7:04 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಪರಿಸರ ಪ್ರವಾಸೋದ್ಯಮಕ್ಕೆ ಜಿಲ್ಲೆಯಲ್ಲಿ ಆದ್ಯತೆ: ಸಂಸದ ನಳಿನ್ ಕುಮಾರ್ ಕಟೀಲ್

10/01/2022, 15:19

ಮಂಗಳೂರು(reporterkarnataka.com): ಪ್ರಕೃತಿ ಮತ್ತು ಪರಿಸರವನ್ನು ಸಂರಕ್ಷಿಸುವ ಪರಿಸರ ಪ್ರವಾಸೋದ್ಯಮಕ್ಕೆ ಜಿಲ್ಲೆಯಲ್ಲಿ ಆದ್ಯತೆ ನೀಡಲಾಗುತ್ತಿದ್ದು, ಅದಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಅವರು ಭಾನುವಾರ ಈ ಬಗ್ಗೆ ತಣ್ಣೀರು ಬಾವಿಯಲ್ಲಿರುವ ಅರಣ್ಯ ಇಲಾಖೆಯಲ್ಲಿ ಜನಪ್ರತಿನಿಧಿಗಳು‌ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿದರು. 

ಸಸಿಹಿತ್ಲು ಹಾಗೂ ತಣ್ಣೀರುಬಾವಿ ಕಡಲ ತೀರಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ, ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಸ್ ವತಿಯಿಂದ ಪ್ರವಾಸಿಗರ ಅನುಕೂಲಕ್ಕೆ ಪ್ರಕೃತಿ ಮತ್ತು ಪರಿಸರಕ್ಕೆ ಅನುಕೂಲವಾಗುವ ರೀತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿಪಡಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಮೂಲಭೂತ ಸೌಕರ್ಯಗಳು, ಸರ್ಫಿಂಗ್, ಪ್ರವಾಸಿಗರನ್ನು ಆಕರ್ಷಿಸುವ ಇತ್ಯಾದಿ ಚಟುವಟಿಕೆಗಳಿಗೆ ಕರಾವಳಿ ನಿಯಂತ್ರಣ ವಲಯದ ನಿಯಮಗಳು (ಸಿಆರ್ ಝಡ್)  ಉಲ್ಲಂಘನೆಯಾಗದಂತೆ ಅಭಿವೃದ್ಧಿಗೆ ಕ್ರಮವಹಿಸುವಂತೆ ಅವರು ತಿಳಿಸಿದರು.

ಇದಕ್ಕೂ ಮುನ್ನ ಅವರು ಸಸಿಹಿತ್ಲು, ತಣ್ಣೀರು ಬಾವಿ ಕಡಲ ತೀರಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಶಾಸಕ ಡಾ. ವೈ.ಭರತ್ ಶೆಟ್ಟಿ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.‌‌, ಜನಪ್ರತಿನಿಧಿಗಳು ಹಾಗೂ ಇಲಾಖೆಗಳ ಅಧಿಕಾರಿಗಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು