PM Sunday17 - May 2026
ಬ್ರೇಕಿಂಗ್ ನ್ಯೂಸ್
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ…

ಇತ್ತೀಚಿನ ಸುದ್ದಿ

ಮೇಕೆದಾಟು ಯೋಜನೆಗೆ ಕಾಂಗ್ರೆಸ್‌ ನದ್ದು ಪಾದಯಾತ್ರೆಯಲ್ಲ, ಸುಳ್ಳಿನ ಜಾತ್ರೆ: ಬಿಜೆಪಿ ಟ್ವಿಟ್

08/01/2022, 22:31

ಬೆಂಗಳೂರು(reporterkarnataka.com): ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್‌ ನ ನಡೆಸಲುದ್ದೇಶಿಸಿದ ಪಾದಯಾತ್ರೆ ಭಾರೀ ಸದ್ದು ಮಾಡುತ್ತಿದ್ದು, ಆಡಳಿತ ಪಕ್ಷ ಬಿಜೆಪಿ ಕಟುವಾಗಿ ಟೀಕಿಸಿದೆ. ರಾಜ್ಯ ಬಿಜೆಪಿ ಸರಣಿ ಟ್ವೀಟ್‌ ಮೂಲಕ ಟೀಕೆ ಮಾಡಿದೆ.

ಅಂತರ್ ರಾಜ್ಯ ಜಲ ವಿವಾದ ಸಂದರ್ಭದಲ್ಲಿ ವಿವೇಕಯುತ ಹೋರಾಟ ಅಗತ್ಯವಿದೆ ಎಂದು ಇತಿಹಾಸ ಕಲಿತಿಲ್ಲವೇ..? ಈ‌ ಹಿಂದೆ ಕಾವೇರಿ ಪಾದಯಾತ್ರೆ ನಡೆಸಿ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡ ಘಟನೆ ನೆನಪಿರಬೇಕಲ್ಲವೇ..? ರಾಜಕೀಯಕ್ಕಾಗಿ ರಾಜ್ಯದ ಮರ್ಯಾದೆಯನ್ನೇಕೆ ಹರಾಜು ಹಾಕುತ್ತಿದ್ದೀರಿ..? ಎಂದು ಬಿಜೆಪಿ ಪ್ರಶ್ನಿಸಿದೆ.

ಸಂಘರ್ಷದಿಂದ ವ್ಯಾಜ್ಯ ಗೆಲ್ಲಲು ಸಾಧ್ಯವಿಲ್ಲ. ಕಾಂಗ್ರೆಸ್ಸಿಗರು #ಸುಳ್ಳಿನಜಾತ್ರೆ ಮಾಡುವ ಬದಲು ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವ ತಮ್ಮ ಮಿತ್ರಪಕ್ಷ ಹಸಿರುಪೀಠದಲ್ಲಿ ಹೂಡಿದ ದಾವೆ ವಾಪಾಸ್ ತೆಗೆಸಲಿ ಎಂದು ಆಗ್ರಹಿಸಿದೆ.

2014 ರಿಂದ 2018 ರ ಅವಧಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೇಕೆದಾಟು ವಿಚಾರದಲ್ಲಿ ಎಸಗಿದ ಐತಿಹಾಸಿಕ ಪ್ರಮಾದದಿಂದ ಈಗ ಕಾವೇರಿ ಕಣ್ಣೀರು ಸುರಿಸುವಂತಾಗಿದೆ. ಕೇಂದ್ರದಿಂದ ಒಪ್ಪಿಗೆ ಹಾಗೂ ಅನುದಾನ ಪಡೆಯುವಾಗ ನಿದ್ದೆಗೆ ಜಾರಿ ಈಗ ಪಾದಯಾತ್ರೆಯ ನಾಟಕವಾಡುವುದಕ್ಕೆ ನಾಚಿಕೆಯಾಗುವುದಿಲ್ಲವೆ? ಎನ್ನುವ ಮೂಲಕ ಬಿಜೆಪಿ ಆರೋಪಿಸಿದೆ.

ಮೇಕೆದಾಟು ಯೋಜನೆಗೆ ನಾಳೆಯೇ ಭೂಮಿಪೂಜೆ ನಡೆಸಿ ಎಂದು ಅಬ್ಬರಿಸುತ್ತಿರುವ ಕಾಂಗ್ರೆಸ್ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರಿಸಿ. ಮೇಕೆದಾಟು ಯೋಜನೆ ಸಂಬಂಧ ಅನಗತ್ಯ ಕಾಲಹರಣ ಮಾಡಿದ್ದು ಯಾರು? ಅಧಿಕಾರದಲ್ಲಿದ್ದಾಗ ಕಡತಯಜ್ಞ ಮಾಡದೆ, ವಿರೋಧ ಪಕ್ಷವಾದಾಗ ಆಂದೋಲನ ನಡೆಸುವುದು ಎಷ್ಟು ಸರಿ..? ಎಂದಿದೆ.

ಅಂತಾರಾಜ್ಯ ಜಲ ವಿವಾದ ಒಂದು ಸೂಕ್ಷ್ಮ ವಿಚಾರ. ಕರ್ನಾಟಕ ಸರ್ಕಾರ ಈ ಸಂಬಂಧ ಎಚ್ಚರಿಕೆ ಹಾಗೂ ವಿವೇಕದ ಹೆಜ್ಜೆ ಇಡುತ್ತಲೇ ಬಂದಿದೆ. ಹಸಿರುಪೀಠದಲ್ಲಿ ಹೂಡಿದ ದಾವೆ ವಾಪಾಸ್ ತೆಗೆಸಲಿ ಎಂದು ಆಗ್ರಹಿಸಿದೆ.

2014 ರಿಂದ 2018 ರ ಅವಧಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೇಕೆದಾಟು ವಿಚಾರದಲ್ಲಿ ಎಸಗಿದ ಐತಿಹಾಸಿಕ ಪ್ರಮಾದದಿಂದ ಈಗ ಕಾವೇರಿ ಕಣ್ಣೀರು ಸುರಿಸುವಂತಾಗಿದೆ. ಕೇಂದ್ರದಿಂದ ಒಪ್ಪಿಗೆ ಹಾಗೂ ಅನುದಾನ ಪಡೆಯುವಾಗ ನಿದ್ದೆಗೆ ಜಾರಿ ಈಗ ಪಾದಯಾತ್ರೆಯ ನಾಟಕವಾಡುವುದಕ್ಕೆ ನಾಚಿಕೆಯಾಗುವುದಿಲ್ಲವೆ? ಎನ್ನುವ ಮೂಲಕ ಬಿಜೆಪಿ ಆರೋಪಿಸಿದೆ.

ಮೇಕೆದಾಟು ಯೋಜನೆಗೆ ನಾಳೆಯೇ ಭೂಮಿಪೂಜೆ ನಡೆಸಿ ಎಂದು ಅಬ್ಬರಿಸುತ್ತಿರುವ ಕಾಂಗ್ರೆಸ್ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರಿಸಿ. ಮೇಕೆದಾಟು ಯೋಜನೆ ಸಂಬಂಧ ಅನಗತ್ಯ ಕಾಲಹರಣ ಮಾಡಿದ್ದು ಯಾರು? ಅಧಿಕಾರದಲ್ಲಿದ್ದಾಗ ಕಡತಯಜ್ಞ ಮಾಡದೆ, ವಿರೋಧ ಪಕ್ಷವಾದಾಗ ಆಂದೋಲನ ನಡೆಸುವುದು ಎಷ್ಟು ಸರಿ..? ಎಂದಿದೆ.

ಅಂತಾರಾಜ್ಯ ಜಲ ವಿವಾದ ಒಂದು ಸೂಕ್ಷ್ಮ ವಿಚಾರ. ಕರ್ನಾಟಕ ಸರ್ಕಾರ ಈ ಸಂಬಂಧ ಎಚ್ಚರಿಕೆ ಹಾಗೂ ವಿವೇಕದ ಹೆಜ್ಜೆ ಇಡುತ್ತಲೇ ಬಂದಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು