8:08 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಹಾವೇರಿ: ಎತ್ತಿನ ಗಾಡಿಗೆ ಲಾರಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು: 2 ಎತ್ತುಗಳು ಬಲಿ, ಇಬ್ಬರಿಗೆ ಗಾಯ

10/01/2022, 13:47

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಎತ್ತಿನ ಗಾಡಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎತ್ತಿನ ಗಾಡಿ ಪೂರ್ಣ ಜಖಂಗೊಂಡ ಪರಿಣಾಮ ಸ್ಥಳದಲ್ಲಿ ಓರ್ವ ಮೃತಪಟ್ಟಿದ್ದು, 2 ಎತ್ತುಗಳು ಕೂಡ ಅಸುನೀಗಿವೆ. ದುರಂತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಹಾವೇರಿ ನಗರದಲ್ಲಿ ಭಾನುವಾರ ರಾತ್ರಿ 11 ಗಂಟೆ ಈ ದುರ್ಘಟನೆ ನಡೆದಿದೆ. ಮೂಲತಃ ವಿಜಯ ನಗರ ಜಿಲ್ಲೆ ಕೊಟ್ಟೂರು ತಾಲೂಕಿನ ದೂಪದಹಳ್ಳಿ ತಾಂಡದ ಮೂರ್ತಿ ನಾಯ್ಕ ಸ್ಥಳದಲ್ಲಿಯೇ ಮೂರ್ತಿ ನಾಯ್ಕ್ (38)ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇವರು ಹಾವೇರಿ ಜಿಲ್ಲೆ ಸಾಂಗೂರ್ ಶುಗರ್ ಫ್ಯಾಕ್ಟರಿಗೆ ಕಟಾವು ಮಾಡಿದ್ದ ಕಬ್ಬನ್ನು, ಎತ್ತಿನಗಾಡಿಯಲ್ಲಿ ತೆಗೆದು ಕೊಂಡುಹೋಗಿದ್ದಾರೆ. ರಾತ್ರಿ 11ಗಂಟೆಗೆ ಹೊತ್ತಲ್ಲಿ ಲಾರಿ ಬಂಡಿ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ಪರಿಣಾಮ ಎತ್ತಿನ ಗಾಡಿ ಸಂಪೂರ್ಣ ಜಖಂಗೊಂಡಿದ್ದು  ಸ್ಥಳದಲ್ಲೇ ಮೂರ್ತಿ ನಾಯ್ಕ್ ಮೃತಪಟ್ಟಿದ್ದಾರೆ. 2 ಎತ್ತುಗಳು ಕೂಡ ಮೃತ ಸ್ಥಳದಲ್ಲಿಯೇ ಸಾವನ್ನಪ್ಪಿವೆ.ಎತ್ತಿನ ಗಾಡಿಯಲ್ಲಿದ್ದ ಮೃತನ ಚಿಕ್ಕಪ್ಪ ಅರ್ಜುನ ನಾಯ್ಕ್ (55)ರವರಿಗೆ ಕಾಲು ಮುರಿದಿದೆ, ಅವರ ಚಿಕ್ಕಪ್ಪ ನ ಮಗ ಸೀನಾನಾಯ್ಕ(18)ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ಜರುಗಿದ ತಕ್ಷಣ ಅಪಘಾತ ಪಡಿಸಿದ ಲಾರಿ ಡ್ರೈವರ್ ಲಾರಿ ಸ್ಥಳದಲ್ಲಿಯೇ ಬಿಟ್ಟು ಪರಾರಿ ಯಾಗಿದ್ದಾನೆಂದು ಹೇಳಲಾಗಿದೆ, ಗಾಯಗೊಂಡವರನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ  ದಾಖಲಿಸಲಾಗಿದೆ ಎಂದು ಮೃತರ ಸಂಬಂಧಿಗಳು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿ

ಜಾಹೀರಾತು