6:58 PM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿರುವ ಮಗುವಿಗೆ ಕಾಂಗ್ರೆಸ್ ನಾಯಕ ಮಿಥುನ್ ರೈ ಸಹಾಯ ಹಸ್ತ

04/06/2021, 07:54

ಮೂಡುಬಿದಿರೆ(reporterkarnataka news) : ಪುತ್ತಿಗೆ ಗ್ರಾಮದ ಸಬ್ ಸ್ಟೇಷನ್ ಬಳಿಯ ಶೇಕ್ ಮುಬೀನ್ ಮತ್ತು ಸಲ್ಮಾ ಬಾನು ಅವರ 8 ವರ್ಷದ ಮಗು ಮಹಮ್ಮದ್ ಸರೋಶ್ ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದು , ಅದರ ಚಿಕಿತ್ಸೆಯ ನಂತರ ಮಗುವಿನ ದೈಹಿಕ ಬೆಳವಣಿಗೆ ಕುಂಠಿತವಾಗಿದ್ದು, ಮಗುವಿನ ಮುಂದಿನ ಬೆಳವಣಿಗೆಗೆ 12 ತಿಂಗಳ ಕಾಲ 15,000 ರೂಪಾಯಿ ಮೌಲ್ಯದ ಇಂಜೆಕ್ಷನ್ ನೀಡುವಂತೆ ವೈದ್ಯರು ಸೂಚಿಸಿದ್ದು ಬಡಕುಟುಂಬ ಬಹಳಷ್ಟು ಸಂಕಷ್ಟಕ್ಕೀಡಾಗಿತ್ತು. ಇದನ್ನು ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಮಿಥುನ್ ರೈ ಅವರ ಗಮನಕ್ಕೆ ಸ್ಥಳೀಯ ನಾಯಕರು ತಂದಿದ್ದು ಅವರು ಆ ಮಗುವಿಗೆ 15,000 ಮೌಲ್ಯದ ಇಂಜೆಕ್ಷನ್ ಆ ಮಗುವಿನ ಮನೆಗೆ ತಂದುಕೊಟ್ಟಿದ್ದು ಮಗುವಿನ ಮುಂದಿನ ಚಿಕಿತ್ಸೆಗೆ ನೆರವಾಗುವ ಭರವಸೆಯನ್ನು ನೀಡಿ ಮಗುವಿನ ಪೋಷಕರಿಗೆ ಧೈರ್ಯ ತುಂಬಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ,  ವಲೇರಿಯನ್ ಸಿಕ್ವೇರಾ , ರಾಜೇಶ್ ಕಡಲಕೆರೆ , ಚಂದ್ರಹಾಸ್  ಸನಿಲ್ , ಜಯಕುಮಾರ್ ಶೆಟ್ಟಿ , ವಾಸುದೇವ ನಾಯಕ್ , ನಿತಿನ್ ಬೆಳುವಾಯಿ,  ಮಹಮ್ಮದ್ ಶರೀಫ್ , ಸುದೀಶ್ ಪುತ್ತಿಗೆ  , ಲತೀಫ್ ,  ಶಬೀರ್ , ಪುರುಷೋತ್ತಮ್ ನಾಯಕ್ , ಸುರೇಶ್ ಕೋಟ್ಯಾನ್ , ಸುಂದರ ಸಿ. ಪೂಜಾರಿ , ಕುಮಾರ್ ಪೂಜಾರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು