12:43 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಸ್ಕಾರ್ಫ್-ಕೇಸರಿ‌ ಶಲ್ಯ ವಿವಾದ‌: ಕಾಲೇಜು ಆವರಣದಲ್ಲಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವೆ ಹೊಡೆದಾಟ

12/01/2022, 09:26

ಚಿಕ್ಕಮಗಳೂರು(reporterkarnataka.com): ಜಿಲ್ಲೆಯ ಕೊಪ್ಪದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ಕಾರ್ಫ್ ಹಾಗೂ ಕೇಸರಿ‌ ಶಲ್ಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಗಲಾಟೆ ನಡೆದಿದೆ.‌ 

ಕೆಲವರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸ್ಕಾರ್ಫ್ ಹಾಗೂ ಕೇಸರಿ ಶಲ್ಯಕ್ಕೆ ಸಂಬಂಧಿಸಿದಂತೆ ಕೊಪ್ಪದ ಪದವಿ ಕಾಲೇಜಿನಲ್ಲಿ ವಿವಾದ ಆರಂಭಗೊಂಡಿತ್ತು. 

ಅಲ್ಲಿ ಶಾಸಕರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ವಿವಾದ ಅಂತ್ಯ ಕಾಣುತ್ತಿದ್ದಂತೆ ಪಿಯು ಕಾಲೇಜಿನಲ್ಲಿ‌‌ ಆರಂಭಗೊಂಡಿದೆ. ಅದು ಒಂದು ಹಂತಕ್ಕೆ ಮುಂದಕ್ಕೆ ಹೋಗಿದೆ. ಎರಡು ಗುಂಪುಗಳ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡಿದ್ದಾರೆ. ಕಾಲೇಜಿನ ಆವರಣದಲ್ಲಿಯೇ ಹೊಡೆದಾಡಿಕೊಂಡಿದ್ದಾರೆ. ಈ ಘಟನೆಯೂ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.

ಈ ವಿವಾದದ ಆರಂಭದಲ್ಲಿಯೇ ಇತ್ಯರ್ಥಗೊಳಿಸುವಲ್ಲಿ‌ ಕಾಲೇಜು ಆಡಳಿತ ಮಂಡಳಿ ಮುಂದಾಗಬೇಕಿತ್ತು. ಪ್ರಾಚಾರ್ಯ ಹಾಗೂ ಆಡಳಿತ ಮಂಡಳಿ ಬೇಜಾವ್ದಾರಿಯಿಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು