2:12 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ವಿವೇಕ ಸಪ್ತಾಹ: ಮಂಗಳೂರಿನಲ್ಲಿ ಮಾದಕ ದ್ರವ್ಯದ ಬಗ್ಗೆ ಅರಿವು ಕಾರ್ಯಕ್ರಮ

15/01/2022, 01:16

ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯು ವಿವೇಕ ಸಪ್ತಾಹದ ಪ್ರಯುಕ್ತ ಮಾದಕ ದ್ರವ್ಯದ ಬಗ್ಗೆ ಅರಿವು ಕಾರ್ಯಕ್ರಮ ಶುಕ್ರವಾರ ಕೆನರಾ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.





ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಪೊಲೀಸ್ ಕಮಿಷನರ್
ಶಶಿಕುಮಾರ್ ನೆರವೇರಿಸಿ ದುಶ್ಚಟಗಳಿಗೆ ಬಲಿಯಾಗದಂತೆ ವಿದ್ಯಾರ್ಥಿ ಜೀವನವನ್ನು ಸರಿಯಾಗಿ ಬಳಸಿಕೊಳ್ಳಿ ಎಂದು ಮನದಟ್ಟು ಮಾಡಿದರು.

ಮುಖ್ಯ ಅತಿಥಿಯಾಗಿ, ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ ಮಾತನಾಡಿ ಮಾದಕ ದ್ರವ್ಯದ ವ್ಯಾಸನಿಗಳಾಗಿ ಮುಂದಿನ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ. ವಿವೇಕಾನಂದರು ರಾಷ್ಟ್ರದ ಶಕ್ತಿಯೇ ಯುವಕರು ಎಂದು ಅವರು ಹೇಳಿದ್ದರು.. ಅವರ ತತ್ವ ಆದರ್ಶಗಳನ್ನು ಮೈಗೂಡಿಸಿಗೊಂಡು ಮಾದಕ ವಸ್ತುಗಳ ದಾಸರಾಗದೆ ಉತ್ತಮ ಜೀವನವನ್ನು ರೂಪಿಸಿಕೊಳ್ಳಿ.ಎಂದು ಅವರು ಹೇಳಿದರು.

ಕೆನರಾ ಹೈಸ್ಕೂಲ್ ಅಸೋಶಿಯೇಷನ್ ಪರ್ಯಾಯ ಖಜಾಂಜಿ ಪುರುಷೋತ್ತಮ,ಕೆನರಾ ಕಾಲೇಜಿನ ರಾ. ಸೆ. ಯೋ ಯೋಜನಾಧಿಕಾರಿಗಳಾದ ಸೀಮಾ ಪ್ರಭು,ವಾಣಿ.ಯು.ಎಸ್ ಉಪಸ್ಥಿತರಿದ್ದರು.


ಸಮಾಪನ್ಮೂಲ ವ್ಯಕ್ತಿ ಯಾಗಿ, ಫಾದರ್ ಮುಲ್ಲರ್ ಆಸ್ಪತ್ರೆಯ ಮಾನಸಿಕ ವಿಭಾಗದ ಡಾ.ಅವಿನಾಶ್ ಜಾಯಿ ಮಾದಕ ದ್ರವ್ಯದ ವ್ಯಸನದಿಂದ ಅರೋಗ್ಯದ ಮೇಲಾಗುವ ದುಷ್ಪಾರಿಣಾಮದ ಬಗ್ಗೆ
ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.



ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಪ್ರೇಮಲತಾ.ವಿ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು