11:09 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಒಮಿಕ್ರಾನ್ ವೈರಸ್; ಭಾರತದಲ್ಲಿ 1 ಸಾವು: ಕೇಂದ್ರ ಆರೋಗ್ಯ ಸಚಿವಾಲಯ

12/01/2022, 22:08

ಹೊಸದಿಲ್ಲಿ(reporterkarnataka.com): ಎಲ್ಲೆಡೆ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿದ್ದು, ಸೋಂಕಿನಿಂದ ಭಾರತದಲ್ಲಿ ಒಂದು ಸಾವು ಸಂಭವಿಸಿದ್ದು, ವಿಶ್ವದಲ್ಲಿ ಒಟ್ಟು 115 ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿದ್ದು, ಒಮಿಕ್ರಾನ್ ಕೋವಿಡ್ ರೂಪಾಂತರವು ಸಾಮಾನ್ಯ ಶೀತವಲ್ಲ ಮತ್ತು ಅದನ್ನ ಲಘುವಾಗಿ ಯಾರು ಪರಿಗಣಿಸಬಾರದು. ಲಸಿಕೆ ಪಡೆಯುವುದು ಮತ್ತು ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸುವುದು ಮುಖ್ಯ ಎಂದು ಹೇಳಿದರು.

ನಾವು ಮುಖ್ಯವಾಗಿ ಮಾಸ್ಕ್ ಧರಿಸಬೇಕು. ಲಸಿಕೆ ಹಾಕಿಸಿಕೊಳ್ಳಿ. ಇದು ಒಂದು ಮಟ್ಟಿಗೆ ಸಹಾಯಕವಾಗಿವೆ ಎಂಬುದು ವಾಸ್ತವ. ನಮ್ಮ ಕೋವಿಡ್ ಪ್ರತಿಕ್ರಿಯೆಯ ಲಸಿಕೆ ನಿರ್ಣಾಯಕ ಸ್ತಂಭವಾಗಿದೆ ಎಂದು ಪಾಲ್ ಹೇಳಿದರು.

ಇನ್ನು ಭಾರತದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಕುರಿತು ಮಾತನಾಡಿದ ಅವರು, ಭಾರತದಲ್ಲಿ ಇಂದು 9,55,319 ಸಕ್ರಿಯ ಪ್ರಕರಣಗಳಿವೆ. ಮುಖ್ಯವಾಗಿ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ದೆಹಲಿ, ತಮಿಳುನಾಡು, ಕರ್ನಾಟಕ, ಉತ್ತರ ಪ್ರದೇಶ, ಕೇರಳ ಮತ್ತು ಗುಜರಾತ್ ನಲ್ಲಿ ಹೆಚ್ಚಿನ ಆತಂಕವಿದೆ ಎಂದು ಅವರು ಹೇಳಿದರು. . ಇನ್ನು ಮಹಾರಾಷ್ಟ್ರ 22.39%, ಪಶ್ಚಿಮ ಬಂಗಾಳ 32.18%, ದೆಹಲಿ 23.1% ಮತ್ತು ಉತ್ತರ ಪ್ರದೇಶ 4.47% ಇದೆ ಎಂದರು.

ಅದೇ ರೀತಿ ಯುರೋಪಿನ ಎಂಟು ದೇಶಗಳು ಕಳೆದ ಎರಡು ವಾರಗಳಲ್ಲಿ 2 ಪಟ್ಟು ಹೆಚ್ಚು ಪ್ರಕರಣಗಳನ್ನು ವರದಿ ಮಾಡುತ್ತಿವೆ ಎಂದು ಹೇಳಿದರು.

ಜನವರಿ 9 ರಂದು ಕೊವಿಡ್ 19 ಪರಿಸ್ಥಿತಿಯ ಕುರಿತು ಪ್ರಧಾನ ಮಂತ್ರಿ ಮೋದಿ ಅವರು ನಡೆಸಿದ ಪರಿಶೀಲನಾ ಸಭೆ ಬಳಿಕ ಆರೋಗ್ಯ ಸಚಿವಾಲಯವು ಸೌಮ್ಯ ಮತ್ತು ಮಧ್ಯಮ ಪ್ರಕರಣಗಳಾಗಿ ವರ್ಗೀಕರಿಸಲಾದ ತೀವ್ರತೆಯೊಂದಿಗೆ ಡಿಸ್ಚಾರ್ಜ್ ನೀತಿಯನ್ನು ಪರಿಷ್ಕರಿಸಿದೆ. ಸತತ 3 ದಿನಗಳ ಕಾಲ ಪಾಸಿಟಿವ್ ಮತ್ತು ಅರ್ತು ಪರೀಕ್ಷೆಯಿಂದ ಕನಿಷ್ಠ 7 ದಿನಗಳ ನಂತ್ರ ಸೌಮ್ಯ ಪ್ರಕರಣ ಡಿಸ್ಚಾರ್ಜ್, ಡಿಸ್ಚಾರ್ಜ್ʼಗೆ ಮೊದಲು ಪರೀಕ್ಷೆಯ ಅಗತ್ಯವಿಲ್ಲ.

ಎಲ್ಲಾಎಲ್ಲಾ ರೋಗಲಕ್ಷಣದ ಪ್ರಕರಣಗಳನ್ನ ಪರೀಕ್ಷಿಸಬೇಕಾಗಿದೆ. ರೋಗಲಕ್ಷಣವಿಲ್ಲದ ಪ್ರಕರಣಗಳು ಹೆಚ್ಚಿನ ಅಪಾಯದಲ್ಲಿರದ ಹೊರತು ಪರೀಕ್ಷಿಸಲ್ಪಡುವ ಅಗತ್ಯವಿಲ್ಲ. ಮಾರ್ಗಸೂಚಿಗಳ ಪ್ರಕಾರ, 7 ದಿನಗಳ ಕಾಲ ಎಲ್ಲಾ ಸಂಪರ್ಕಗಳಿಗೆ ಹೋಮ್ ಕ್ವಾರಂಟೈನ್ ಕಡ್ಡಾಯ ಎಂದು ಡಿಜಿ, ಐಸಿಎಂಆರ್ ಡಾ. ಬಲರಾಮ್ ಭಾರ್ಗವ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು