1:35 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ನಮಗೆ ಬೇಕಾದ ವಸ್ತುಗಳನ್ನು ನಾವೇ ಉತ್ಪಾದಿಸಿ ಬಳಸುವಂತಾಗಬೇಕು: ಸಚಿವ ವಿ. ಸುನಿಲ್ ಕುಮಾರ್ 

14/01/2022, 18:20

ಕಾರ್ಕಳ(reporterkarnataka.com):  ನಮಗೆ ಬೇಕಾದ ವಸ್ತುಗಳನ್ನು ನಾವೇ ಉತ್ಪಾದಿಸಿ ಬಳಸುವಂತಾಗಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.

ನಿಟ್ಟೆ ಕಾಲೇಜು ಸಭಾಂಗಣದಲ್ಲಿ ನಡೆದ ಭಾರತ ಸರ್ಕಾರದ ಎಸ್ ಎಫ್ ಯು ಆರ್ ಟಿ ಐ ಸ್ಟೀಮ್ ನಿಂದ ಪ್ರಾಯೋಜಿತ ಹಲಸಿನ ಹಣ್ಣಿನ ಸಂಸ್ಕರಣ ಕ್ಲಸ್ಟರ್ ಶಂಕುಸ್ಥಾಪನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಸಚಿವರು, ಪ್ರಧಾನಿ ಮೋದಿಯವರ ಆತ್ಮನಿರ್ಭರ ಭಾರತದ ಕಲ್ಪನೆಯಡಿಯಲ್ಲಿ ದೇಶಾದ್ಯಂತ ಹತ್ತಾರು ಪ್ರಯೋಗಗಳು ನಡೆಯುತ್ತಿವೆ. ಒಂದು ತಾಲೂಕು ಒಂದು ಉತ್ಪನ್ನ  ಯೋಜನೆಯನ್ನು  ಕಾರ‍್ಯರೂಪಕ್ಕೆ ತರಲಾಗುತ್ತಿದ್ದು ,ಗ್ರಾಮೀಣ ಉತ್ಪನ್ನಗಳಿಗೆ ಮಹತ್ವ ನೀಡಲಾಗುತ್ತಿದೆ. ಎಂದರು.

ಹಲಸಿನ ಹಣ್ಣಿನ ಸಂಸ್ಕರಣ ಕ್ಲಸ್ಟರ್ ಘಟಕದ   ಶಂಕುಸ್ಥಾಪನೆ ನೆರವೇರಿಸಿ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ ವಿನಯ್ ಹೆಗ್ಡೆ ಮಾತನಾಡಿ, ನಿಟ್ಟೆಯಲ್ಲಿ ಅಭಿವೃದ್ದಿಯ ಕ್ರಾಂತಿಯಾಗಿ, ಸ್ಥಳೀಯರಿಗೆ ಉದ್ಯೋಗವಾಕಾಶ ನೀಡುವ ಮೂಲಕ ಅಭಿವೃದ್ದಿ ಪಥದತ್ತ ಸಾಗಲಿ ಎಂದು ಶುಭ ಹಾರೈಸಿದರು.

ಎಐಸಿ ನಿಟ್ಟೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಎ. ಪಿ. ಆಚಾರ್ ಕಂಪೆನಿಯ ಮಹತ್ವವನ್ನು ವಿವರಿಸಿದರು.

ಸಭೆಯಲ್ಲಿ ನಿಟ್ಟೆ ಗ್ರಾಮ ಪಂಚಾಯತ್ ಅಧ್ಯಕ್ಷ  ಸತೀಶ್ ಎನ್ ಸಾಲಿಯಾನ್, ಸುಫಲ ಫಾರ್ಮರ್ ಪ್ರೋಡ್ಯೂಸರ್ ಕಂಪನಿ ಅಧ್ಯಕ್ಷ ನಾರಾಯಣ ಟಿ ಪೂಜಾರಿ, ಸುಫಲ ಫಾರ್ಮಸ್  ಪ್ರೊಡ್ಯೂಸರ್ ಕಂಪನಿ(ನಿ) ಆಡಳಿತ ನಿರ್ದೇಶಕರಾದ ನವೀನ್ ನಾಯಕ್  ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು