11:18 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಒಮಿಕ್ರಾನ್ ವೈರಸ್; ಭಾರತದಲ್ಲಿ 1 ಸಾವು: ಕೇಂದ್ರ ಆರೋಗ್ಯ ಸಚಿವಾಲಯ

12/01/2022, 22:08

ಹೊಸದಿಲ್ಲಿ(reporterkarnataka.com): ಎಲ್ಲೆಡೆ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿದ್ದು, ಸೋಂಕಿನಿಂದ ಭಾರತದಲ್ಲಿ ಒಂದು ಸಾವು ಸಂಭವಿಸಿದ್ದು, ವಿಶ್ವದಲ್ಲಿ ಒಟ್ಟು 115 ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿದ್ದು, ಒಮಿಕ್ರಾನ್ ಕೋವಿಡ್ ರೂಪಾಂತರವು ಸಾಮಾನ್ಯ ಶೀತವಲ್ಲ ಮತ್ತು ಅದನ್ನ ಲಘುವಾಗಿ ಯಾರು ಪರಿಗಣಿಸಬಾರದು. ಲಸಿಕೆ ಪಡೆಯುವುದು ಮತ್ತು ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸುವುದು ಮುಖ್ಯ ಎಂದು ಹೇಳಿದರು.

ನಾವು ಮುಖ್ಯವಾಗಿ ಮಾಸ್ಕ್ ಧರಿಸಬೇಕು. ಲಸಿಕೆ ಹಾಕಿಸಿಕೊಳ್ಳಿ. ಇದು ಒಂದು ಮಟ್ಟಿಗೆ ಸಹಾಯಕವಾಗಿವೆ ಎಂಬುದು ವಾಸ್ತವ. ನಮ್ಮ ಕೋವಿಡ್ ಪ್ರತಿಕ್ರಿಯೆಯ ಲಸಿಕೆ ನಿರ್ಣಾಯಕ ಸ್ತಂಭವಾಗಿದೆ ಎಂದು ಪಾಲ್ ಹೇಳಿದರು.

ಇನ್ನು ಭಾರತದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಕುರಿತು ಮಾತನಾಡಿದ ಅವರು, ಭಾರತದಲ್ಲಿ ಇಂದು 9,55,319 ಸಕ್ರಿಯ ಪ್ರಕರಣಗಳಿವೆ. ಮುಖ್ಯವಾಗಿ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ದೆಹಲಿ, ತಮಿಳುನಾಡು, ಕರ್ನಾಟಕ, ಉತ್ತರ ಪ್ರದೇಶ, ಕೇರಳ ಮತ್ತು ಗುಜರಾತ್ ನಲ್ಲಿ ಹೆಚ್ಚಿನ ಆತಂಕವಿದೆ ಎಂದು ಅವರು ಹೇಳಿದರು. . ಇನ್ನು ಮಹಾರಾಷ್ಟ್ರ 22.39%, ಪಶ್ಚಿಮ ಬಂಗಾಳ 32.18%, ದೆಹಲಿ 23.1% ಮತ್ತು ಉತ್ತರ ಪ್ರದೇಶ 4.47% ಇದೆ ಎಂದರು.

ಅದೇ ರೀತಿ ಯುರೋಪಿನ ಎಂಟು ದೇಶಗಳು ಕಳೆದ ಎರಡು ವಾರಗಳಲ್ಲಿ 2 ಪಟ್ಟು ಹೆಚ್ಚು ಪ್ರಕರಣಗಳನ್ನು ವರದಿ ಮಾಡುತ್ತಿವೆ ಎಂದು ಹೇಳಿದರು.

ಜನವರಿ 9 ರಂದು ಕೊವಿಡ್ 19 ಪರಿಸ್ಥಿತಿಯ ಕುರಿತು ಪ್ರಧಾನ ಮಂತ್ರಿ ಮೋದಿ ಅವರು ನಡೆಸಿದ ಪರಿಶೀಲನಾ ಸಭೆ ಬಳಿಕ ಆರೋಗ್ಯ ಸಚಿವಾಲಯವು ಸೌಮ್ಯ ಮತ್ತು ಮಧ್ಯಮ ಪ್ರಕರಣಗಳಾಗಿ ವರ್ಗೀಕರಿಸಲಾದ ತೀವ್ರತೆಯೊಂದಿಗೆ ಡಿಸ್ಚಾರ್ಜ್ ನೀತಿಯನ್ನು ಪರಿಷ್ಕರಿಸಿದೆ. ಸತತ 3 ದಿನಗಳ ಕಾಲ ಪಾಸಿಟಿವ್ ಮತ್ತು ಅರ್ತು ಪರೀಕ್ಷೆಯಿಂದ ಕನಿಷ್ಠ 7 ದಿನಗಳ ನಂತ್ರ ಸೌಮ್ಯ ಪ್ರಕರಣ ಡಿಸ್ಚಾರ್ಜ್, ಡಿಸ್ಚಾರ್ಜ್ʼಗೆ ಮೊದಲು ಪರೀಕ್ಷೆಯ ಅಗತ್ಯವಿಲ್ಲ.

ಎಲ್ಲಾಎಲ್ಲಾ ರೋಗಲಕ್ಷಣದ ಪ್ರಕರಣಗಳನ್ನ ಪರೀಕ್ಷಿಸಬೇಕಾಗಿದೆ. ರೋಗಲಕ್ಷಣವಿಲ್ಲದ ಪ್ರಕರಣಗಳು ಹೆಚ್ಚಿನ ಅಪಾಯದಲ್ಲಿರದ ಹೊರತು ಪರೀಕ್ಷಿಸಲ್ಪಡುವ ಅಗತ್ಯವಿಲ್ಲ. ಮಾರ್ಗಸೂಚಿಗಳ ಪ್ರಕಾರ, 7 ದಿನಗಳ ಕಾಲ ಎಲ್ಲಾ ಸಂಪರ್ಕಗಳಿಗೆ ಹೋಮ್ ಕ್ವಾರಂಟೈನ್ ಕಡ್ಡಾಯ ಎಂದು ಡಿಜಿ, ಐಸಿಎಂಆರ್ ಡಾ. ಬಲರಾಮ್ ಭಾರ್ಗವ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು