10:13 PM Monday12 - May 2025
ಬ್ರೇಕಿಂಗ್ ನ್ಯೂಸ್
Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ…

ಇತ್ತೀಚಿನ ಸುದ್ದಿ

ವೀಕೆಂಡ್ ಕರ್ಪ್ಯೂ: ರಾಜ್ಯದಲ್ಲಿ ನಿಯಮ ಮೀರಿ ರಸ್ತೆಗಿಳಿದ 1,200 ವಾಹನಗಳು ಸೀಜ್

08/01/2022, 22:38

ಸಾಂದರ್ಭಿಕ ಚಿತ್ರ
ಬೆಂಗಳೂರು(reporterkarnataka.com): ರಾಜ್ಯ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ ಬಳಿಕ ನಿಯಮ ಮೀರಿ ರಸ್ತೆಗಿಳಿದ ಸುಮಾರು 1200 ವಾಹನಗಳನ್ನು ಮುಟ್ಟುಗೋಲು ಹಾಕಲಾಗಿದೆ.

ಶುಕ್ರವಾರ ರಾತ್ರಿ 10 ಗಂಟೆಯಿಂದ ವೀಕೆಂಡ್ ಕರ್ಪ್ಯೂ ಜಾರಿಗೊಂಡಿದ್ದು, ಈ ವೇಳೆ ಅನಗತ್ಯವಾಗಿ ರಸ್ತೆಯಲ್ಲಿ ತಿರುಗಾಡಿದ ಜನರ ವಾಹನಗಳನ್ನು ಸೀಜ್ ಮಾಡಿ, ದಂಡ ವಿಧಿಸಲಾಗಿದೆ.

ಈ ರೀತಿ ನಿಯಮ ಮೀರಿ ಹೊರಗೆ ಬಂದ 1,200 ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.

ನಾಳೆಯೂ ಕೂಡ ಪೊಲೀಸರು ಅನಗತ್ಯವಾಗಿ ರೋಡಿಗೆ ಇಳಿದವರಿಗೆ ದಂಡ, ವಾಹನ ಸೀಜ್ ಮಾಡಲಿದ್ದಾರೆ ಎಂದು ತಿಳಿಸಿದರು.

ಕೊರೋನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ವಾರಾಂತ್ಯ ಕರ್ಪ್ಯೂ ಸಂದರ್ಭಪೊಲೀಸರು ತುಂಬಾ ಶ್ರಮಪಟ್ಟು ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಜನರು ಅನಗತ್ಯವಾಗಿ ಹೊರಗೆ ಓಡಾಡಬಾರದು ಎಂಬುದಾಗಿ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು