10:07 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬೆಂದೂರುವೆಲ್ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ಆಕಸ್ಮಿಕ: ಅಪಾರ ಹಾನಿ;   ದುರಂತಕ್ಕೆ ಏನು ಕಾರಣ?

10/01/2022, 11:39

ಮಂಗಳೂರು(reporterkarnataka.com): ನಗರದ ಬೆಂದೂರುವೆಲ್‌ ನ ಪ್ಯಾರಾಮೌಂಟ್ ಕಟ್ಟಡದಲ್ಲಿರುವ ಎಲ್‌ಜಿ ಶೋ ರೂಂನಲ್ಲಿ ಅಗ್ನಿ ಆಕಸ್ಮಿಕವಾಗಿ ಸಂಭವಿಸಿದ್ದು, ಅಪಾರ ನಷ್ಟ ಸಂಭವಿಸಿದೆ.

ಇಲ್ಲಿ ಅಕ್ಕಪಕ್ಕದಲ್ಲಿ ಹಲವು ಕಟ್ಟಡಗಳಿದ್ದು, ಅಗ್ನಿ ಆಕಸ್ಮಿಕದಿಂದಾಗಿ ಅವರು ಆತಂಕವನ್ನು ಎದುರಿಸಬೇಕಾಯಿತು. ಬೆಂಕಿ ಹಿಡಿಯಲು ಶಾರ್ಟ್‌ ಸರ್ಕ್ಯೂಟ್‌ ಕಾರಣ ಎಂದು ಹೇಳಲಾಗಿದೆ. 

ಗಣೇಶ್ ಪ್ರಭು ಮಾಲಕತ್ವದ ಭುವನೇಂದ್ರ ಎಂಟರ್‌ ಪ್ರೈಸಸ್‌ನ ಎಲ್‌ ಶೋರೂಂ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಅಪಾರ ಮೌಲ್ಯದ ವಿದ್ಯುತ್ ಪರಿಕರಗಳು ಸೇರಿದಂತೆ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ.

ಅಂಗಡಿ ಮಾಲಕರು ಇಂದು ಬೆಳಿಗ್ಗೆ ಶೋರೂಂನ ಬಾಗಿಲು ತೆರೆಯಲು ಬಂದ ವೇಳೆ ಈ ಅನಾಹುತವಾಗಿದ್ದು, ಬಾಗಿಲು ತೆರೆಯುತ್ತಿದ್ದಂತೆ ಮತ್ತೆ ಭಾರೀ ಬೆಂಕಿ , ಹೊಗೆ ಆವರಿಸಿದೆ.

ಸ್ಥಳೀಯರು ಕೂಡಲೇ ಅಗ್ನಿ ಶಾಮಕ ಠಾಣೆಗೆ ಕರೆ ಮಾಡಿ ತಿಳಿಸಿದ್ದಾರೆ. ಈ ಮೂಲಕ ಹೆಚ್ಚಿನ ಹಾನಿಯನ್ನು ತಪ್ಪಿಸಿದ್ದಾರೆ. ಪಾಂಡೇಶ್ವರ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು