8:55 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಪದ್ಯದ ಜತೆಗೆ ಗದ್ಯ ರಚನೆ ಬಗ್ಗೆಯು ಒಲವು ಮೂಡಿಸಿಕೊಳ್ಳಬೇಕು : ಡಾ.ಬಿ.ಎ.ವಿವೇಕ ರೈ

12/01/2022, 22:39

ಮಂಗಳೂರು (ReporterKarnataka.com)

ಕರಾವಳಿ ಲೇಖಕಿಯರ ಹಾಗೂ ವಾಚಕಿಯರ ಸಂಘ ಹಾಗೂ ಪಾದುವ ಪದವಿಪೂರ್ವ ಕಾಲೇಜ್‌ನ ಸಹಯೋಗದಲ್ಲಿ ತೌಳವ ಸಿರಿ ಪ್ರಶಸ್ತಿ, ಸಾರಾ ದತ್ತಿ ಪ್ರಶಸ್ತಿ ಹಾಗೂ ಚಂದ್ರಭಾಗಿ ರೈ ದತ್ತಿ ಬಹುಮಾನ ಪ್ರದಾನ ಕಾರ್ಯಕ್ರಮ ಪಾದುವ ಪದವಿಪೂರ್ವ ಕಾಲೇಜ್ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ.ಬಿ.ಎ.ವಿವೇಕ ರೈ ಮಾತನಾಡಿ, ಕರಾವಳಿಯ ಅನೇಕರು ಕವನವನ್ನು ಬರೆಯುತ್ತಿದ್ದಾರೆ, ಕೇವಲ ಕವನಗಳಿಗೆ ಸೀಮಿತರಾಗಬಾರದು ಪದ್ಯಗಳ ಜತೆಗೆ ಗದ್ಯ ರಚನೆಯನ್ನೂ ರೂಢಿಸಿಕೊಳ್ಳಬೇಕು, ಪದ್ಯವನ್ನು ಬರೆದಾಗ ಅದನ್ನು ಹಾಡಿದಾಗ ಅವುಗಳಿಗೆ ಲೈಕು ಬಂದಾಗ ಬರಿ ಅದಕಷ್ಟೆ ಮಾರು ಹೋಗಬೇಡಿ ಎಂದು ಕಿವಿ ಮಾತು ಹೇಳಿದರು.
ಜತೆಗೆ ಅಧ್ಯಯನ ಕೂಡ ಉತ್ತಮ ಕ್ಷೇತ್ರವಾಗಿದ್ದು ಯುವ ಜನತೆ ಇದರ ಬಗ್ಗೆ ಗಮನ ಹರಿಸಬೇಕು ಸಂಶೋಧನೆಗೆ ಯಾವುದೆ ಪದವಿ ಪಿಎಚ್‌ಡಿ ಮುಖ್ಯವಲ್ಲ ಸುತ್ತಮುತ್ತಲಿನ ಕೇಂದ್ರಗಳ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಿ ಬರೆದು ಅಧ್ಯಯನ ಮಾಡಬಹುದು ಎಂದರು.

ಹಿರಿಯ ಸಂಶೋಧಕಿ ಡಾ.ಇಂದಿರಾ ಹೆಗ್ಗಡೆಯವರಿಗೆ ತೌಳವ ಸಿರಿ ಪ್ರಶಸ್ತಿ, ಸ್ನೇಹದೀಪದ ಸಂಚಾಲಕಿ ತಬಸ್ಸುಮ್ ಅವರಿಗೆ ಸಾರಾ ದತ್ತಿ ಪ್ರಶಸ್ತಿ ಹಾಗೂ ನಿರ್ಮಲಾ ಸುರತ್ಕಲ್ ಅವರಿಗೆ ಚಂದ್ರಭಾಗಿ ರೈ ದತ್ತಿ ಬಹುಮಾನವನ್ನು ಪ್ರದಾನ ಮಾಡಲಾಯಿತು.

ಪಾದುವಾ ಪದವಿಪೂರ್ವ ಕಾಲೇಜ್ ಪ್ರಾಂಶುಪಾಲರಾದ ಗ್ಲಾಡಿಸ್ ಅಲೋಸಿಯಸ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಧ್ಯಾಪಕರಾದ ಡಾ.ಸಕೀನಾ ನಾಸೆರ್ ಉಪಸ್ಥಿತರಿದ್ದರು. ಹಿರಿಯ ಲೇಖಕಿ ರೂಪಕಲಾ ಆಳ್ವ ತೀರ್ಪುಗಾರರ ಅನಿಸಿಕೆಯನ್ನು ಹಂಚಿಕೊಂಡರು.

ಡಾ.ಜ್ಯೋತಿ ಚೇಳ್ಯಾರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಸಂಘದ ಉಪಾಧ್ಯಕ್ಷರಾದ ವಿಜಯಲಕ್ಷ್ಮೀ ಬಿ.ಶೆಟ್ಟಿ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಡಾ.ಪ್ರವೀಣ ರೈ ಕುಕ್ಕುವಳ್ಳಿ ನಿರೂಪಿಸಿದರು. ಸಂಘದ ಕೋಶಾಧಿಕಾರಿ ಶರ್ಮಿಳಾ ಶೆಟ್ಟಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು