3:39 AM Friday3 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಭಾರತಕ್ಕೆ ಕೊರೊನಾ 3ನೇ ಅಲೆ; ನೋ ಚಾನ್ಸ್ ಎನ್ನುತ್ತಾರೆ ಖ್ಯಾತ ವೈದ್ಯ ಡಾ. ರಾಜು ಕೃಷ್ಣಮೂರ್ತಿ

04/06/2021, 07:50

ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆಯ ಆರ್ಭಟ ತಗ್ಗುವ ಮುನ್ನವೇ 3ನೇ ಅಲೆಯ ಬಗ್ಗೆ ವ್ಯಾಪಕವಾಗಿ ಚರ್ಚೆ ನಡೆಯುತ್ತದೆ. ಮಕ್ಕಳನ್ನೇ ಟಾರ್ಗೆಟ್ ಮಾಡಿ ಬರುತ್ತದೆ. ಅಕ್ಟೋಬರ್ ನಲ್ಲೇ ಶುರುವಾಗುತ್ತದೆ ಎಂದು ಸುದ್ದಿ ಹಬ್ಬಿಸಲಾಗುತ್ತಿದೆ. ಈ ಕುರಿತು ರಾಜ್ಯದ ಹೆಮ್ಮೆಯ ವೈದ್ಯರಾದ ಡಾ. ರಾಜು ಕೃಷ್ಣಮೂರ್ತಿ ಏನು ಹೇಳುತ್ತಾರೆ ಎಂಬುದನ್ನು ಓದಿ ನೋಡೋಣ.

ಡಾ. ರಾಜು ಪ್ರಕಾರ ಇದೊಂದು ಹೆದರಿಸುವ ತಂತ್ರವಾಗಿದೆಯಂತೆ. ಅವರು ಹೇಳುವ ಪ್ರಕಾರ 3ನೇ ಅಲೆ ನೋ ಚಾನ್ಸ್. ಜನರಲ್ಲಿ ಈಗಾಗಲೇ ಗಾರ್ಡ್ ಇಮ್ಯುನಿಟಿ ಜಾಸ್ತಿಯಾಗಿದೆಯಂತೆ. ಜನ ಸಮುದಾಯಕ್ಕೆ ರೋಗ ನಿರೋಧಕ ಶಕ್ತಿ ಬಂದಿರುವುದರಿಂದ 3ನೇ ಅಲೆ ಇತ್ತ ಸುಳಿಯದು ಎಂಬ ಸಿಹಿ ಸುದ್ದಿಯನ್ನು ಕೊಟ್ಟಿದ್ದಾರೆ.

ಡಾ. ರಾಜು ಮತ್ತೊಂದು ಕಿವಿಮಾತು ಹೇಳುತ್ತಾರೆ. ಅದೇನೆಂದರೆ ಮೂರನೇ ಅಲೆ ಬಾರದು ಎಂದು ನಿರ್ಲಕ್ಷ್ಯ ಬೇಡ. ಸಾಕಷ್ಟು ತರಕಾರಿ, ಸೊಪ್ಪು, ಹಣ್ಣು ಹಂಪಲು ತಿಂದು ವ್ಯಾಯಾಮ ಮಾಡಿ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಿ ಎನ್ನುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು