11:26 PM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಪರಿಸರ ಪ್ರವಾಸೋದ್ಯಮಕ್ಕೆ ಜಿಲ್ಲೆಯಲ್ಲಿ ಆದ್ಯತೆ: ಸಂಸದ ನಳಿನ್ ಕುಮಾರ್ ಕಟೀಲ್

10/01/2022, 15:19

ಮಂಗಳೂರು(reporterkarnataka.com): ಪ್ರಕೃತಿ ಮತ್ತು ಪರಿಸರವನ್ನು ಸಂರಕ್ಷಿಸುವ ಪರಿಸರ ಪ್ರವಾಸೋದ್ಯಮಕ್ಕೆ ಜಿಲ್ಲೆಯಲ್ಲಿ ಆದ್ಯತೆ ನೀಡಲಾಗುತ್ತಿದ್ದು, ಅದಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಅವರು ಭಾನುವಾರ ಈ ಬಗ್ಗೆ ತಣ್ಣೀರು ಬಾವಿಯಲ್ಲಿರುವ ಅರಣ್ಯ ಇಲಾಖೆಯಲ್ಲಿ ಜನಪ್ರತಿನಿಧಿಗಳು‌ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿದರು. 

ಸಸಿಹಿತ್ಲು ಹಾಗೂ ತಣ್ಣೀರುಬಾವಿ ಕಡಲ ತೀರಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ, ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಸ್ ವತಿಯಿಂದ ಪ್ರವಾಸಿಗರ ಅನುಕೂಲಕ್ಕೆ ಪ್ರಕೃತಿ ಮತ್ತು ಪರಿಸರಕ್ಕೆ ಅನುಕೂಲವಾಗುವ ರೀತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿಪಡಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಮೂಲಭೂತ ಸೌಕರ್ಯಗಳು, ಸರ್ಫಿಂಗ್, ಪ್ರವಾಸಿಗರನ್ನು ಆಕರ್ಷಿಸುವ ಇತ್ಯಾದಿ ಚಟುವಟಿಕೆಗಳಿಗೆ ಕರಾವಳಿ ನಿಯಂತ್ರಣ ವಲಯದ ನಿಯಮಗಳು (ಸಿಆರ್ ಝಡ್)  ಉಲ್ಲಂಘನೆಯಾಗದಂತೆ ಅಭಿವೃದ್ಧಿಗೆ ಕ್ರಮವಹಿಸುವಂತೆ ಅವರು ತಿಳಿಸಿದರು.

ಇದಕ್ಕೂ ಮುನ್ನ ಅವರು ಸಸಿಹಿತ್ಲು, ತಣ್ಣೀರು ಬಾವಿ ಕಡಲ ತೀರಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಶಾಸಕ ಡಾ. ವೈ.ಭರತ್ ಶೆಟ್ಟಿ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.‌‌, ಜನಪ್ರತಿನಿಧಿಗಳು ಹಾಗೂ ಇಲಾಖೆಗಳ ಅಧಿಕಾರಿಗಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು