10:09 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹಾವೇರಿ: ಎತ್ತಿನ ಗಾಡಿಗೆ ಲಾರಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು: 2 ಎತ್ತುಗಳು ಬಲಿ, ಇಬ್ಬರಿಗೆ ಗಾಯ

10/01/2022, 13:47

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಎತ್ತಿನ ಗಾಡಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎತ್ತಿನ ಗಾಡಿ ಪೂರ್ಣ ಜಖಂಗೊಂಡ ಪರಿಣಾಮ ಸ್ಥಳದಲ್ಲಿ ಓರ್ವ ಮೃತಪಟ್ಟಿದ್ದು, 2 ಎತ್ತುಗಳು ಕೂಡ ಅಸುನೀಗಿವೆ. ದುರಂತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಹಾವೇರಿ ನಗರದಲ್ಲಿ ಭಾನುವಾರ ರಾತ್ರಿ 11 ಗಂಟೆ ಈ ದುರ್ಘಟನೆ ನಡೆದಿದೆ. ಮೂಲತಃ ವಿಜಯ ನಗರ ಜಿಲ್ಲೆ ಕೊಟ್ಟೂರು ತಾಲೂಕಿನ ದೂಪದಹಳ್ಳಿ ತಾಂಡದ ಮೂರ್ತಿ ನಾಯ್ಕ ಸ್ಥಳದಲ್ಲಿಯೇ ಮೂರ್ತಿ ನಾಯ್ಕ್ (38)ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇವರು ಹಾವೇರಿ ಜಿಲ್ಲೆ ಸಾಂಗೂರ್ ಶುಗರ್ ಫ್ಯಾಕ್ಟರಿಗೆ ಕಟಾವು ಮಾಡಿದ್ದ ಕಬ್ಬನ್ನು, ಎತ್ತಿನಗಾಡಿಯಲ್ಲಿ ತೆಗೆದು ಕೊಂಡುಹೋಗಿದ್ದಾರೆ. ರಾತ್ರಿ 11ಗಂಟೆಗೆ ಹೊತ್ತಲ್ಲಿ ಲಾರಿ ಬಂಡಿ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ಪರಿಣಾಮ ಎತ್ತಿನ ಗಾಡಿ ಸಂಪೂರ್ಣ ಜಖಂಗೊಂಡಿದ್ದು  ಸ್ಥಳದಲ್ಲೇ ಮೂರ್ತಿ ನಾಯ್ಕ್ ಮೃತಪಟ್ಟಿದ್ದಾರೆ. 2 ಎತ್ತುಗಳು ಕೂಡ ಮೃತ ಸ್ಥಳದಲ್ಲಿಯೇ ಸಾವನ್ನಪ್ಪಿವೆ.ಎತ್ತಿನ ಗಾಡಿಯಲ್ಲಿದ್ದ ಮೃತನ ಚಿಕ್ಕಪ್ಪ ಅರ್ಜುನ ನಾಯ್ಕ್ (55)ರವರಿಗೆ ಕಾಲು ಮುರಿದಿದೆ, ಅವರ ಚಿಕ್ಕಪ್ಪ ನ ಮಗ ಸೀನಾನಾಯ್ಕ(18)ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ಜರುಗಿದ ತಕ್ಷಣ ಅಪಘಾತ ಪಡಿಸಿದ ಲಾರಿ ಡ್ರೈವರ್ ಲಾರಿ ಸ್ಥಳದಲ್ಲಿಯೇ ಬಿಟ್ಟು ಪರಾರಿ ಯಾಗಿದ್ದಾನೆಂದು ಹೇಳಲಾಗಿದೆ, ಗಾಯಗೊಂಡವರನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ  ದಾಖಲಿಸಲಾಗಿದೆ ಎಂದು ಮೃತರ ಸಂಬಂಧಿಗಳು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿ

ಜಾಹೀರಾತು