9:05 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಸಚಿವ ಸೋಮಶೇಖರ್ ಪುತ್ರನಿಗೆ ಬ್ಲ್ಯಾಕ್ ಮೇಲ್…!:  ಇಬ್ಬರು ಆರೋಪಿಗಳ ಬಂಧನ; ಶಾಸಕರೊಬ್ಬರ ಪುತ್ರಿ ಕೈವಾಡ ?

10/01/2022, 11:34

ಬೆಂಗಳೂರು(reporterkarnataka.com): ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಪುತ್ರ ನಿಶಾಂತ್ ಸೋಮಶೇಖರ್ ಗೆ ಬ್ಲ್ಯಾಕ್ ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಚಂದ್ರಶೇಖರ್ ಸ್ವಾಮೀಜಿ ಎಂಬ ಜ್ಯೋತಿಷಿಯೊಬ್ಬರ ಪುತ್ರ ರಾಹುಲ್ ಭಟ್ ಎಂಬ ಪ್ರಮುಖ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿರುವ ಸಿಸಿಬಿ ಪೊಲೀಸರು, ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ 5 ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆದಿದ್ದಾರೆ. ಇನ್ನೋರ್ವ ಆರೋಪಿಯನ್ನು ಗೋವಾದಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಸಚಿವ ಪುತ್ರನ ಬ್ಲ್ಯಾಕ್ ಮೇಲ್ ಪ್ರಕರಣದಲ್ಲಿ ಶಾಸಕರ ಪುತ್ರಿಯೋರ್ವರ ಕೈವಾಡವಿದೆ ಎಂದು ಹೇಳಲಾಗುತ್ತಿದ್ದು, ಶಾಸಕರ ಪುತ್ರಿಗಾಗಿ ಹಾಗೂ ಇನ್ನೋರ್ವ ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಕೆಲ ದಿನಗಳ ಹಿಂದೆ ಸಚಿವ ಎಸ್.ಟಿ.ಸೋಮಶೇಖರ್ ಅವರ ಪುತ್ರ ನಿಶಾಂತ್ ಗೆ ವಾಟ್ಸಪ್ ಮೂಲಕ ವಿಡಿಯೋವೊಂದನ್ನು ಕಳುಹಿಸಿದ್ದ ಆರೋಪಿಗಳು ಯುವತಿಯೊಂದಿಗೆ ಸಚಿವರ ಪುತ್ರ ಇರುವ ರೀತಿಯಲ್ಲಿ ಫೋಟೋ ಎಡಿಟ್ ಮಾಡಿ ಅಶ್ಲೀಲ ವಿಡಿಯೋವನ್ನು ಕಳುಹಿಸಿದ್ದರು. ಅಲ್ಲದೇ 1 ಕೋಟಿ ರೂಪಾಯಿ ಹಣ ನೀಡದಿದ್ದರೆ ವಿಡಿಯೋ ಬಹಿರಂಗ ಮಾಡುವುದಾಗಿ ಬ್ಲ್ಯಾಕ್ ಮೇಲ್ ಮಾಡಿದ್ದರು. ಈ ಕುರಿತು ನಿಶಾಂತ್ ಸೋಮಶೇಖರ್ ಸೈಬರ್ ಕ್ರೈಂ ಗೆ ದೂರು ನೀಡಿದ್ದರಲ್ಲದೇ ತಮ್ಮ ಹಾಗೂ ತಮ್ಮ ತಂದೆಯ ತೇಜೋವಧೆಗಾಗಿ ಇಂತಹ ವಿಡಿಯೋ ಎಡಿಟ್ ಮಾಡಿ ಕಳುಹಿಸಿ ಬೆದರಿಕೆಯೊಡ್ಡುತ್ತಿರುವುದಾಗಿ ತಿಳಿಸಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದರು. ದುಬೈನಿಂದ ವಾಪಸ್ ಆಗುತ್ತಿದ್ದ ಆರೋಪಿ ರಾಹುಲ್ ಭಟ್ ಹಾಗೂ ಸಚಿವರ ಬಳಿಯೇ ಈ ಹಿಂದೆ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದ ಇನ್ನೋರ್ವ ಆರೋಪಿಯನ್ನು ಗೋವಾದಲ್ಲಿ ಬಂಧಿಸಲಾಗಿದೆ. ಇನ್ನಿಬ್ಬರು ಆರೋಪಿಗಳಿಗಾಗಿ ಶೋಧ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು