3:13 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಕಾಶ್ಮೀರದ ಹಿಮಪರ್ವತದಲ್ಲಿ ಮಸ್ಕಿಯ ಹೆಸರು!!: ಅಭಿಮಾನ ಮೆರೆದ ರಾಯಚೂರು ಯೋಧ

11/01/2022, 10:23

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 

ಅಂತರಗಂಗೆ ರಾಯಚೂರು

info.reporterkarnataka.com

ರಾಯಚೂರಿನ ಮಸ್ಕಿಯಿಂದ ದೇಶ ಸೇವೆ ಮಾಡಲು ಸೈನ್ಯ ಸೇರಿದ ಯೋಧರೊಬ್ಬರು ಕಾಶ್ಮೀರದಲ್ಲಿ ಹಿಮದಿಂದ ಕೂಡ ಪರ್ವತ ಶ್ರೇಣಿಯಲ್ಲಿ ಮಸ್ಕಿಯ ಹೆಸರು ಬರೆದು ನಾಡಿನ ಅಭಿಮಾನವನ್ನು ಮೆರೆದಿದ್ದಾರೆ.

ಮಸ್ಕಿಯ ಯುವಕ ಮನೋಜ್ ಕುಮಾರ್ ಕಳೆದ 10 ವರ್ಷಗಳಿಂದ ದೇಶ ಕಾಯುವ ಕಾಯಕದಲ್ಲಿ ನಿರತರಾಗಿದ್ದಾರೆ. ಕಾಶ್ಮೀರದ ಗಡಿ ಭಾಗದಲ್ಲಿ ಕೊರೆಯುವ ಚಳಿಯಲ್ಲಿ ಕರ್ತವ್ಯ ನಿರತರಾಗಿದ್ದಾರೆ. ಕಾಶ್ಮೀರದ ಹಿಮ ಪರ್ವತದಲ್ಲಿ ತನ್ನ ಹುಟ್ಟೂರಿನ ಅಭಿಮಾನದಿಂದ ಹಿಮಗುಡ್ಡೆಯ ಮೇಲೆ ಮಸ್ಕಿ ಹೆಸರು ಬರೆದು ಅಭಿಮಾನ ಮೆರೆದಿದ್ದಾರೆ.

ಮನೋಜ್ ಕುಮಾರ್ ಮಸ್ಕಿಯ ಜೋಗಿನ ರಾಮಣ್ಣ ಸ್ಮಾರಕ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದರು. ಶಾಲಾ ದಿನಗಳಲ್ಲಿ ದೇಶ ಅಭಿಮಾನ ಹೊಂದಿದ್ದು, ದೇಶಸೇವೆ ಮಾಡುವ ಅಭಿಲಾಷೆಯನ್ನು ತನ್ನ ಸ್ನೇಹಿತರ ಜತೆ ಹಂಚಿಕೊಂಡಿದ್ದರು. ಇದನ್ನು ಮಸ್ಕಿಯಲ್ಲಿರುವ ಅವ ಸ್ನೇಹಿತರು ನೆನಪಿಸಿಕೊಳ್ಳುತ್ತಾರೆ.

ಮಸ್ಕಿ ಯೋಧ ಮನೋಜ್ ಕುಮಾರ್ ದೇಶಸೇವೆ ಮಾಡಲು ಸೇರಿದಾಗಿನಿಂದ ಆತನಿಗೆ ಹುಟ್ಟೂರಿನ ಅಭಿಮಾನಿಗಳು ಹೆಚ್ಚಾಗಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು