2:38 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿರುವ ಮಗುವಿಗೆ ಕಾಂಗ್ರೆಸ್ ನಾಯಕ ಮಿಥುನ್ ರೈ ಸಹಾಯ ಹಸ್ತ

04/06/2021, 07:54

ಮೂಡುಬಿದಿರೆ(reporterkarnataka news) : ಪುತ್ತಿಗೆ ಗ್ರಾಮದ ಸಬ್ ಸ್ಟೇಷನ್ ಬಳಿಯ ಶೇಕ್ ಮುಬೀನ್ ಮತ್ತು ಸಲ್ಮಾ ಬಾನು ಅವರ 8 ವರ್ಷದ ಮಗು ಮಹಮ್ಮದ್ ಸರೋಶ್ ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದು , ಅದರ ಚಿಕಿತ್ಸೆಯ ನಂತರ ಮಗುವಿನ ದೈಹಿಕ ಬೆಳವಣಿಗೆ ಕುಂಠಿತವಾಗಿದ್ದು, ಮಗುವಿನ ಮುಂದಿನ ಬೆಳವಣಿಗೆಗೆ 12 ತಿಂಗಳ ಕಾಲ 15,000 ರೂಪಾಯಿ ಮೌಲ್ಯದ ಇಂಜೆಕ್ಷನ್ ನೀಡುವಂತೆ ವೈದ್ಯರು ಸೂಚಿಸಿದ್ದು ಬಡಕುಟುಂಬ ಬಹಳಷ್ಟು ಸಂಕಷ್ಟಕ್ಕೀಡಾಗಿತ್ತು. ಇದನ್ನು ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಮಿಥುನ್ ರೈ ಅವರ ಗಮನಕ್ಕೆ ಸ್ಥಳೀಯ ನಾಯಕರು ತಂದಿದ್ದು ಅವರು ಆ ಮಗುವಿಗೆ 15,000 ಮೌಲ್ಯದ ಇಂಜೆಕ್ಷನ್ ಆ ಮಗುವಿನ ಮನೆಗೆ ತಂದುಕೊಟ್ಟಿದ್ದು ಮಗುವಿನ ಮುಂದಿನ ಚಿಕಿತ್ಸೆಗೆ ನೆರವಾಗುವ ಭರವಸೆಯನ್ನು ನೀಡಿ ಮಗುವಿನ ಪೋಷಕರಿಗೆ ಧೈರ್ಯ ತುಂಬಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ,  ವಲೇರಿಯನ್ ಸಿಕ್ವೇರಾ , ರಾಜೇಶ್ ಕಡಲಕೆರೆ , ಚಂದ್ರಹಾಸ್  ಸನಿಲ್ , ಜಯಕುಮಾರ್ ಶೆಟ್ಟಿ , ವಾಸುದೇವ ನಾಯಕ್ , ನಿತಿನ್ ಬೆಳುವಾಯಿ,  ಮಹಮ್ಮದ್ ಶರೀಫ್ , ಸುದೀಶ್ ಪುತ್ತಿಗೆ  , ಲತೀಫ್ ,  ಶಬೀರ್ , ಪುರುಷೋತ್ತಮ್ ನಾಯಕ್ , ಸುರೇಶ್ ಕೋಟ್ಯಾನ್ , ಸುಂದರ ಸಿ. ಪೂಜಾರಿ , ಕುಮಾರ್ ಪೂಜಾರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು