7:02 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮಲ್ಲಿಕಟ್ಟೆ: ಎಸ್ ಸಿಐ ವತಿಯಿಂದ 1 ಲಕ್ಷ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

09/01/2022, 17:02

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ಸಾರ್ವಜನಿಕರ ಉಪಯೋಗಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನು ನಗರದ ಕದ್ರಿ ಮಲ್ಲಿಕಟ್ಟೆಯ ರಿಕ್ಷಾ ನಿಲ್ದಾಣದಲ್ಲಿ ಇತ್ತೀಚೆಗೆ ಉದ್ಘಾಟಿಸಲಾಯಿತು. ಅಂತಾರಾಷ್ಟ್ರೀಯ ಅಧ್ಯಕ್ಷ ರ ಕನಸಿನ ಸಮುದಾಯ ಅಭಿವೃದ್ಧಿ ಯೋಜನೆ ‘ ಜಲಧಾರ 2021-22’  ಕಾರ್ಯಕ್ರಮದಡಿ ಸುಮಾರು 1 ಲಕ್ಷ ರೂ. ವೆಚ್ಚದ ಶುದ್ಧ ನೀರಿನ ಘಟಕವನ್ನು ದಿ. ಕೆ.ಪಿ. ಭಾಸ್ಕರ್ ಅವರ ಸ್ಮರಣಾರ್ಥ ಅವರ ಪತ್ನಿ ಮರೋಳಿ ವಜ್ರಾಕ್ಷಿ ಭಾಸ್ಕರ್  ಅವರು ಕೊಡುಗೆಯಾಗಿ ನೀಡಿದ್ದು ಸೀನಿಯರ್ ಚೇಂಬರ್ ನ ಅಂತಾರಾಷ್ಟ್ರೀಯ ಅಧ್ಯಕ್ಷರಾದ  ಡಾ. ಅರವಿಂದ  ರಾವ್ ಕೇದಿಗೆಯವರು ಉದ್ಘಾಟಿಸಿದರು. ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ ಮಂಗಳೂರು  ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಮಾತನಾಡಿ, ಸಮಾಜಮುಖಿ ಕೆಲಸಗಳನ್ನು  ಮಾಡುತ್ತಿರುವುದು ಶ್ಲಾಘನೀಯ ಹಾಗೂ ಇನ್ನೂ ಹೆಚ್ಚಿನ ಕಾರ್ಯಕ್ರಮಗಳು ಜರಗುವಂತಾಗಲಿ ಎಂದು ಹಾರೈಸಿದರು. ಉಪ ಮೇಯರ್ ಸುಮಂಗಲಾ ಸುಧೀರ್, ಸ್ಥಳೀಯ ಕಾರ್ಪೊರೇಟರ್ ಗಳಾದ ಮನೋಹರ್ ಶೆಟ್ಟಿ, ಕಾವ್ಯ ನಟರಾಜ್ ಆಳ್ವ, ನಾಮನಿರ್ದೇಶಿತ ಸದಸ್ಯ ಭಾಸ್ಕರ್ ಚಂದ್ರ ಶೆಟ್ಟಿ, ಸಮಾಜ ಸೇವಕರಾದ ವಿಜಯ ಭಂಡಾರಿ, ಆಟೋರಿಕ್ಷಾ ಸಂಘದ ಅಧ್ಯಕ್ಷ ಜನಾರ್ದನ ಶಕ್ತಿನಗರ, ನಿವೇದಿತಾ ಶೆಟ್ಟಿ, ಗಾಯತ್ರಿ ಅರವಿಂದ ರಾವ್, ಸುಂದರ್ ರಾಮ್ ಟ್ರಸ್ಟ್ ಅಧ್ಯಕ್ಷ ಕರುಣಾಕರ ಶೆಟ್ಟಿ, ಸೀನಿಯರ್ ಚೇಂಬರಿನ ಪ್ರಶಾಂತ್ ಸುವರ್ಣ, ಫ್ಲೇವಿ ಗ್ಲಾಡಿಸ್ ಡಿ’ಮೆಲ್ಲೋ, ಸದಾನಂದ ಶೆಟ್ಟಿ, ದಿವ್ಯ ರೈ,ಮಾಲತಿ ಶೆಟ್ಟಿ, ತಾರಾಕ್ಷಿ, ಪೂರ್ಣಿಮ ರತನ್, ನಿರ್ಮಲ ಪ್ರಮೋದ್, ಅರ್ಚನ ಬಾಲಾಜಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕೊಡುಗೆ ನೀಡಿದ ವಜ್ರಾಕ್ಷಿ ಭಾಸ್ಕರ್ ಅವರನ್ನು ಮೇಯರ್ ಅವರು ಶಾಲು ಹೊದಿಸಿ ಫಲ-ಪುಷ್ಪ ನೀಡಿ ಸನ್ಮಾನಿಸಿದರು. 


ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ಅಧ್ಯಕ್ಷರಾದ ಜಿ.ಕೆ.ಹರಿಪ್ರಸಾದ್ ಕಾರಮೊಗರಗುತ್ತು ಅಧ್ಯಕ್ಷತೆ ವಹಿಸಿದ್ದು, ಶಾಲಿನಿ ಪ್ರಶಾಂತ್ ಸುವರ್ಣ ಸ್ವಾಗತಿಸಿದರು. ಲತಾ ಕಲ್ಲಡ್ಕ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು