6:26 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಬೆಂದೂರುವೆಲ್ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ಆಕಸ್ಮಿಕ: ಅಪಾರ ಹಾನಿ;   ದುರಂತಕ್ಕೆ ಏನು ಕಾರಣ?

10/01/2022, 11:39

ಮಂಗಳೂರು(reporterkarnataka.com): ನಗರದ ಬೆಂದೂರುವೆಲ್‌ ನ ಪ್ಯಾರಾಮೌಂಟ್ ಕಟ್ಟಡದಲ್ಲಿರುವ ಎಲ್‌ಜಿ ಶೋ ರೂಂನಲ್ಲಿ ಅಗ್ನಿ ಆಕಸ್ಮಿಕವಾಗಿ ಸಂಭವಿಸಿದ್ದು, ಅಪಾರ ನಷ್ಟ ಸಂಭವಿಸಿದೆ.

ಇಲ್ಲಿ ಅಕ್ಕಪಕ್ಕದಲ್ಲಿ ಹಲವು ಕಟ್ಟಡಗಳಿದ್ದು, ಅಗ್ನಿ ಆಕಸ್ಮಿಕದಿಂದಾಗಿ ಅವರು ಆತಂಕವನ್ನು ಎದುರಿಸಬೇಕಾಯಿತು. ಬೆಂಕಿ ಹಿಡಿಯಲು ಶಾರ್ಟ್‌ ಸರ್ಕ್ಯೂಟ್‌ ಕಾರಣ ಎಂದು ಹೇಳಲಾಗಿದೆ. 

ಗಣೇಶ್ ಪ್ರಭು ಮಾಲಕತ್ವದ ಭುವನೇಂದ್ರ ಎಂಟರ್‌ ಪ್ರೈಸಸ್‌ನ ಎಲ್‌ ಶೋರೂಂ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಅಪಾರ ಮೌಲ್ಯದ ವಿದ್ಯುತ್ ಪರಿಕರಗಳು ಸೇರಿದಂತೆ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ.

ಅಂಗಡಿ ಮಾಲಕರು ಇಂದು ಬೆಳಿಗ್ಗೆ ಶೋರೂಂನ ಬಾಗಿಲು ತೆರೆಯಲು ಬಂದ ವೇಳೆ ಈ ಅನಾಹುತವಾಗಿದ್ದು, ಬಾಗಿಲು ತೆರೆಯುತ್ತಿದ್ದಂತೆ ಮತ್ತೆ ಭಾರೀ ಬೆಂಕಿ , ಹೊಗೆ ಆವರಿಸಿದೆ.

ಸ್ಥಳೀಯರು ಕೂಡಲೇ ಅಗ್ನಿ ಶಾಮಕ ಠಾಣೆಗೆ ಕರೆ ಮಾಡಿ ತಿಳಿಸಿದ್ದಾರೆ. ಈ ಮೂಲಕ ಹೆಚ್ಚಿನ ಹಾನಿಯನ್ನು ತಪ್ಪಿಸಿದ್ದಾರೆ. ಪಾಂಡೇಶ್ವರ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು