2:05 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಪದ್ಯದ ಜತೆಗೆ ಗದ್ಯ ರಚನೆ ಬಗ್ಗೆಯು ಒಲವು ಮೂಡಿಸಿಕೊಳ್ಳಬೇಕು : ಡಾ.ಬಿ.ಎ.ವಿವೇಕ ರೈ

12/01/2022, 22:39

ಮಂಗಳೂರು (ReporterKarnataka.com)

ಕರಾವಳಿ ಲೇಖಕಿಯರ ಹಾಗೂ ವಾಚಕಿಯರ ಸಂಘ ಹಾಗೂ ಪಾದುವ ಪದವಿಪೂರ್ವ ಕಾಲೇಜ್‌ನ ಸಹಯೋಗದಲ್ಲಿ ತೌಳವ ಸಿರಿ ಪ್ರಶಸ್ತಿ, ಸಾರಾ ದತ್ತಿ ಪ್ರಶಸ್ತಿ ಹಾಗೂ ಚಂದ್ರಭಾಗಿ ರೈ ದತ್ತಿ ಬಹುಮಾನ ಪ್ರದಾನ ಕಾರ್ಯಕ್ರಮ ಪಾದುವ ಪದವಿಪೂರ್ವ ಕಾಲೇಜ್ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ.ಬಿ.ಎ.ವಿವೇಕ ರೈ ಮಾತನಾಡಿ, ಕರಾವಳಿಯ ಅನೇಕರು ಕವನವನ್ನು ಬರೆಯುತ್ತಿದ್ದಾರೆ, ಕೇವಲ ಕವನಗಳಿಗೆ ಸೀಮಿತರಾಗಬಾರದು ಪದ್ಯಗಳ ಜತೆಗೆ ಗದ್ಯ ರಚನೆಯನ್ನೂ ರೂಢಿಸಿಕೊಳ್ಳಬೇಕು, ಪದ್ಯವನ್ನು ಬರೆದಾಗ ಅದನ್ನು ಹಾಡಿದಾಗ ಅವುಗಳಿಗೆ ಲೈಕು ಬಂದಾಗ ಬರಿ ಅದಕಷ್ಟೆ ಮಾರು ಹೋಗಬೇಡಿ ಎಂದು ಕಿವಿ ಮಾತು ಹೇಳಿದರು.
ಜತೆಗೆ ಅಧ್ಯಯನ ಕೂಡ ಉತ್ತಮ ಕ್ಷೇತ್ರವಾಗಿದ್ದು ಯುವ ಜನತೆ ಇದರ ಬಗ್ಗೆ ಗಮನ ಹರಿಸಬೇಕು ಸಂಶೋಧನೆಗೆ ಯಾವುದೆ ಪದವಿ ಪಿಎಚ್‌ಡಿ ಮುಖ್ಯವಲ್ಲ ಸುತ್ತಮುತ್ತಲಿನ ಕೇಂದ್ರಗಳ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಿ ಬರೆದು ಅಧ್ಯಯನ ಮಾಡಬಹುದು ಎಂದರು.

ಹಿರಿಯ ಸಂಶೋಧಕಿ ಡಾ.ಇಂದಿರಾ ಹೆಗ್ಗಡೆಯವರಿಗೆ ತೌಳವ ಸಿರಿ ಪ್ರಶಸ್ತಿ, ಸ್ನೇಹದೀಪದ ಸಂಚಾಲಕಿ ತಬಸ್ಸುಮ್ ಅವರಿಗೆ ಸಾರಾ ದತ್ತಿ ಪ್ರಶಸ್ತಿ ಹಾಗೂ ನಿರ್ಮಲಾ ಸುರತ್ಕಲ್ ಅವರಿಗೆ ಚಂದ್ರಭಾಗಿ ರೈ ದತ್ತಿ ಬಹುಮಾನವನ್ನು ಪ್ರದಾನ ಮಾಡಲಾಯಿತು.

ಪಾದುವಾ ಪದವಿಪೂರ್ವ ಕಾಲೇಜ್ ಪ್ರಾಂಶುಪಾಲರಾದ ಗ್ಲಾಡಿಸ್ ಅಲೋಸಿಯಸ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಧ್ಯಾಪಕರಾದ ಡಾ.ಸಕೀನಾ ನಾಸೆರ್ ಉಪಸ್ಥಿತರಿದ್ದರು. ಹಿರಿಯ ಲೇಖಕಿ ರೂಪಕಲಾ ಆಳ್ವ ತೀರ್ಪುಗಾರರ ಅನಿಸಿಕೆಯನ್ನು ಹಂಚಿಕೊಂಡರು.

ಡಾ.ಜ್ಯೋತಿ ಚೇಳ್ಯಾರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಸಂಘದ ಉಪಾಧ್ಯಕ್ಷರಾದ ವಿಜಯಲಕ್ಷ್ಮೀ ಬಿ.ಶೆಟ್ಟಿ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಡಾ.ಪ್ರವೀಣ ರೈ ಕುಕ್ಕುವಳ್ಳಿ ನಿರೂಪಿಸಿದರು. ಸಂಘದ ಕೋಶಾಧಿಕಾರಿ ಶರ್ಮಿಳಾ ಶೆಟ್ಟಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು