1:46 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಹಾವೇರಿ: ಎತ್ತಿನ ಗಾಡಿಗೆ ಲಾರಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು: 2 ಎತ್ತುಗಳು ಬಲಿ, ಇಬ್ಬರಿಗೆ ಗಾಯ

10/01/2022, 13:47

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಎತ್ತಿನ ಗಾಡಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎತ್ತಿನ ಗಾಡಿ ಪೂರ್ಣ ಜಖಂಗೊಂಡ ಪರಿಣಾಮ ಸ್ಥಳದಲ್ಲಿ ಓರ್ವ ಮೃತಪಟ್ಟಿದ್ದು, 2 ಎತ್ತುಗಳು ಕೂಡ ಅಸುನೀಗಿವೆ. ದುರಂತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಹಾವೇರಿ ನಗರದಲ್ಲಿ ಭಾನುವಾರ ರಾತ್ರಿ 11 ಗಂಟೆ ಈ ದುರ್ಘಟನೆ ನಡೆದಿದೆ. ಮೂಲತಃ ವಿಜಯ ನಗರ ಜಿಲ್ಲೆ ಕೊಟ್ಟೂರು ತಾಲೂಕಿನ ದೂಪದಹಳ್ಳಿ ತಾಂಡದ ಮೂರ್ತಿ ನಾಯ್ಕ ಸ್ಥಳದಲ್ಲಿಯೇ ಮೂರ್ತಿ ನಾಯ್ಕ್ (38)ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇವರು ಹಾವೇರಿ ಜಿಲ್ಲೆ ಸಾಂಗೂರ್ ಶುಗರ್ ಫ್ಯಾಕ್ಟರಿಗೆ ಕಟಾವು ಮಾಡಿದ್ದ ಕಬ್ಬನ್ನು, ಎತ್ತಿನಗಾಡಿಯಲ್ಲಿ ತೆಗೆದು ಕೊಂಡುಹೋಗಿದ್ದಾರೆ. ರಾತ್ರಿ 11ಗಂಟೆಗೆ ಹೊತ್ತಲ್ಲಿ ಲಾರಿ ಬಂಡಿ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ಪರಿಣಾಮ ಎತ್ತಿನ ಗಾಡಿ ಸಂಪೂರ್ಣ ಜಖಂಗೊಂಡಿದ್ದು  ಸ್ಥಳದಲ್ಲೇ ಮೂರ್ತಿ ನಾಯ್ಕ್ ಮೃತಪಟ್ಟಿದ್ದಾರೆ. 2 ಎತ್ತುಗಳು ಕೂಡ ಮೃತ ಸ್ಥಳದಲ್ಲಿಯೇ ಸಾವನ್ನಪ್ಪಿವೆ.ಎತ್ತಿನ ಗಾಡಿಯಲ್ಲಿದ್ದ ಮೃತನ ಚಿಕ್ಕಪ್ಪ ಅರ್ಜುನ ನಾಯ್ಕ್ (55)ರವರಿಗೆ ಕಾಲು ಮುರಿದಿದೆ, ಅವರ ಚಿಕ್ಕಪ್ಪ ನ ಮಗ ಸೀನಾನಾಯ್ಕ(18)ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ಜರುಗಿದ ತಕ್ಷಣ ಅಪಘಾತ ಪಡಿಸಿದ ಲಾರಿ ಡ್ರೈವರ್ ಲಾರಿ ಸ್ಥಳದಲ್ಲಿಯೇ ಬಿಟ್ಟು ಪರಾರಿ ಯಾಗಿದ್ದಾನೆಂದು ಹೇಳಲಾಗಿದೆ, ಗಾಯಗೊಂಡವರನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ  ದಾಖಲಿಸಲಾಗಿದೆ ಎಂದು ಮೃತರ ಸಂಬಂಧಿಗಳು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿ

ಜಾಹೀರಾತು