9:43 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಹಾಸ್ಟೆಲ್ ಮಕ್ಕಳ ಪಾಲಕರ ಜತೆ ಕಳುಹಿಸಲು ನಿರಾಕರಣೆ: ಎಕ್ಸ್ ಪರ್ಟ್ ಕಾಲೇಜು ಮುಖ್ಯಸ್ಥ ಡಾ. ನರೇಂದ್ರ ನಾಯಕ್ ವಿರುದ್ಧ ಪ್ರಕರಣ ದಾಖಲು

30/04/2021, 13:33

 

ಮಂಗಳೂರು(reporterkarnataka news): ನಗರದ ಹೊರವಲಯ ವಳಚ್ಚಿಲ್ ನಲ್ಲಿರುವ ಎಕ್ಸ್‌ಪರ್ಟ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಊರಿಗೆ ತೆರಳಲು ಅವಕಾಶ ನೀಡದೆ, ವಿದ್ಯಾರ್ಥಿಗಳ ಪಾಲಕರು ಕಾಲೇಜು ಎದುರು ಜಮಾಯಿಸಲು ಕಾರಣರಾದ ಸಂಸ್ಥೆಯ ಮುಖ್ಯಸ್ಥ ಡಾ. ನರೇಂದ್ರ ನಾಯಕ್ ಹಾಗೂ ಆಡಳಿತ ಸಮಿತಿಯ ವಿರುದ್ಧ ರಾಜ್ಯ ಸರಕಾರ ಹಾಗೂ ಜಿಲ್ಲಾಧಿಕಾರಿಯವರ ಆದೇಶ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರು ಗ್ರಾಮಾಂತರ ಠಾಣೆಯ ಪಿಎಸ್ ಐ ಮಂಜುಳಾ ಪಿ. ಅವರು ತಮ್ಮ ಸಿಬ್ಬಂದಿಗಳ ಜತೆ ಏಪ್ರಿಲ್ 29ರಂದು ರೌಂಡ್ಸ್ ಹೊರಟಾಗಿ ವಳಚ್ಚಿಲ್ ಎಕ್ಸ್ ಪರ್ಟ್ ಕಾಲೇಜು ಎದುರು ಸುಮಾರು 20- 30 ಜನರು ಸೇರಿದ್ದರು. ಲಾಕ್ ಡೌನ್ ಅವಧಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಜನರ ಗುಂಪುಗೂಡುವುದು ಕಾನೂನಿಗೆ ವಿರುದ್ಧವಾಗಿರುವುದರಿಂದ ಪಿಎಸ್ ಐ ಮಂಜುಳಾ ಅವರು ಈ ಕುರಿತು ಗುಂಪು ಸೇರಿದವರಲ್ಲಿ ವಿಚಾರಿಸಿದ್ದರು. ಆಗ ನೆರೆದ ಜನರು, ನಮ್ಮ ಮಕ್ಕಳು ಹಾಸ್ಟೆಲ್ ನಲ್ಲಿದ್ದುಕೊಂಡು ಎಕ್ಸ್‌ಪರ್ಟ್ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಲಾಕ್ ಡೌನ್ ಇರುವುದರಿಂದ ನಾವು ಮಕ್ಕಳನ್ನು ನಮ್ಮ ಜತೆ ಊರಿಗೆ ಕರೆದುಕೊಂಡು ಹೋಗಲು ಬಂದಿದ್ದೇವೆ. ಆದರೆ ಸಂಸ್ಥೆಯ ಮುಖ್ಯಸ್ಥರಾದ ಡಾ. ನರೇಂದ್ರ ನಾಯಕ್ ಅವರು ನಮ್ಮ ಮಕ್ಕಳನ್ನು ನಮ್ಮ ಜತೆ ಕಳುಹಿಸುತ್ತಿಲ್ಲ. ನಾವು ಏನು ಮಾಡುವುದು ಎಂದು ತಿಳಿಯದೆ ಇಲ್ಲಿ ನಿಂತಿದ್ದೇವೆ ಎಂದು ಉತ್ತರಿಸಿದ್ದರು. ಮಂಗಳೂರು ಗ್ರಾಮಾಂತರ ಠಾಣೆಯ ಪಿಎಸ್ ಐ ಅವರು ಈ ಕುರಿತು ವೀಡಿಯೊ ಚಿತ್ರೀಕರಣ ಕೂಡ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರಕಾರ ಹಾಗೂ ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿದ ಎಕ್ಸ್‌ಪರ್ಟ್ ಸಂಸ್ಥೆಯ ಡಾ. ನರೇಂದ್ರ ನಾಯಕ್ ಹಾಗೂ ಆಡಳಿತ ಸಮಿತಿಯ ವಿರುದ್ದ ಕರ್ನಾಟಕ ಎಪಿಡಮಿಕ್ ಡಿಸಿಸ್ ಕಾಯಿದೆ 2020ರ ಕಲಂ 5(1), 5(4)ರ ಪ್ರಕಾರ ಪ್ರಕರಣ ದಾಖಲಿಸಲಾಗುವುದು ಎಂದು ಪಿಎಸ್ ಐ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು