8:07 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ತವರಿಗೆ ಬಂದ ಸೇನಾನಿಗಳಿಗೆ ಅದ್ದೂರಿ  ಸ್ವಾಗತ: ಹೂ ಕೊಟ್ಟು  ಹೀರೋಗಳಿಗೆ ಸೆಲ್ಯೂಟ್ ಮಾಡಿದ ಪುಟಾಣಿಗಳು.!

09/01/2022, 22:02

ಚಿಕ್ಕಮಗಳೂರು(reporterkarnataka.com): ಇಡೀ ಜೀವನವನ್ನೇ ಸೇವೆಗಾಗಿ ಮುಡಿಪಾಗಿಟ್ಟು ಹುಟ್ಟೂರಿಗೆ ಬಂದ ಯೋಧರಿಗೆ ಅದ್ದೂರಿ ಸ್ವಾಗತ ಕೋರಲಾಯಿತು.

ದೇಶ ಕಾಯುವ ಹೀರೋಗಳಿಗೂ ಕೊಟ್ಟ ಸ್ವಾಗತ ನಿಜಕ್ಕೂ ವೀರ ಯೋಧರನ್ನು ಮೂಕ ವಿಸ್ಮಿತಗೊಳಿಸಿತು.

ಅಲ್ಲಿ ಇಡೀ ಊರಿಗೆ ಊರೇ ಹಬ್ಬದ ಸಡಗರದಲ್ಲಿ ಮುಳುಗಿತ್ತು. ಎತ್ತ ನೋಡಿದ್ರೂ ಪಟಾಕಿಯ ಸದ್ದು, ಡೊಳ್ಳಿನ ಕುಣಿತ..! ಭಾರತಾಂಬೆಗೆ ಜೈ, ವೀರಯೋಧರಿಗೆ ಜೈ ಅನ್ನೋ ಜೈಕಾರ..! ರಸ್ತೆಯುದ್ದಕ್ಕೂ ನಿಂತು ತಮ್ಮ ನೆಚ್ಚಿನ ಹೀರೋಗಳಿಗೆ ಶಾಲಾ ಮಕ್ಕಳು ಸ್ವಾಗತ ಕೋರುತ್ತಿದ್ದರು..! 

ಅಷ್ಟಕ್ಕೂ ಈ ಸಡಗರ ಸಂಭ್ರಮಕ್ಕೆ ಕಾರಣವಾಗಿದ್ದು ಆ ಮೂವರು ಯೋಧರು. 

 ಈ ದೃಶ್ಯ ಕಂಡು ಬಂದಿದ್ದು  ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ.. ಭಾರತಾಂಬೆಯನ್ನ ಸೇವೆ ಮುಗಿಸಿ ಯೋಧರು ತಮ್ಮೂರಿನ  ಬರುವಿಕೆಯನ್ನು  ಚಿಕ್ಕ ಚಿಕ್ಕ ಮಕ್ಕಳಿಂದ ಹಿಡಿದು ಗ್ರಾಮದ ವೃದ್ಧರವರೆಗೂ ಕಾತರ-ಕುತೂಹಲದಿಂದ ನೋಡುತ್ತಿದ್ದರು.

 ಭಾರತೀಯ ಸೇನೆಯಲ್ಲಿ ಬರೋಬ್ಬರಿ 20ಕ್ಕೂ ಹೆಚ್ಚು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿ ತವರೂರಿಗೆ ಆಗಮಿಸಿದ ಏರ್ಫೋರ್ಸ್ ನ ಆರ್ ಶ್ರೀಕಾಂತ್, ಬಿಎಸ್ಎಫ್ ನ ಕೃಷ್ಣಮೂರ್ತಿ, ಗುರಪ್ಪರವರನ್ನು ಅದ್ಧೂರಿಯಾಗಿ ಸ್ವಾಗತಿಸಿದ ಅಜ್ಜಂಪುರದ ಜನತೆ ಆತ್ಮೀಯವಾಗಿ ಬರಮಾಡಿಕೊಂಡರು. 

ಪಟ್ಟಣದ ಮೂರ್ನಾಲ್ಕು ಕಿಲೋ ಮೀಟರ್ ತೆರೆದ ಜೀಪಿನಲ್ಲಿ ರಾಲಿ ಮಾಡಿ ಸಂಭ್ರಮಿಸಿದರು. ದಾರಿಯುದ್ದಕ್ಕೂ ಭಾರತ್ ಮಾತಾಕಿ ಜೈ, ವಂದೇ ಮಾತರಾಂ ಅನ್ನೋ ಘೋಷ ವಾಕ್ಯ ಮೊಳಗಿತ್ತು.

ವೀರ ಯೋಧರು ಊರಿಗೆ ಆಗಮಿಸುತ್ತಿದ್ದಂತೆ ಶಾಲಾ ಮಕ್ಕಳು ತಮ್ಮ ನೆಚ್ಚಿನ  ಹೀರೋಗಳಿಗೆ  ಹೂ ನೀಡಿ, ಸೆಲ್ಯೂಟ್ ಹೊಡೆದು ದೇಶಪ್ರೇಮ ಮೆರದರು.

ತಮ್ಮೂರಿನ ಜನರು ನೀಡಿದ ಗ್ರ್ಯಾಂಡ್ ವೆಲ್ಕಂ ನೋಡಿ ಮೂವರು ಯೋಧರು ಸೇವೆಯ ಸಾರ್ಥಕತೆ ಅನುಭವಿಸಿದರು. ಇಷ್ಟು ವರ್ಷಗಳ ಕಾಲ ಸೇವೆ ಸಲ್ಲಿಸಿ ಬಂದಾಗ ಈ ರೀತಿಯ ಒಂದು ಸತ್ಕಾರ ಸಿಗುತ್ತೆ ಅನ್ನೋ ಕಲ್ಪನೆ ಯೋಧರಿಗಿರಲಿಲ್ಲ.

ಯೋಧರಿಗೆ ಜೈಕಾರ ಹಾಕಿ ದೇಶಪ್ರೇಮ ಮೆರೆದರು.

ಇತ್ತೀಚಿನ ಸುದ್ದಿ

ಜಾಹೀರಾತು